ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

ನವದೆಹಲಿ (ಮಾ.27): ದೇಶದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗುತ್ತೆ ಅನ್ನೋ ಸುದ್ದಿ ಹಬ್ಬಿದೆ. ಆದರೆ, ಕೇಂದ್ರ ಸರ್ಕಾರ ಈ ವದಂತಿಗಳನ್ನು ತಳ್ಳಿಹಾಕಿದೆ. ದೇಶದಲ್ಲಿ ಯಾವುದೇ ಕಾರಣಕ್ಕೂ ಲಾಕ್‌ಡೌನ್ ಇರುವುದಿಲ್ಲ, ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಸ್ಪಷ್ಟಪಡಿಸಿದೆ.

ಸದ್ಯಕ್ಕೆ ಲಾಕ್‌ಡೌನ್ ಮಾಡುವಂತಹ ಯಾವುದೇ ಪರಿಸ್ಥಿತಿ ದೇಶದಲ್ಲಿ ಇಲ್ಲ, ಹರಿದಾಡುತ್ತಿರುವ ಸುದ್ದಿಗಳು ಆಧಾರರಹಿತ ಎಂದು ಸರ್ಕಾರ ತಿಳಿಸಿದೆ.

ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಆಗಲಿದೆ ಎಂಬ ಸುದ್ದಿ ಜನರಲ್ಲಿ ಹೆಚ್ಚು ಗೊಂದಲ ಸೃಷ್ಟಿಸಿತ್ತು. ಪಶ್ಚಿಮ ಏಷ್ಯಾ ಯುದ್ಧದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನ ಎರಡೂ ಸದನಗಳಲ್ಲಿ ಇತ್ತೀಚೆಗೆ ಮಾತನಾಡಿದ್ದರು. ‘ಒಂದು ವೇಳೆ ಯುದ್ಧ ದೀರ್ಘಕಾಲ ಮುಂದುವರಿದರೆ, ದೇಶದ ಮೇಲೆ ದೊಡ್ಡ ಪರಿಣಾಮ ಬೀರಬಹುದು. ಆಗ ಲಾಕ್‌ಡೌನ್ ಸಮಯದಲ್ಲಿ ಇದ್ದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಈ ಸಂಕಷ್ಟವನ್ನು ಎದುರಿಸಬೇಕು’ ಎಂದು ಅವರು ಹೇಳಿದ್ದರು.

ಪ್ರಧಾನಿಯವರ ಈ ಹೇಳಿಕೆಯನ್ನೇ ಕೆಲವರು ತಪ್ಪಾಗಿ ಅರ್ಥೈಸಿಕೊಂಡು, ದೇಶದಲ್ಲಿ ಮತ್ತೊಂದು ಲಾಕ್‌ಡೌನ್‌ಗೆ ಸಿದ್ಧತೆ ನಡೆಯುತ್ತಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹಬ್ಬಿಸಿದ್ದರು. ಆದರೆ, ಕೇಂದ್ರ ಪೆಟ್ರೋಲಿಯಂ ಸಚಿವರು ಈ ಎಲ್ಲಾ ವದಂತಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ‘ದೇಶದಲ್ಲಿ ಯಾವುದೇ ರೀತಿಯ ಲಾಕ್‌ಡೌನ್ ಜಾರಿ ಮಾಡುವ ಯೋಚನೆ ಸದ್ಯಕ್ಕೆ ಸರ್ಕಾರಕ್ಕಿಲ್ಲ. ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಪೂರೈಕೆಯನ್ನು ಸರ್ಕಾರ ಖಚಿತಪಡಿಸುತ್ತಿದೆ. ಜನರು ಗಾಬರಿಯಾಗಿ ವಸ್ತುಗಳನ್ನು ಖರೀದಿಸುವುದು ಅಥವಾ ಸುಳ್ಳು ಸುದ್ದಿಗಳನ್ನು ನಂಬುವುದು ಬೇಡ. ಸದ್ಯಕ್ಕೆ ಅಂತಹ ಯಾವುದೇ ಆತಂಕಕಾರಿ ಪರಿಸ್ಥಿತಿ ಇಲ್ಲ’ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ

Spread the love
  • Related Posts

    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    ಚಿಕ್ಕಮಗಳೂರು: ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬ್ರೇಕ್ ಫೇಲ್ ಆದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.ಬಸ್ ಡಿಕ್ಕಿಯ ರಭಸಕ್ಕೆ ಕಾಂಪೌಂಡ್ ಗೋಡೆ ಸಂಪೂರ್ಣ ಪುಡಿಯಾಗಿದ್ದು, ಬಳಿಕ ಬಸ್ ಮರಕ್ಕೆ ಡಿಕ್ಕಿಯಾಗಿ ನಿಂತಿದೆ. ಘಟನೆಯಿಂದ ಬಸ್…

    Spread the love

    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ

    ಶೃಂಗೇರಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ (Postal Ballots) ಮರುಎಣಿಕೆ ಪ್ರಕ್ರಿಯೆ ಮತ್ತು ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಪ್ರಶ್ನಿಸಿ ಮಾಜಿ ಶಾಸಕ ಟಿ.ಡಿ. ರಾಜೇಗೌಡ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು ಇದೀಗ ಆ ಅರ್ಜಿ ವಿಚಾರಣೆ ನಡೆಸಿರುವ…

    Spread the love

    You Missed

    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    • By admin
    • May 11, 2026
    • 5 views
    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ

    • By admin
    • May 11, 2026
    • 40 views
    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ  ಮುಂದುವರಿಯಲು ಸುಪ್ರೀಂ ಸೂಚನೆ

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 24 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 105 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 44 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 126 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು