‘ಲವ್ ಜಿಹಾದ್’ ಕುರಿತು ಕರಡು ಕಾನೂನಿನಲ್ಲಿ ಬಲವಂತದ ಮತಾಂತರಕ್ಕೆ ಐದು ವರ್ಷ ಜೈಲು!

ಹೊಸದಿಲ್ಲಿ : ಬಲವಂತದ ಮತಾಂತರದ ನಡೆದಿದೆ ಎಂದು ಕಂಡು ಬಂದರೆ ಮದುವೆಯನ್ನು ರದ್ದುಗೊಳಿಸಲು ಉದ್ದೇಶಿತ ಕಾನೂನಿನ ಕರಡನ್ನು ಉತ್ತರ ಪ್ರದೇಶ ಸರಕಾರವು ಸಿದ್ಧಪಡಿಸಿದೆ.

ಕರಡು ‘ಅಕ್ರಮ ಮತಾಂತರ ನಿಷೇಧ ಮಸೂದೆ 2020’ಲವ್ ಜಿಹಾದ್ ಅಥವಾ ಬಿಜೆಪಿ ನಾಯಕರು ಆಗಾಗ್ಗೆ ಹೇಳುವಂತೆ ಪ್ರೇಮ ಮತ್ತು ವಿವಾಹದ ಸೋಗಿನಲ್ಲಿ ಹಿಂದು ಮಹಿಳೆಯರನ್ನು ಇಸ್ಲಾಮ್‌ಗೆ ಮತಾಂತರಗೊಳಿಸುವ ‘ಒಳಸಂಚ ’ನ್ನು ಮಟ್ಟಹಾಕುವ ಉದ್ದೇಶವನ್ನು ಹೊಂದಿದೆ. ಕೆಲವೇ ದಿನಗಳ ಹಿಂದೆ ಉತ್ತರ ಪ್ರದೇಶ ಮತ್ತು ಕನಿಷ್ಠ ಮೂರು ಇತರ ಬಿಜೆಪಿ ಆಡಳಿತದ ರಾಜ್ಯಗಳು ಲವ್‌ಜಿಹಾದ್ ವಿರುದ್ಧ ಕಾನೂನನ್ನು ತರುವ ಭರವಸೆಯನ್ನು ನೀಡಿದ್ದವು.

ಕರಡು ಕಾನೂನನ್ನು ರೂಪಿಸಿರುವ ರಾಜ್ಯದ ಗೃಹ ಇಲಾಖೆಯು ಅದನ್ನು ಕಾನೂನು ಇಲಾಖೆಗೆ ಸಲ್ಲಿಸಿದೆ. ನೂತನ ಮಸೂದೆಯು ಶೀಘ್ರವೇ ರಾಜ್ಯ ಸಂಪುಟದ ಮುಂದೆ ಮಂಡನೆಯಾಗಲಿದೆ ಎಂದು ಹೇಳಲಾಗಿದೆ.

ಮದುವೆಯ ಮೂಲಕ ಸೇರಿದಂತೆ ಬಲವಂತದ ಮತಾಂತರಕ್ಕೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 15,000 ರೂ.ದಂಡವನ್ನು ಕರಡು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಮಹಿಳೆಯೋರ್ವಳು ಮದುವೆಗೆಂದೇ ಮತಾಂತರಗೊಂಡಿದ್ದರೆ ಮತ್ತು ಯಾರಾದರೂ ಪೊಲೀಸರಿಗೆ ದೂರು ನೀಡಿದರೆ ತನಿಖೆ ನಡೆಸಬೇಕಾಗುತ್ತದೆ. ಕಪಟದಿಂದ ಮತಾಂತರಗೊಳಿಸಿರುವುದು ತನಿಖೆಯಲ್ಲಿ ಕಂಡು ಬಂದರೆ ಮದುವೆಯನ್ನು ರದ್ದುಗೊಳಿಸಲಾಗುತ್ತದೆ. ಸಾಮೂಹಿಕ ಮತಾಂತರಕ್ಕೆ 10 ವರ್ಷಗಳ ಜೈಲು ಶಿಕ್ಷೆಯನ್ನೂ ಕರಡು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಈ ಮಸೂದೆಯಡಿ ಮತಾಂತರ ಜಾಮೀನುರಹಿತ ಅಪರಾಧವಾಗಲಿದೆ.

ನೂತನ ಕಾನೂನಿನಲ್ಲಿ ‘ಲವ್ ಜಿಹಾದ್ ’ಶಬ್ದವಿಲ್ಲದಿರುವುದನ್ನು ಪ್ರಸ್ತಾಪಿಸಿದ ಮಿತ್ತಲ್, ಮಾಧ್ಯಮಗಳು,ಸಾಮಾಜಿಕ ಜಾಲತಾಣಗಳು ಮತ್ತು ರಾಜಕಾರಣಿಗಳಿಂದ ಮಾತ್ರ ಈ ಶಬ್ದ ಬಳಕೆಯಾಗುತ್ತಿದೆ. ನೂತನ ಮಸೂದೆಯು ‘ಹಿಂದು-ಮುಸ್ಲಿಂ’ನೆಲೆಯಲ್ಲಿ ಮಾತ್ರ ಧಾರ್ಮಿಕ ಮತಾಂತರಗಳನ್ನು ಪರಿಗಣಿಸುವುದಿಲ್ಲ,ಅದು ಎಲ್ಲ ಧರ್ಮಗಳಿಗೂ ಅನ್ವಯವಾಗಲಿದೆ ಎಂದು ವಿವರಿಸಿದರು.

ಉದ್ದೇಶಿತ ಕಾನೂನಿನಲ್ಲಿ ಅಂತರ್ ಧರ್ಮೀಯ ವಿವಾಹಗಳಿಗೆ ನಿರ್ಬಂಧವಿಲ್ಲ. ಬಲವಂತದ, ಆಮಿಷವೊಡ್ಡುವ ಅಥವಾ ಮದುವೆಗಳ ಮೂಲಕ ಮತಾಂತರವನ್ನು ಅಪರಾಧವನ್ನಾಗಿಸುವುದು ಮಾತ್ರ ಕಾನೂನಿನ ಉದ್ದೇಶವಾಗಿದೆ. ಈ ಕಾನೂನಿನಡಿ ಧಾರ್ಮಿಕ ಮತಾಂತರಕ್ಕೆ ಅವಕಾಶವಿದೆ,ಆದರೆ ಬಲವಂತದ ಅಥವಾ ಆಮಿಷದ ಮೂಲಕ ಮತಾಂತರಕ್ಕೆ ಅವಕಾಶವಿಲ್ಲ ಎಂದು ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಉತ್ತರ ಪ್ರದೇಶ ಕಾನೂನು ಆಯೋಗದ ಮುಖ್ಯಸ್ಥ ನ್ಯಾ. ಆದಿತ್ಯ ಮಿತ್ತಲ್ ತಿಳಿಸಿದರು.

Spread the love
  • Related Posts

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಮುಖ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರಿಗೆ ಇಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಮನವಿ…

    Spread the love

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    You Missed

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 0 views

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 3 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 8 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 7 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 12 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 9 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.