‘ಲವ್ ಜಿಹಾದ್’ ಕುರಿತು ಕರಡು ಕಾನೂನಿನಲ್ಲಿ ಬಲವಂತದ ಮತಾಂತರಕ್ಕೆ ಐದು ವರ್ಷ ಜೈಲು!

ಹೊಸದಿಲ್ಲಿ : ಬಲವಂತದ ಮತಾಂತರದ ನಡೆದಿದೆ ಎಂದು ಕಂಡು ಬಂದರೆ ಮದುವೆಯನ್ನು ರದ್ದುಗೊಳಿಸಲು ಉದ್ದೇಶಿತ ಕಾನೂನಿನ ಕರಡನ್ನು ಉತ್ತರ ಪ್ರದೇಶ ಸರಕಾರವು ಸಿದ್ಧಪಡಿಸಿದೆ.

ಕರಡು ‘ಅಕ್ರಮ ಮತಾಂತರ ನಿಷೇಧ ಮಸೂದೆ 2020’ಲವ್ ಜಿಹಾದ್ ಅಥವಾ ಬಿಜೆಪಿ ನಾಯಕರು ಆಗಾಗ್ಗೆ ಹೇಳುವಂತೆ ಪ್ರೇಮ ಮತ್ತು ವಿವಾಹದ ಸೋಗಿನಲ್ಲಿ ಹಿಂದು ಮಹಿಳೆಯರನ್ನು ಇಸ್ಲಾಮ್‌ಗೆ ಮತಾಂತರಗೊಳಿಸುವ ‘ಒಳಸಂಚ ’ನ್ನು ಮಟ್ಟಹಾಕುವ ಉದ್ದೇಶವನ್ನು ಹೊಂದಿದೆ. ಕೆಲವೇ ದಿನಗಳ ಹಿಂದೆ ಉತ್ತರ ಪ್ರದೇಶ ಮತ್ತು ಕನಿಷ್ಠ ಮೂರು ಇತರ ಬಿಜೆಪಿ ಆಡಳಿತದ ರಾಜ್ಯಗಳು ಲವ್‌ಜಿಹಾದ್ ವಿರುದ್ಧ ಕಾನೂನನ್ನು ತರುವ ಭರವಸೆಯನ್ನು ನೀಡಿದ್ದವು.

ಕರಡು ಕಾನೂನನ್ನು ರೂಪಿಸಿರುವ ರಾಜ್ಯದ ಗೃಹ ಇಲಾಖೆಯು ಅದನ್ನು ಕಾನೂನು ಇಲಾಖೆಗೆ ಸಲ್ಲಿಸಿದೆ. ನೂತನ ಮಸೂದೆಯು ಶೀಘ್ರವೇ ರಾಜ್ಯ ಸಂಪುಟದ ಮುಂದೆ ಮಂಡನೆಯಾಗಲಿದೆ ಎಂದು ಹೇಳಲಾಗಿದೆ.

ಮದುವೆಯ ಮೂಲಕ ಸೇರಿದಂತೆ ಬಲವಂತದ ಮತಾಂತರಕ್ಕೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 15,000 ರೂ.ದಂಡವನ್ನು ಕರಡು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಮಹಿಳೆಯೋರ್ವಳು ಮದುವೆಗೆಂದೇ ಮತಾಂತರಗೊಂಡಿದ್ದರೆ ಮತ್ತು ಯಾರಾದರೂ ಪೊಲೀಸರಿಗೆ ದೂರು ನೀಡಿದರೆ ತನಿಖೆ ನಡೆಸಬೇಕಾಗುತ್ತದೆ. ಕಪಟದಿಂದ ಮತಾಂತರಗೊಳಿಸಿರುವುದು ತನಿಖೆಯಲ್ಲಿ ಕಂಡು ಬಂದರೆ ಮದುವೆಯನ್ನು ರದ್ದುಗೊಳಿಸಲಾಗುತ್ತದೆ. ಸಾಮೂಹಿಕ ಮತಾಂತರಕ್ಕೆ 10 ವರ್ಷಗಳ ಜೈಲು ಶಿಕ್ಷೆಯನ್ನೂ ಕರಡು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಈ ಮಸೂದೆಯಡಿ ಮತಾಂತರ ಜಾಮೀನುರಹಿತ ಅಪರಾಧವಾಗಲಿದೆ.

ನೂತನ ಕಾನೂನಿನಲ್ಲಿ ‘ಲವ್ ಜಿಹಾದ್ ’ಶಬ್ದವಿಲ್ಲದಿರುವುದನ್ನು ಪ್ರಸ್ತಾಪಿಸಿದ ಮಿತ್ತಲ್, ಮಾಧ್ಯಮಗಳು,ಸಾಮಾಜಿಕ ಜಾಲತಾಣಗಳು ಮತ್ತು ರಾಜಕಾರಣಿಗಳಿಂದ ಮಾತ್ರ ಈ ಶಬ್ದ ಬಳಕೆಯಾಗುತ್ತಿದೆ. ನೂತನ ಮಸೂದೆಯು ‘ಹಿಂದು-ಮುಸ್ಲಿಂ’ನೆಲೆಯಲ್ಲಿ ಮಾತ್ರ ಧಾರ್ಮಿಕ ಮತಾಂತರಗಳನ್ನು ಪರಿಗಣಿಸುವುದಿಲ್ಲ,ಅದು ಎಲ್ಲ ಧರ್ಮಗಳಿಗೂ ಅನ್ವಯವಾಗಲಿದೆ ಎಂದು ವಿವರಿಸಿದರು.

ಉದ್ದೇಶಿತ ಕಾನೂನಿನಲ್ಲಿ ಅಂತರ್ ಧರ್ಮೀಯ ವಿವಾಹಗಳಿಗೆ ನಿರ್ಬಂಧವಿಲ್ಲ. ಬಲವಂತದ, ಆಮಿಷವೊಡ್ಡುವ ಅಥವಾ ಮದುವೆಗಳ ಮೂಲಕ ಮತಾಂತರವನ್ನು ಅಪರಾಧವನ್ನಾಗಿಸುವುದು ಮಾತ್ರ ಕಾನೂನಿನ ಉದ್ದೇಶವಾಗಿದೆ. ಈ ಕಾನೂನಿನಡಿ ಧಾರ್ಮಿಕ ಮತಾಂತರಕ್ಕೆ ಅವಕಾಶವಿದೆ,ಆದರೆ ಬಲವಂತದ ಅಥವಾ ಆಮಿಷದ ಮೂಲಕ ಮತಾಂತರಕ್ಕೆ ಅವಕಾಶವಿಲ್ಲ ಎಂದು ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಉತ್ತರ ಪ್ರದೇಶ ಕಾನೂನು ಆಯೋಗದ ಮುಖ್ಯಸ್ಥ ನ್ಯಾ. ಆದಿತ್ಯ ಮಿತ್ತಲ್ ತಿಳಿಸಿದರು.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 5 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 17 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 14 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು