ಲಾಕ್‌ಡೌನ್ ವೇಳೆ ಸೀಜ್ ಮಾಡಿದ್ದ ವಾಹನಗಳ ರಿಲೀಸ್ ಮಾಡಲು ಹೈಕೋರ್ಟ್ ಆದೇಶ!

ಬೆಂಗಳೂರು: ಕೊರೊನಾ ಸೋಂಕನ್ನು ಲಾಕ್​ ಮಾಡಲು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಲಾಕ್‌ಡೌನ್ ಮಾರ್ಗಸೂಚಿಯನ್ನು ಉಲ್ಲಂಘಿಸಿ ಪೊಲೀಸರು ಸೀಜ್ ಮಾಡಿದ್ದ ವಾಹನಗಳನ್ನು ರಿಲೀಸ್ ಮಾಡುವಂತೆ ಹೈಕೋರ್ಟ್ ಸೂಚಿಸಿದೆ. ಆದರೆ ನಿಯಮ ಉಲ್ಲಂಘಿಸಿದ ವಾಹನ ಸವಾರರಿಂದ ದಂಡ ಕಟ್ಟಿಸಿಕೊಂಡು ಬಿಡುವಂತೆ ಹೈಕೋರ್ಟ್ ಸೂಚಿಸಿದೆ. ವಾಹನ ಸವಾರರು ವಾಹನ ರಿಲೀಸ್‌ ಮಾಡಿಸಿಕೊಳ್ಳಲು ಕೋರ್ಟ್‌ಗೆ ಓಡಾಡುವ ಅಗತ್ಯವಿಲ್ಲ. ಪೊಲೀಸರಿಗೇ ವಾಹನ ರಿಲೀಸ್ ಮಾಡುವ ಅಧಿಕಾರವನ್ನೂ ಹೈಕೋರ್ಟ್ ನೀಡಿದೆ.

ಕೊರೊನಾ ಸೋಂಕನ್ನು ನಿಯಂತ್ರಿಸಲು ಜಾರಿಯಲ್ಲಿದ್ದ ಲಾಕ್‌ಡೌನ್ ವೇಳೆ ನಿಯಮ ಉಲ್ಲಂಘಿಸಿದವರಿಂದ ಪೊಲೀಸರು ಲಕ್ಷಾಂತರ ವಾಹನಗಳನ್ನು ಸೀಜ್ ಮಾಡಿದ್ದರು. ಇದರಿಂದ ಠಾಣೆಗಳ ಆವರಣದಲ್ಲಿ ವಾಹನ ನಿಲುಗಡೆಗೆ ಸ್ಥಳವಿಲ್ಲದೇ ಸಮಸ್ಯೆಯಾಗಿತ್ತು. ಈ ಬಗ್ಗೆ ಸೂಕ್ತ ನಿರ್ದೇಶನ ಕೋರಿ ರಾಜ್ಯ ಸರ್ಕಾರ ಕೋರ್ಟ್​ ಮೊರೆ ಹೋಗಿತ್ತು.

ರಾಜ್ಯದಲ್ಲಿ ವಶಪಡಿಸಿಕೊಂಡಿದ್ದ ಅಷ್ಟೂ ವಾಹನಗಳನ್ನು ರಿಲೀಸ್​ ಮಾಡಿ ಎಂಬ ಸೂಚನೆ ನೀಡಿದೆ.

ಕೊರೊನಾ ಸೋಂಕನ್ನು ನಿಯಂತ್ರಿಸಲು ಜಾರಿಯಲ್ಲಿದ್ದ ಲಾಕ್‌ಡೌನ್ ವೇಳೆ ನಿಯಮ ಉಲ್ಲಂಘಿಸಿದವರಿಂದ ಪೊಲೀಸರು ಲಕ್ಷಾಂತರ ವಾಹನಗಳನ್ನು ಸೀಜ್ ಮಾಡಿದ್ದರು. ಇದರಿಂದ ಠಾಣೆಗಳ ಆವರಣದಲ್ಲಿ ವಾಹನ ನಿಲುಗಡೆಗೆ ಸ್ಥಳವಿಲ್ಲದೇ ಸಮಸ್ಯೆಯಾಗಿತ್ತು. ಈ ಬಗ್ಗೆ ಸೂಕ್ತ ನಿರ್ದೇಶನ ಕೋರಿ ರಾಜ್ಯ ಸರ್ಕಾರ ಕೋರ್ಟ್​ ಮೊರೆ ಹೋಗಿತ್ತು. ಸರ್ಕಾರದಿಂದ ಅರ್ಜಿ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಹೈಕೋರ್ಟ್‌ ಇಂದು ಈ ಆದೇಶ ನೀಡಿದೆ.

ರಾಜ್ಯದಲ್ಲಿ ವಶಪಡಿಸಿಕೊಂಡಿದ್ದ ಅಷ್ಟೂ ವಾಹನಗಳನ್ನು ರಿಲೀಸ್​ ಮಾಡುವಂತೆ ಹೈಕೋರ್ಟ್​ ಸೂಚನೆ ನೀಡಿದೆ. ವಾಹನ ಮಾಲೀಕರು ಕೋರ್ಟ್​​ಗಳತ್ತ ಬಂದು ಜನಸಂದಣಿ ಆಗುವುದು ಬೇಡ. ಜನ ಜಮಾವಣೆಯಾದರೆ ಮತ್ತೆ ಕೊರೊನಾ ಸೋಂಕು ಹಬ್ಬಲು ಸಹಕಾರಿಯಾಗುತ್ತದೆ. ಹಾಗಾಗಿ ವಾಹನಗಳ ಮಾಲೀಕರಿಂದ ದಂಡ ಕಟ್ಟಿಸಿಕೊಂಡು, ಬಾಂಡ್​ ಬರೆಯಿಸಿಕೊಂಡು ಇಡೀ ರಾಜ್ಯದಲ್ಲಿ ಆಯಾ ಪೊಲೀಸ್​ ಠಾಣೆಗಳ ವ್ಯಾಪ್ತಿಯಲ್ಲೇ ಕೇಸುಗಳನ್ನು ಇತ್ಯರ್ಥ ಪಡಿಸುವ ಅಧಿಕಾರವನ್ನು ಪೊಲೀಸರಿಗೆ ನೀಡಲಾಗಿದೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    • By admin
    • January 10, 2026
    • 12 views
    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    • By admin
    • January 10, 2026
    • 49 views
    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 36 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ

    • By admin
    • January 5, 2026
    • 24 views
    ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ

    “ಪರೀಕ್ಷಾ ಸಿದ್ಧತೆ ಕಾರ್ಯಾಗಾರ ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮ

    • By admin
    • January 3, 2026
    • 33 views
    “ಪರೀಕ್ಷಾ ಸಿದ್ಧತೆ ಕಾರ್ಯಾಗಾರ ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 418 ಶಾಲೆಗಳಿಗೆ 2.50ಕೋಟಿ ವೆಚ್ಚದಲ್ಲಿ ಪಿಠೋಪಕರಣಗಳ ಒದಗಣೆ

    • By admin
    • January 1, 2026
    • 88 views
    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 418 ಶಾಲೆಗಳಿಗೆ 2.50ಕೋಟಿ ವೆಚ್ಚದಲ್ಲಿ ಪಿಠೋಪಕರಣಗಳ ಒದಗಣೆ