ಪೋಲೀಸ್ ಕಸ್ಟಡಿಯಲ್ಲಿ ಅಪ್ಪ-ಮಗನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 9ಪೋಲೀಸರಿಗೆ ಮರಣದಂಡನೆ ತೀರ್ಪು ವಿಧಿಸಿದ ಮದುರೈ ಕೋರ್ಟ್

ಚೆನ್ನೈ: ತಂದೆ ಹಾಗೂ ಮಗನಿಗೆ ಪೊಲೀಸ್‌ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಅವರ ಸಾವಿಗೆ (Custodial Torture Case) ಕಾರಣರಾಗಿದ್ದ ತಮಿಳುನಾಡಿನ (Tamil Nadu) 9 ಜನ ಪೊಲೀಸರಿಗೆ ಮಧುರೈ ಜಿಲ್ಲಾ ನ್ಯಾಯಾಲಯ (Madurai Court) ಮರಣದಂಡನೆ (Death Sentence) ವಿಧಿಸಿದೆ. ನ್ಯಾಯಾಧೀಶರು ಈ ಪ್ರಕರಣವನ್ನು ಅಪರೂಪದಲ್ಲಿ ಅಪರೂಪ ಎಂದು ಉಲ್ಲೇಖಿಸಿದ್ದಾರೆ.

2020ರ ಜೂನ್ 19 ರಂದು ಮೊಬೈಲ್ ಅಂಗಡಿ ನಡೆಸುತ್ತಿದ್ದ ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಲಾಕ್‌ಡೌನ್ ಸಮಯದಲ್ಲಿ ಅನುಮತಿ ನೀಡಿದ ಅವಧಿಗಿಂತಲೂ 45 ನಿಮಿಷ ಹೆಚ್ಚು ಸಮಯ ಅಂಗಡಿ ತೆರೆದಿದ್ದಕ್ಕೆ ಪೊಲೀಸರು (Police) ಬಂಧಿಸಿದ್ದರು. ನಂತರ ಇಬ್ಬರನ್ನೂ ಸಾಥನ್‌ಕುಲಂ ಪೊಲೀಸ್ ಠಾಣೆಗೆ ಕರೆತಂದು ರಾತ್ರಿಯಿಡೀ ಹಲ್ಲೆ ಮಾಡಿದ್ದರು. ಅಲ್ಲದೇ ತಮ್ಮ ರಕ್ತವನ್ನು ತಮ್ಮದೇ ಬಟ್ಟೆಗಳಿಂದ ನೆಲದಿಂದ ಒರೆಸುವಂತೆ ಒತ್ತಾಯಿಸಲಾಗಿತ್ತು

ಬಳಿಕ ಇಬ್ಬರನ್ನೂ ಜಡ್ಜ್‌ ಮುಂದೆ ಹಾಜರು ಪಡಿಸಲಾಗಿತ್ತು. ಆಗ ಕೋವಿಡ್‌ ಸಮಯ ಆಗಿದ್ದರಿಂದ ನ್ಯಾಯಾಧೀಶರಿಗೆ ಅವರ ಮೇಲಿನ ಹಲ್ಲೆ ನಡೆದಿದ್ದನ್ನು ಪರಿಶೀಲಿಸಲು ಸಾಧ್ಯವಾಗಿರಲಿಲ್ಲ. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಯಿತು. ಇದಾದ ಮೂರು ದಿನಗಳಲ್ಲಿ ಇಬ್ಬರೂ ಸಾವನ್ನಪ್ಪಿದ್ದರು. ಜಯರಾಜ್‌ಗೆ 17 ಗಾಯಗಳಾಗಿದ್ದವು. ಬೆನ್ನಿಕ್ಸ್‌ಗೆ 13 ಗಾಯಗಳಾಗಿದ್ದವು. ಗುದನಾಳದ ರಕ್ತಸ್ರಾವ ಸೇರಿದಂತೆ, ಮೈಮೇಲೆಲ್ಲ ಗಾಯಗಳಿದ್ದವು. ಅವರ ಸಾವು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು.

ಮದ್ರಾಸ್ ಹೈಕೋರ್ಟ್‌ನ ನಿರ್ದೇಶನದಂತೆ ಪ್ರಕರಣದ ತನಿಖೆ ಆರಂಭಿಸಿದ್ದ ಸಿಬಿಐ, 9 ಪೊಲೀಸರನ್ನು ಬಂಧಿಸಿತ್ತು. ಬಂಧಿತರಲ್ಲಿ ಒಬ್ಬ ಇನ್ಸ್‌ಪೆಕ್ಟರ್, ಇಬ್ಬರು ಸಬ್-ಇನ್‌ಸ್ಪೆಕ್ಟರ್‌ಗಳು, ಉಳಿದಂತೆ ಕಾನ್‌ಸ್ಟೆಬಲ್‌ಗಳು ಸೇರಿದ್ದಾರೆ. ಅವರ ವಿರುದ್ಧ ಕೊಲೆ ಆರೋಪ ಹೊರಿಸಲಾಯಿತು.

ತನಿಖೆಯ ಸಮಯದಲ್ಲಿ, ಮಹಿಳಾ ಕಾನ್‌ಸ್ಟೆಬಲ್‌ ಒಬ್ಬರು ತಂದೆ ಮತ್ತು ಮಗನ ಮೇಲೆ ರಾತ್ರೋರಾತ್ರಿ ಹಲ್ಲೆ ನಡೆಸಿದ್ದನ್ನು ಸಿಬಿಐ ಅಧಿಕಾರಿಗಳಿಗೆ ತಿಳಿಸಿದ್ದರು. ಠಾಣೆಯಲ್ಲಿ ಟೇಬಲ್‌ಗಳು ಮತ್ತು ಲಾಠಿಗಳಲ್ಲಿ ರಕ್ತದ ಕಲೆಗಳಿವೆ ಎಂದು ತೋರಿಸಿದ್ದರು. ಇದು ಪ್ರಕರಣದ ಪ್ರಮುಖ ಸಾಕ್ಷಿಯಾಗಿತ್ತು. ಅಲ್ಲದೇ ಸಿಸಿಟಿವಿಯಲ್ಲಿ ಸ್ವಯಂಚಾಲಿತವಾಗಿ ವಿಡಿಯೋ ಡಿಲೀಟ್‌ ಆಗಿದ್ದವು. ಇದರಿಂದ ಅಧಿಕಾರಿಗಳು ಕೆಲವು ಸವಾಲನ್ನು ಎದುರಿಸಿ ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿದ್ದರು.

Spread the love
  • Related Posts

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸೋಮಂತಡ್ಕ ಬಸ್ ನಿಲುಗಡೆ ವಿಚಾರದಲ್ಲಿ ಗಂಭೀರ ನಿರ್ಲಕ್ಷ್ಯದ ಘಟನೆ ಬೆಳಕಿಗೆ ಬಂದಿದೆ. ಸ್ಥಳದಲ್ಲೇ “ವೇಗದೂತ ಹಾಗೂ ಸಾಮಾನ್ಯ ಬಸ್ ನಿಲುಗಡೆ” ಎಂದು ಬೋರ್ಡ್ ಅಳವಡಿಸಿರುವುದರ ಜೊತೆಗೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದಲೂ ಅಧಿಕೃತ…

    Spread the love

    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ (ಏ17)ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.…

    Spread the love

    You Missed

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 8 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    • By admin
    • April 17, 2026
    • 22 views
    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    • By admin
    • April 14, 2026
    • 52 views
    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ

    • By admin
    • April 13, 2026
    • 31 views
    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ

    ಆಯತಪ್ಪಿ ರಾತ್ರಿ ಬಾವಿಗೆ ಬಿದ್ದ ಕಾಡಾನೆ ಪೆರಾಜೆ ಕಲ್ಲುಚರ್ಪೆಯಲ್ಲಿ ನಡೆದ ಘಟನೆ

    • By admin
    • April 13, 2026
    • 50 views
    ಆಯತಪ್ಪಿ ರಾತ್ರಿ ಬಾವಿಗೆ ಬಿದ್ದ ಕಾಡಾನೆ ಪೆರಾಜೆ  ಕಲ್ಲುಚರ್ಪೆಯಲ್ಲಿ ನಡೆದ ಘಟನೆ

    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    • By admin
    • April 12, 2026
    • 93 views
    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು