ಪೋಲೀಸ್ ಕಸ್ಟಡಿಯಲ್ಲಿ ಅಪ್ಪ-ಮಗನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 9ಪೋಲೀಸರಿಗೆ ಮರಣದಂಡನೆ ತೀರ್ಪು ವಿಧಿಸಿದ ಮದುರೈ ಕೋರ್ಟ್

ಚೆನ್ನೈ: ತಂದೆ ಹಾಗೂ ಮಗನಿಗೆ ಪೊಲೀಸ್‌ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಅವರ ಸಾವಿಗೆ (Custodial Torture Case) ಕಾರಣರಾಗಿದ್ದ ತಮಿಳುನಾಡಿನ (Tamil Nadu) 9 ಜನ ಪೊಲೀಸರಿಗೆ ಮಧುರೈ ಜಿಲ್ಲಾ ನ್ಯಾಯಾಲಯ (Madurai Court) ಮರಣದಂಡನೆ (Death Sentence) ವಿಧಿಸಿದೆ. ನ್ಯಾಯಾಧೀಶರು ಈ ಪ್ರಕರಣವನ್ನು ಅಪರೂಪದಲ್ಲಿ ಅಪರೂಪ ಎಂದು ಉಲ್ಲೇಖಿಸಿದ್ದಾರೆ.

2020ರ ಜೂನ್ 19 ರಂದು ಮೊಬೈಲ್ ಅಂಗಡಿ ನಡೆಸುತ್ತಿದ್ದ ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಲಾಕ್‌ಡೌನ್ ಸಮಯದಲ್ಲಿ ಅನುಮತಿ ನೀಡಿದ ಅವಧಿಗಿಂತಲೂ 45 ನಿಮಿಷ ಹೆಚ್ಚು ಸಮಯ ಅಂಗಡಿ ತೆರೆದಿದ್ದಕ್ಕೆ ಪೊಲೀಸರು (Police) ಬಂಧಿಸಿದ್ದರು. ನಂತರ ಇಬ್ಬರನ್ನೂ ಸಾಥನ್‌ಕುಲಂ ಪೊಲೀಸ್ ಠಾಣೆಗೆ ಕರೆತಂದು ರಾತ್ರಿಯಿಡೀ ಹಲ್ಲೆ ಮಾಡಿದ್ದರು. ಅಲ್ಲದೇ ತಮ್ಮ ರಕ್ತವನ್ನು ತಮ್ಮದೇ ಬಟ್ಟೆಗಳಿಂದ ನೆಲದಿಂದ ಒರೆಸುವಂತೆ ಒತ್ತಾಯಿಸಲಾಗಿತ್ತು

ಬಳಿಕ ಇಬ್ಬರನ್ನೂ ಜಡ್ಜ್‌ ಮುಂದೆ ಹಾಜರು ಪಡಿಸಲಾಗಿತ್ತು. ಆಗ ಕೋವಿಡ್‌ ಸಮಯ ಆಗಿದ್ದರಿಂದ ನ್ಯಾಯಾಧೀಶರಿಗೆ ಅವರ ಮೇಲಿನ ಹಲ್ಲೆ ನಡೆದಿದ್ದನ್ನು ಪರಿಶೀಲಿಸಲು ಸಾಧ್ಯವಾಗಿರಲಿಲ್ಲ. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಯಿತು. ಇದಾದ ಮೂರು ದಿನಗಳಲ್ಲಿ ಇಬ್ಬರೂ ಸಾವನ್ನಪ್ಪಿದ್ದರು. ಜಯರಾಜ್‌ಗೆ 17 ಗಾಯಗಳಾಗಿದ್ದವು. ಬೆನ್ನಿಕ್ಸ್‌ಗೆ 13 ಗಾಯಗಳಾಗಿದ್ದವು. ಗುದನಾಳದ ರಕ್ತಸ್ರಾವ ಸೇರಿದಂತೆ, ಮೈಮೇಲೆಲ್ಲ ಗಾಯಗಳಿದ್ದವು. ಅವರ ಸಾವು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು.

ಮದ್ರಾಸ್ ಹೈಕೋರ್ಟ್‌ನ ನಿರ್ದೇಶನದಂತೆ ಪ್ರಕರಣದ ತನಿಖೆ ಆರಂಭಿಸಿದ್ದ ಸಿಬಿಐ, 9 ಪೊಲೀಸರನ್ನು ಬಂಧಿಸಿತ್ತು. ಬಂಧಿತರಲ್ಲಿ ಒಬ್ಬ ಇನ್ಸ್‌ಪೆಕ್ಟರ್, ಇಬ್ಬರು ಸಬ್-ಇನ್‌ಸ್ಪೆಕ್ಟರ್‌ಗಳು, ಉಳಿದಂತೆ ಕಾನ್‌ಸ್ಟೆಬಲ್‌ಗಳು ಸೇರಿದ್ದಾರೆ. ಅವರ ವಿರುದ್ಧ ಕೊಲೆ ಆರೋಪ ಹೊರಿಸಲಾಯಿತು.

ತನಿಖೆಯ ಸಮಯದಲ್ಲಿ, ಮಹಿಳಾ ಕಾನ್‌ಸ್ಟೆಬಲ್‌ ಒಬ್ಬರು ತಂದೆ ಮತ್ತು ಮಗನ ಮೇಲೆ ರಾತ್ರೋರಾತ್ರಿ ಹಲ್ಲೆ ನಡೆಸಿದ್ದನ್ನು ಸಿಬಿಐ ಅಧಿಕಾರಿಗಳಿಗೆ ತಿಳಿಸಿದ್ದರು. ಠಾಣೆಯಲ್ಲಿ ಟೇಬಲ್‌ಗಳು ಮತ್ತು ಲಾಠಿಗಳಲ್ಲಿ ರಕ್ತದ ಕಲೆಗಳಿವೆ ಎಂದು ತೋರಿಸಿದ್ದರು. ಇದು ಪ್ರಕರಣದ ಪ್ರಮುಖ ಸಾಕ್ಷಿಯಾಗಿತ್ತು. ಅಲ್ಲದೇ ಸಿಸಿಟಿವಿಯಲ್ಲಿ ಸ್ವಯಂಚಾಲಿತವಾಗಿ ವಿಡಿಯೋ ಡಿಲೀಟ್‌ ಆಗಿದ್ದವು. ಇದರಿಂದ ಅಧಿಕಾರಿಗಳು ಕೆಲವು ಸವಾಲನ್ನು ಎದುರಿಸಿ ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿದ್ದರು.

Spread the love
  • Related Posts

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಬೆಳ್ತಂಗಡಿ: ಆಧುನಿಕತೆಯ ಆಡಂಬರವಿಲ್ಲ… ಮೊಬೈಲ್ ನೆಟ್‌ವರ್ಕ್ ಇಲ್ಲ… ಸುಗಮ ಸಂಚಾರಕ್ಕೆ ಉತ್ತಮ ರಸ್ತೆಗಳಿಲ್ಲ. ಆದರೆ ಎದೆಯಾಳದಲ್ಲಿ ಅಖಂಡ ದೇಶಪ್ರೇಮವಿದೆ! ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ದುರ್ಗಮ ಮಲೆನಾಡಿನ ಕಾನನದ ನಡುವೆ ಇರುವ ಪುಟ್ಟ ಹಳ್ಳಿ ಬಾಂಜಾರುಮಲೆ. ಮತದಾನದಲ್ಲಿ…

    Spread the love

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    🖊️• ಬರಹ: ರಾಜೇಶ್ ಎಂ ಕಾನರ್ಪ ಮಂಗಗಳ ಕೈಯಲ್ಲಿ ಕುರುಕುರೇ ಪ್ಯಾಕೇಟ್!!! ಪ್ರೀತಿಯ ಹೆಸರಿನಲ್ಲಿ ವಾನರಗಳಿಗೆ ವಿಷವಿಕ್ಕುತ್ತಿರುವ ಮನುಜಕುಲ??? ವಾನರಗಳಿಗೆ ಪ್ಯಾಕೆಟ್‌ ತಿಂಡಿ ಬೇಡ, ಪ್ರಕೃತಿಯ ಆಹಾರ ಬೇಕು!!! ಪ್ರಕೃತಿಯ ಮಡಿಲಲ್ಲಿ ಸ್ವತಂತ್ರವಾಗಿ ಬದುಕಬೇಕಾದ ವಾನರಗಳು ಇಂದು ಮನುಷ್ಯರ ಕೈಯಲ್ಲಿರುವ ಕುರುಕುರೆ,…

    Spread the love

    You Missed

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    • By admin
    • August 20, 2026
    • 4 views
    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 10 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 10 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 12 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 27 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 16 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ