ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗಿಲ್ಲ ರಾಜ್ಯಪಾಲರ ಅಂಕಿತ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ ಎಂದು ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಹಲವು ಲೋಪದೋಷಗಳನ್ನು ಗುರುತಿಸಿ ಸುಗ್ರೀವಾಜ್ಞೆಗೆ ಅಂಕಿತ ಹಾಕದೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ.

ವಿಧಾನಮಂಡಲ ಅಧಿವೇಶನದಲ್ಲೇ ಮಸೂದೆ ಮಂಡಿಸಿ ಚರ್ಚೆ ಮಾಡಿ ಕಳುಹಿಸಿ ಎಂದು ಸುಗ್ರೀವಾಜ್ಞೆ ತಿರಸ್ಕರಿಸಿದ್ದಾರೆ. ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದ ಸರ್ಕಾರ ಈಗ ಸುಗ್ರೀವಾಜ್ಞೆ ಕರಡು ಬಿಲ್ ಪರಿಷ್ಕರಣೆ ಮಾಡಿ ಮಸೂದೆ ತರಬೇಕಿದೆ.

ಈ ಮೊದಲು ಕೆಲ ದೋಷಗಳನ್ನು ಸರಿಪಡಿಸುವಂತೆ ಸ್ಪಷ್ಟೀಕರಣಕ್ಕೆ ರಾಜ್ಯಪಾಲರು ಸರ್ಕಾರಕ್ಕೆ ಕಳುಹಿಸಿದರು. ಆದಾದ ಬಳಿಕ ಮತ್ತೆ ಸುಗ್ರೀವಾಜ್ಞೆ ಕಳುಹಿಸಿದ್ದ ಸರ್ಕಾರ. ಅಲ್ಲದೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಎಂ ಸಿಎಸ್ ರಾಜ್ಯಪಾಲರನ್ನ ಭೇಟಿ ಮಾಡಿ ವಿವರಣೆ ನೀಡಿದ್ದಾರೆ.

ಆದ್ರೆ ಆರ್‌ಬಿಐ ನಿಯಮಾವಳಿಗಳಿಗೆ ಅಡ್ಡಿ, ಸಾಲ ಕೊಟ್ಟವರ ರಕ್ಷಣೆ ಬಗ್ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು, ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.

ಮಸೂದೆಯಲ್ಲಿ ಸಾಲ ಪಡೆದವರಿಗೆ ರಕ್ಷಣೆ ಇದೆ. ಆದ್ರೆ ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಇಲ್ಲ. ಅಲ್ಲದೇ ಆರ್‌ಬಿಐ ನಿಯಮಗಳು, ಪೊಲೀಸ್ ನಿಯಮಗಳಲ್ಲಿ ವ್ಯತಿರಿಕ್ತ ಪರಿಣಾಮಗಳಿವೆ. ಸಾಲಪಡೆದವರಿಗೆ ರಕ್ಷಣೆ ಇರುವಂತೆ, ಸಾಲ ಕೊಡುವವರಿಗೂ ರಕ್ಷಣೆ ಇರಬೇಕು ಎಂದು ರಾಜ್ಯಪಾಲರು ಸಲಹೆ ನೀಡಿದ್ದಾರೆ.

ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ ನೀವು ಐದು ಲಕ್ಷ ದಂಡ‌ ಹೇಗೆ ಒದಗಿಸುತ್ತೀರಾ? ಎಂದು ಪ್ರಶ್ನೆ ರಾಜ್ಯಪಾಲರು ಪ್ರಶ್ನೆ ಮಾಡಿದ್ದಾರೆ.

ಸಾಲ ಪಡೆಯುವವನ ಬಳಿ ಏನೂ ದಾಖಲೆ ತಗೆದುಕೊಳ್ಳಬಾರದು ಎಂದು ಹೇಳಿದ್ದೀರಿ. ಆದರೆ ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಶಿಕ್ಷೆ ಪ್ರಮಾಣ ಹತ್ತು ವರ್ಷ ವಿಧಿಸಲಾಗಿದೆ. ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ. ಪ್ರಾಮಾಣಿಕವಾಗಿ ಸಾಲ‌ ಕೊಟ್ಟವರಿಗೂ ಇದು ಎಫೆಕ್ಟ್ ಆಗಲಿದೆ. ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 2 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 7 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 9 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ