ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗಿಲ್ಲ ರಾಜ್ಯಪಾಲರ ಅಂಕಿತ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ ಎಂದು ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಹಲವು ಲೋಪದೋಷಗಳನ್ನು ಗುರುತಿಸಿ ಸುಗ್ರೀವಾಜ್ಞೆಗೆ ಅಂಕಿತ ಹಾಕದೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ.

ವಿಧಾನಮಂಡಲ ಅಧಿವೇಶನದಲ್ಲೇ ಮಸೂದೆ ಮಂಡಿಸಿ ಚರ್ಚೆ ಮಾಡಿ ಕಳುಹಿಸಿ ಎಂದು ಸುಗ್ರೀವಾಜ್ಞೆ ತಿರಸ್ಕರಿಸಿದ್ದಾರೆ. ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದ ಸರ್ಕಾರ ಈಗ ಸುಗ್ರೀವಾಜ್ಞೆ ಕರಡು ಬಿಲ್ ಪರಿಷ್ಕರಣೆ ಮಾಡಿ ಮಸೂದೆ ತರಬೇಕಿದೆ.

ಈ ಮೊದಲು ಕೆಲ ದೋಷಗಳನ್ನು ಸರಿಪಡಿಸುವಂತೆ ಸ್ಪಷ್ಟೀಕರಣಕ್ಕೆ ರಾಜ್ಯಪಾಲರು ಸರ್ಕಾರಕ್ಕೆ ಕಳುಹಿಸಿದರು. ಆದಾದ ಬಳಿಕ ಮತ್ತೆ ಸುಗ್ರೀವಾಜ್ಞೆ ಕಳುಹಿಸಿದ್ದ ಸರ್ಕಾರ. ಅಲ್ಲದೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಎಂ ಸಿಎಸ್ ರಾಜ್ಯಪಾಲರನ್ನ ಭೇಟಿ ಮಾಡಿ ವಿವರಣೆ ನೀಡಿದ್ದಾರೆ.

ಆದ್ರೆ ಆರ್‌ಬಿಐ ನಿಯಮಾವಳಿಗಳಿಗೆ ಅಡ್ಡಿ, ಸಾಲ ಕೊಟ್ಟವರ ರಕ್ಷಣೆ ಬಗ್ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು, ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.

ಮಸೂದೆಯಲ್ಲಿ ಸಾಲ ಪಡೆದವರಿಗೆ ರಕ್ಷಣೆ ಇದೆ. ಆದ್ರೆ ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಇಲ್ಲ. ಅಲ್ಲದೇ ಆರ್‌ಬಿಐ ನಿಯಮಗಳು, ಪೊಲೀಸ್ ನಿಯಮಗಳಲ್ಲಿ ವ್ಯತಿರಿಕ್ತ ಪರಿಣಾಮಗಳಿವೆ. ಸಾಲಪಡೆದವರಿಗೆ ರಕ್ಷಣೆ ಇರುವಂತೆ, ಸಾಲ ಕೊಡುವವರಿಗೂ ರಕ್ಷಣೆ ಇರಬೇಕು ಎಂದು ರಾಜ್ಯಪಾಲರು ಸಲಹೆ ನೀಡಿದ್ದಾರೆ.

ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ ನೀವು ಐದು ಲಕ್ಷ ದಂಡ‌ ಹೇಗೆ ಒದಗಿಸುತ್ತೀರಾ? ಎಂದು ಪ್ರಶ್ನೆ ರಾಜ್ಯಪಾಲರು ಪ್ರಶ್ನೆ ಮಾಡಿದ್ದಾರೆ.

ಸಾಲ ಪಡೆಯುವವನ ಬಳಿ ಏನೂ ದಾಖಲೆ ತಗೆದುಕೊಳ್ಳಬಾರದು ಎಂದು ಹೇಳಿದ್ದೀರಿ. ಆದರೆ ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಶಿಕ್ಷೆ ಪ್ರಮಾಣ ಹತ್ತು ವರ್ಷ ವಿಧಿಸಲಾಗಿದೆ. ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ. ಪ್ರಾಮಾಣಿಕವಾಗಿ ಸಾಲ‌ ಕೊಟ್ಟವರಿಗೂ ಇದು ಎಫೆಕ್ಟ್ ಆಗಲಿದೆ. ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ…

    Spread the love

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 2 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 7 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 10 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 11 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 10 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 16 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ