ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗಿಲ್ಲ ರಾಜ್ಯಪಾಲರ ಅಂಕಿತ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ ಎಂದು ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಹಲವು ಲೋಪದೋಷಗಳನ್ನು ಗುರುತಿಸಿ ಸುಗ್ರೀವಾಜ್ಞೆಗೆ ಅಂಕಿತ ಹಾಕದೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ.

ವಿಧಾನಮಂಡಲ ಅಧಿವೇಶನದಲ್ಲೇ ಮಸೂದೆ ಮಂಡಿಸಿ ಚರ್ಚೆ ಮಾಡಿ ಕಳುಹಿಸಿ ಎಂದು ಸುಗ್ರೀವಾಜ್ಞೆ ತಿರಸ್ಕರಿಸಿದ್ದಾರೆ. ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದ ಸರ್ಕಾರ ಈಗ ಸುಗ್ರೀವಾಜ್ಞೆ ಕರಡು ಬಿಲ್ ಪರಿಷ್ಕರಣೆ ಮಾಡಿ ಮಸೂದೆ ತರಬೇಕಿದೆ.

ಈ ಮೊದಲು ಕೆಲ ದೋಷಗಳನ್ನು ಸರಿಪಡಿಸುವಂತೆ ಸ್ಪಷ್ಟೀಕರಣಕ್ಕೆ ರಾಜ್ಯಪಾಲರು ಸರ್ಕಾರಕ್ಕೆ ಕಳುಹಿಸಿದರು. ಆದಾದ ಬಳಿಕ ಮತ್ತೆ ಸುಗ್ರೀವಾಜ್ಞೆ ಕಳುಹಿಸಿದ್ದ ಸರ್ಕಾರ. ಅಲ್ಲದೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಎಂ ಸಿಎಸ್ ರಾಜ್ಯಪಾಲರನ್ನ ಭೇಟಿ ಮಾಡಿ ವಿವರಣೆ ನೀಡಿದ್ದಾರೆ.

ಆದ್ರೆ ಆರ್‌ಬಿಐ ನಿಯಮಾವಳಿಗಳಿಗೆ ಅಡ್ಡಿ, ಸಾಲ ಕೊಟ್ಟವರ ರಕ್ಷಣೆ ಬಗ್ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು, ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.

ಮಸೂದೆಯಲ್ಲಿ ಸಾಲ ಪಡೆದವರಿಗೆ ರಕ್ಷಣೆ ಇದೆ. ಆದ್ರೆ ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಇಲ್ಲ. ಅಲ್ಲದೇ ಆರ್‌ಬಿಐ ನಿಯಮಗಳು, ಪೊಲೀಸ್ ನಿಯಮಗಳಲ್ಲಿ ವ್ಯತಿರಿಕ್ತ ಪರಿಣಾಮಗಳಿವೆ. ಸಾಲಪಡೆದವರಿಗೆ ರಕ್ಷಣೆ ಇರುವಂತೆ, ಸಾಲ ಕೊಡುವವರಿಗೂ ರಕ್ಷಣೆ ಇರಬೇಕು ಎಂದು ರಾಜ್ಯಪಾಲರು ಸಲಹೆ ನೀಡಿದ್ದಾರೆ.

ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ ನೀವು ಐದು ಲಕ್ಷ ದಂಡ‌ ಹೇಗೆ ಒದಗಿಸುತ್ತೀರಾ? ಎಂದು ಪ್ರಶ್ನೆ ರಾಜ್ಯಪಾಲರು ಪ್ರಶ್ನೆ ಮಾಡಿದ್ದಾರೆ.

ಸಾಲ ಪಡೆಯುವವನ ಬಳಿ ಏನೂ ದಾಖಲೆ ತಗೆದುಕೊಳ್ಳಬಾರದು ಎಂದು ಹೇಳಿದ್ದೀರಿ. ಆದರೆ ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಶಿಕ್ಷೆ ಪ್ರಮಾಣ ಹತ್ತು ವರ್ಷ ವಿಧಿಸಲಾಗಿದೆ. ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ. ಪ್ರಾಮಾಣಿಕವಾಗಿ ಸಾಲ‌ ಕೊಟ್ಟವರಿಗೂ ಇದು ಎಫೆಕ್ಟ್ ಆಗಲಿದೆ. ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ.

Spread the love
  • Related Posts

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡ ಉದ್ಘಾಟನೆ ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಇಂದು ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ನೆರವೇರಿತು.…

    Spread the love

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಸಿಇಟಿ ಫಲಿತಾಂಶದಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ ಗುರುವಾಯನಕೆರೆ, ಜೂನ್ 7: ಇತ್ತೀಚೆಗೆ ಪ್ರಕಟಗೊಂಡ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶದಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತೊಮ್ಮೆ ಗಮನಾರ್ಹ ಸಾಧನೆ ಮಾಡಿ ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಮೇಲುಗೈಯನ್ನು…

    Spread the love

    You Missed

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 149 views

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    • By admin
    • June 6, 2026
    • 226 views
    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 98 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 86 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 40 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 36 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ