ಮಳಲಿ ಮಸೀದಿಯ ವಿವಾದ: ಮಸೀದಿ ಆಡಳಿತ ಮಂಡಳಿಯ ಅರ್ಜಿ ವಜಾ

ಮಂಗಳೂರು: ಮಂಗಳೂರು ನಗರದ ಹೊರವಲಯದಲ್ಲಿರುವ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ((Malali Mosque Row Case) ಪ್ರಕರಣದಲ್ಲಿ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದಿಂದ ಇಂದು ತೀರ್ಪು ಪ್ರಕಟಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ.

ಮಳಲಿ ಮಸೀದಿಯ ಅರ್ಜಿ ವಿಚಾರಣೆ ಸಿವಿಲ್ ಕೋರ್ಟ್​ (Civil Court) ವ್ಯಾಪ್ತಿಯಲ್ಲಿಯೇ ನಡೆಯಲಿದೆ. ಮಸೀದಿ ಕಾಮಗಾರಿ ತಡೆಯಾಜ್ಞೆ ಕೋರಿ ಮತ್ತು ಅದರ ಸಮೀಕ್ಷೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ (Vishwa hindu parishat) ಅರ್ಜಿ ಸಲ್ಲಿಸಿತ್ತು. ಮೂಲ ದಾವೆ ಆಲಿಸಲು ವಿಚಾರಣಾಧೀನ ನ್ಯಾಯಾಲಯದ ಅಧಿಕಾರ ವ್ಯಾಪ್ತಿ ಕುರಿತು ತೀರ್ಪು ಇದಾಗಿದೆ.ಮಳಲಿ ಮಸೀದಿ ನವೀಕರಣದ ವೇಳೆ ಹಿಂದೂ ದೇವಾಲಯ ಶೈಲಿಯ ಪಾರಂಪರಿಕ ಕಟ್ಟಡ ಪತ್ತೆಯಾಗಿತ್ತು. ಆ ಬಳಿಕ ಹಿಂದೂ ಸಂಘಟನೆಗಳು ಮಳಲಿ ಭಜನಾ ಮಂದಿರದಲ್ಲಿ ತಾಂಬೂಲ ಪ್ರಶ್ನೆ ಇಟ್ಟಿತ್ತು. ಈ ತಾಂಬೂಲ ಪ್ರಶ್ನೆಯಲ್ಲಿ ಆ ಜಾಗದಲ್ಲಿ ಹಿಂದೆ ಶಿವನಿಗೆ ಸಂಬಂಧಿಸಿದ ಗುರು ಪೀಠವಿತ್ತು ಎಂಬ ಅಂಶ ಉಲ್ಲೇಖವಾಗಿತ್ತು.

ಈ ಹಿನ್ನೆಲೆಯಲ್ಲಿ ಮಸೀದಿ ಇರುವ ಸ್ಥಳದ ಬಗ್ಗೆ ವಿಹೆಚ್​ಪಿ ಸರ್ವೇಗೆ ನ್ಯಾಯಾಲಯಕ್ಕೆ ಅರ್ಜಿ ಹಾಕಿತ್ತು. ಅಲ್ಲದೇ ಮಸೀದಿ ನವೀಕರಣಕ್ಕೆ ತಡೆಕೋರಿಯೂ ವಿಹೆಚ್​​ಪಿ ಅರ್ಜಿ ಹಾಕಿತ್ತು. ಆದರೆ ಈ ಅರ್ಜಿಯು ವಕ್ಫ್ ಟ್ರಿಬ್ಯುನಲ್ ವ್ಯಾಪ್ತಿಗೆ ಬರಲಿದೆ ಎಂದು ಮಸೀದಿ ಆಡಳಿತ ಮಂಡಳಿ ಪರ ವಕೀಲರು ವಾದಿಸಿದ್ದರು. ಈ ಪ್ರಕರಣ ವಕ್ಫ್ ಟ್ರಿಬ್ಯುನಲ್​​ನಲ್ಲಿ ನಡೆಯಬೇಕೋ ಅಥವಾ ಸಿವಿಲ್ ಕೋರ್ಟ್​ನಲ್ಲಿ ನಡೆಯಬೇಕೋ ಎಂಬ ಬಗ್ಗೆ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿತ್ತು ಇಂದು ನ್ಯಾಯಾಲಯವು ವಿಶ್ವಹಿಂದೂ ಪರಿಷತ್ ನ ಅರ್ಜಿ ಸ್ವೀಕರಿಸಿರುವುದಾಗಿ ತಿಳಿಸಿದೆ. ಇದೆ ವೇಳೆ ಮಸೀದಿ ಕಾಮಗಾರಿಗೆ ನೀಡಿದ ಕಾಮಗಾರಿ ತೆರವು ಮಾಡಬೇಕು ವಿಎಚ್ ಪಿ ಅರ್ಜಿ ವಜಾ ಗೊಳಿಸಬೇಕೆಂದು ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದೆ . ಅಲ್ಲದೇ ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲೇ ಮಳಲಿ ಮಸೀದಿಯ ಅರ್ಜಿ ವಿಚಾರಣೆ ನಡೆಯಲಿದೆ ಎಂದು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ.ವಿಎಚ್ ಪಿ ಅರ್ಜಿ ಸ್ವೀಕರಿಸಿರುವ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಜನವರಿ 8, 2023ಕ್ಕೆ ಮುಂದೂಡಿದೆ. ಮಳಲಿ ಮಸೀದಿಯಲ್ಲಿ ಪತ್ತೆಯಾಗಿರುವ ದೇವಾಲಯದ ರಚನೆ ಬಗ್ಗೆ ಮೊದಲು ಪರಿಶೀಲನೆಯಾಗಬೇಕು. ಅದರ ವಸ್ತುಸ್ಥಿತಿ ಪರಿಶೀಲಿಸಲು ಕೋರ್ಟ್‌ ಕಮಿಷನರ್‌ ಒಬ್ಬರನ್ನು ನೇಮಿಸಬೇಕು. ಜ್ಞಾನವಾಪಿ ಮಸೀದಿಯ ಮಾದರಿಯಲ್ಲಿ ಕಮಿಷನರ್‌ ನೇಮಕ ಮಾಡುವ ಕುರಿತು ಪರಿಗಣಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ವಜಾಗೊಳಿಸುವಂತೆ ಮಸೀದಿ ಆಡಳಿತ ಮಂಡಳಿ ಮನವಿ ಮಾಡಿಕೊಂಡಿತ್ತು.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 2 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 4 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 9 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 6 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 8 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 7 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ