ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಮಲೇಷ್ಯಾದಲ್ಲಿ ವಿಜಯವಾಣಿ “ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ” ಪ್ರದಾನ

ಬೆಂಗಳೂರು : “ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮಲೇಷ್ಯಾದಲ್ಲಿ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಕುಡಿಯುವ ನೀರು, ಕೃಷಿ ಗೆ ನೀರು, ಪ್ರಾಣಿ ಸಂಕುಲಗಳಿಗೆ ಬರಡು ಭೂಮಿಯಲ್ಲೂ ನೀರು ಸಿಗಬೇಕು ಎನ್ನುವ ಉದ್ದೇಶದಿಂದ “ನಮ್ಮೂರು ನಮ್ಮ ಕೆರೆ” ಕೆರೆಗಳಿಗೆ ಕಾಯಕಲ್ಪ ಕಾರ್ಯಕ್ರಮಗಳನ್ನು ಹಮ್ಮಿಕೊಂಡು 1000 ಕೆರೆಗಳನ್ನು ಜೀರ್ಣೋದ್ಧಾರಗೊಳಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ರಾಜ್ಯದ ನಂ.1 ದಿನಪತ್ರಿಕೆ “ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

2016 ರಲ್ಲಿ ಊರಿಗೆ ನೀರುಣಿಸುತ್ತಿದ್ದ ಕೆರೆಗಳು ಕಣ್ಮರೆಯಾಗುತ್ತಿದ್ದನ್ನು ಕಂಡ ಡಾ.ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆಯವರು “ನಮ್ಮೂರು ನಮ್ಮ ಕೆರೆ” ಕೆರೆಗಳನ್ನು ಪುನಶ್ಚೇತನಗೊಳಿಸುವ ಕಾರ್ಯಕ್ರಮ ಜಾರಿಗೆ ತಂದರು. ರೈತರು ಮಹಿಳೆಯರನ್ನು ಒಳಗೊಂಡ ಕೆರೆ ಸಮಿತಿಗಳನ್ನು ರಚಿಸಿ ಜನರ ಸಹಭಾಗಿತ್ವವನ್ನು ಪಡೆದು ಜೊತೆಗೆ ಸಂಸ್ಥೆಯ 160 ನೋಡೆಲ್‌ ಅಧಿಕಾರಿಗಳು 07 ಜನ ನುರಿತ ಇಂಜಿನಿಯರ್‌ಗಳ ತಂಡವನ್ನು ರಚಿಸಿ ಈ ಕೆರೆಗಳ ಪುನಶ್ಚೇತನ ಮಾಡಲಾಗುತ್ತಿದೆ. ಕುಡಿಯುವ ನೀರು ಅಲ್ಲದೆ ಪ್ರಾಣಿ ಸಂಕುಲಗಳಿಗೂ, ಜಾನುವಾರುಗಳಿಗೂ ನೀರು ಯೆತೇಚ್ಛವಾಗಿ ಸಿಗಬೇಕೆಂದು ಶಿವಮೊಗ್ಗದ ತಾವರೆಕೆರೆ ಹುಲಿ ಮತ್ತು ಸಿಂಹಧಾಮದಲ್ಲಿ 10 ಕೆರೆಗಳನ್ನು ಪುನಶ್ಚೇತನಗೊಳಿಸಿದ್ದು ಯೆತೇಚ್ಛನೀರು ಬರುತ್ತಿದ್ದು ಸುಮಾರು 400 ವನ್ಯ ಜೀವಿಗಳಿಗೆ ನೀರು ಆಶ್ರಯವಾಗಿದೆ.

ಇದುವರೆಗೆ 914 ಕೆರೆಗಳನ್ನು ಪುನಶ್ಚೇತನಗೊಳಿಸಿದ್ದು ಸುಮಾರು 332.30 ಲಕ್ಷ ಕ್ಯು.ಮೀ. ಹೂಳನ್ನು ತೆಗೆಯಲಾಗಿದೆ. ಸುಮಾರು 877.84 ಕೋಟಿ ಗ್ಯಾಲನ್‌ ನೀರಿನ ಸಂಗ್ರಹಣ ಸಾಮರ್ಥ್ಯ ಹೆಚ್ಚಳಗೊಂಡಿದೆ ಇದರಿಂದ 2,65,962 ಎಕ್ರೆ ಕೃಷಿ ಭೂಮಿಗೆ ಪ್ರಯೋಜನವಾಗಿದ್ದು 4,18,174 ಕುಟುಂಬಗಳು ಪ್ರಯೋಜನ ಪಡೆದಿದ್ದು 402.62 ಎಕ್ರೆ ಪ್ರದೇಶ ಒತ್ತುವರಿ ತೆರವುಗೊಳಿಸಲಾಗಿದೆ. ಇದಕ್ಕೆ ಯೋಜನೆಯಿಂದ 72.37 ಕೋಟಿ ಅನುದಾನವನ್ನು ಬಳಸಲಾಗಿದೆ.

ಶ್ರೀ ಕ್ಷೇತ್ರದ ಪರವಾಗಿ ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಟಿಗಳಾದ ಶ್ರೀ ಸುರೇಂದ್ರ ಕುಮಾರ್ ಇವರಿಗೆ ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ