ಮಲೆಯಡ್ಕ ಹಾಟ್ ಮಿಕ್ಸ್ ಘಟಕ ವಿವಾದಕ್ಕೆ ಹೊಸ ತಿರುವು! ಅಧಿಕಾರಿಗಳ ಸರಣಿ ಭೇಟಿ; ಮಲೆಯಡ್ಕದಲ್ಲೇ ನಡೆಯಿತು ಎಸ್‌ಸಿ/ಎಸ್‌ಟಿ ಕುಂದು ಕೊರತೆಗಳ ಸಭೆ

ಬೆಳ್ತಂಗಡಿ, ಜು. 5: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆಯು ಇಂದು ಮಲೆಯಡ್ಕದಲ್ಲಿ ಬೆಳ್ತಂಗಡಿ ಪೊಲೀಸ್ ವೃತ್ತದ ಅಧಿಕಾರಿಗಳ ನೇತೃತ್ವದಲ್ಲಿ ನಡೆದಿದೆ.

ನಡ ಗ್ರಾಮದ ಮಲೆಯಡ್ಕದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿರುವ ವಿವಾದಿತ ಹಾಟ್ ಮಿಕ್ಸ್ ಘಟಕದ ವಿವಾದ ಇದೀಗ ಮಹತ್ವದ ಹಂತ ತಲುಪಿದೆ. ಕಳೆದ ಕೆಲವು ದಿನಗಳಿಂದ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ತಂಡೋಪತಂಡವಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವುದು, ಘಟಕದ ವಿರುದ್ಧ ಆಡಳಿತಾತ್ಮಕ ಕ್ರಮ ಅನಿವಾರ್ಯವಾಗಲಿದೆಯೇ ಎಂಬ ಚರ್ಚೆಗೆ ಕಾರಣವಾಗಿದೆ.

ಈ ನಡುವೆ, ಇಂದು ಬೆಳ್ತಂಗಡಿ ಪೊಲೀಸ್ ವೃತ್ತದ ಅಧಿಕಾರಿಗಳ ನೇತೃತ್ವದಲ್ಲಿ ಮಲೆಯಡ್ಕದಲ್ಲಿ ನಡೆದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆಯು ಪ್ರಕರಣದ ಬೆಳವಣಿಗೆಗಳಿಗೆ ಹೊಸ ದಿಕ್ಕು ನೀಡುವ ಸಾಧ್ಯತೆ ಇದೆ. ಸಂತ್ರಸ್ತರು ಹಾಗೂ ಸ್ಥಳೀಯರ ನಿರೀಕ್ಷೆಯೂ ಈ ಸಭೆಯತ್ತ ನೆಟ್ಟಿದೆ.

ಕಳೆದ ವಾರ ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರ ನೇತೃತ್ವದಲ್ಲಿ ಆರೋಗ್ಯ, ಕಂದಾಯ ಹಾಗೂ ಪಂಚಾಯತ್ ಇಲಾಖೆಗಳ ಅಧಿಕಾರಿಗಳು ಘಟಕ ಮತ್ತು ಅದರ ದಾಖಲೆಗಳನ್ನು ಪರಿಶೀಲಿಸಿದ್ದರು. ಅದರ ಮರುದಿನವೇ ಘಟಕದಿಂದ ಹಾನಿಗೊಳಗಾಗಿದೆ ಎನ್ನಲಾದ ಮನೆಗಳು, ಕೃಷಿ ಭೂಮಿ ಹಾಗೂ ಬೆಳೆಗಳ ಕುರಿತು ವಿಸ್ತೃತ ಸರ್ವೇ ನಡೆಸಿ ವರದಿಯನ್ನು ಸಲ್ಲಿಸಲಾಗಿದೆ.

ಪರಿಶೀಲನೆ ವೇಳೆ ಕಂದಾಯ ಭೂಮಿ ಮತ್ತು ರಕ್ಷಿತ ಅರಣ್ಯ ಅತಿಕ್ರಮಣಕ್ಕೆ ಸಂಬಂಧಿಸಿದ ಗಂಭೀರ ಉಲ್ಲಂಘನೆಗಳು ಅಧಿಕಾರಿಗಳ ಗಮನಕ್ಕೆ ಬಂದಿರುವುದಾಗಿ ತಿಳಿದುಬಂದಿದೆ. ದಾಖಲೆಗಳ ಅಸಮರ್ಪಕತೆ, ಒತ್ತುವರಿ ಹಾಗೂ ವಿವಿಧ ನಿಯಮಗಳ ಉಲ್ಲಂಘನೆ ಕುರಿತು ಅಧಿಕಾರಿಗಳ ತಂಡ ಅಸಮಾಧಾನ ವ್ಯಕ್ತಪಡಿಸಿದೆ ಎನ್ನಲಾಗಿದೆ. ಇದೇ ವೇಳೆ, ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಯೂ ಸಂತ್ರಸ್ತರ ಪರವಾಗಿ ಬಂದಿರುವುದು ಪ್ರಕರಣಕ್ಕೆ ಮತ್ತಷ್ಟು ಮಹತ್ವ ತಂದಿದೆ.

ಪ್ರಕರಣವನ್ನು ಸಂತ್ರಸ್ತರು ರಾಜ್ಯದ ಗೃಹ ಇಲಾಖೆಯ ಗಮನಕ್ಕೂ ತಂದಿದ್ದು, ದಾಖಲೆಗಳೊಂದಿಗೆ ದೂರು ಸಲ್ಲಿಸಿದ್ದಾರೆ. ಜೊತೆಗೆ ರಾಷ್ಟ್ರೀಯ ಬುಡಕಟ್ಟು ಆಯೋಗ ಹಾಗೂ ಪ್ರಧಾನಮಂತ್ರಿ ಕಚೇರಿಗೂ ಜಿಪಿಎಸ್ ಆಧಾರಿತ ಛಾಯಾಚಿತ್ರಗಳು, ವಿಡಿಯೊಗಳು ಮತ್ತು ದಾಖಲೆಗಳೊಂದಿಗೆ ಮನವಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇಂದಿನ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ ನಿರ್ಣಾಯಕ ಘಟ್ಟವಾಗಬಹುದೇ ಎಂಬ ಪ್ರಶ್ನೆ ಉದ್ಭವಿಸಿದೆ. ಅನಧಿಕೃತ ಎಂದು ಆರೋಪಿಸಲಾದ ಹಾಟ್ ಮಿಕ್ಸ್ ಘಟಕದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆಯೇ ಅಥವಾ ಘಟಕವನ್ನು ಸ್ಥಳಾಂತರಿಸುವ ಬಗ್ಗೆ ತೀರ್ಮಾನ ಹೊರಬೀಳುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 5 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ