ಮಲೆಯಡ್ಕ ಹಾಟ್ ಮಿಕ್ಸ್ ಘಟಕ ವಿವಾದಕ್ಕೆ ಹೊಸ ತಿರುವು! ಅಧಿಕಾರಿಗಳ ಸರಣಿ ಭೇಟಿ; ಮಲೆಯಡ್ಕದಲ್ಲೇ ನಡೆಯಿತು ಎಸ್‌ಸಿ/ಎಸ್‌ಟಿ ಕುಂದು ಕೊರತೆಗಳ ಸಭೆ

ಬೆಳ್ತಂಗಡಿ, ಜು. 5: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆಯು ಇಂದು ಮಲೆಯಡ್ಕದಲ್ಲಿ ಬೆಳ್ತಂಗಡಿ ಪೊಲೀಸ್ ವೃತ್ತದ ಅಧಿಕಾರಿಗಳ ನೇತೃತ್ವದಲ್ಲಿ ನಡೆದಿದೆ.

ನಡ ಗ್ರಾಮದ ಮಲೆಯಡ್ಕದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿರುವ ವಿವಾದಿತ ಹಾಟ್ ಮಿಕ್ಸ್ ಘಟಕದ ವಿವಾದ ಇದೀಗ ಮಹತ್ವದ ಹಂತ ತಲುಪಿದೆ. ಕಳೆದ ಕೆಲವು ದಿನಗಳಿಂದ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ತಂಡೋಪತಂಡವಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವುದು, ಘಟಕದ ವಿರುದ್ಧ ಆಡಳಿತಾತ್ಮಕ ಕ್ರಮ ಅನಿವಾರ್ಯವಾಗಲಿದೆಯೇ ಎಂಬ ಚರ್ಚೆಗೆ ಕಾರಣವಾಗಿದೆ.

ಈ ನಡುವೆ, ಇಂದು ಬೆಳ್ತಂಗಡಿ ಪೊಲೀಸ್ ವೃತ್ತದ ಅಧಿಕಾರಿಗಳ ನೇತೃತ್ವದಲ್ಲಿ ಮಲೆಯಡ್ಕದಲ್ಲಿ ನಡೆದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆಯು ಪ್ರಕರಣದ ಬೆಳವಣಿಗೆಗಳಿಗೆ ಹೊಸ ದಿಕ್ಕು ನೀಡುವ ಸಾಧ್ಯತೆ ಇದೆ. ಸಂತ್ರಸ್ತರು ಹಾಗೂ ಸ್ಥಳೀಯರ ನಿರೀಕ್ಷೆಯೂ ಈ ಸಭೆಯತ್ತ ನೆಟ್ಟಿದೆ.

ಕಳೆದ ವಾರ ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರ ನೇತೃತ್ವದಲ್ಲಿ ಆರೋಗ್ಯ, ಕಂದಾಯ ಹಾಗೂ ಪಂಚಾಯತ್ ಇಲಾಖೆಗಳ ಅಧಿಕಾರಿಗಳು ಘಟಕ ಮತ್ತು ಅದರ ದಾಖಲೆಗಳನ್ನು ಪರಿಶೀಲಿಸಿದ್ದರು. ಅದರ ಮರುದಿನವೇ ಘಟಕದಿಂದ ಹಾನಿಗೊಳಗಾಗಿದೆ ಎನ್ನಲಾದ ಮನೆಗಳು, ಕೃಷಿ ಭೂಮಿ ಹಾಗೂ ಬೆಳೆಗಳ ಕುರಿತು ವಿಸ್ತೃತ ಸರ್ವೇ ನಡೆಸಿ ವರದಿಯನ್ನು ಸಲ್ಲಿಸಲಾಗಿದೆ.

ಪರಿಶೀಲನೆ ವೇಳೆ ಕಂದಾಯ ಭೂಮಿ ಮತ್ತು ರಕ್ಷಿತ ಅರಣ್ಯ ಅತಿಕ್ರಮಣಕ್ಕೆ ಸಂಬಂಧಿಸಿದ ಗಂಭೀರ ಉಲ್ಲಂಘನೆಗಳು ಅಧಿಕಾರಿಗಳ ಗಮನಕ್ಕೆ ಬಂದಿರುವುದಾಗಿ ತಿಳಿದುಬಂದಿದೆ. ದಾಖಲೆಗಳ ಅಸಮರ್ಪಕತೆ, ಒತ್ತುವರಿ ಹಾಗೂ ವಿವಿಧ ನಿಯಮಗಳ ಉಲ್ಲಂಘನೆ ಕುರಿತು ಅಧಿಕಾರಿಗಳ ತಂಡ ಅಸಮಾಧಾನ ವ್ಯಕ್ತಪಡಿಸಿದೆ ಎನ್ನಲಾಗಿದೆ. ಇದೇ ವೇಳೆ, ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಯೂ ಸಂತ್ರಸ್ತರ ಪರವಾಗಿ ಬಂದಿರುವುದು ಪ್ರಕರಣಕ್ಕೆ ಮತ್ತಷ್ಟು ಮಹತ್ವ ತಂದಿದೆ.

ಪ್ರಕರಣವನ್ನು ಸಂತ್ರಸ್ತರು ರಾಜ್ಯದ ಗೃಹ ಇಲಾಖೆಯ ಗಮನಕ್ಕೂ ತಂದಿದ್ದು, ದಾಖಲೆಗಳೊಂದಿಗೆ ದೂರು ಸಲ್ಲಿಸಿದ್ದಾರೆ. ಜೊತೆಗೆ ರಾಷ್ಟ್ರೀಯ ಬುಡಕಟ್ಟು ಆಯೋಗ ಹಾಗೂ ಪ್ರಧಾನಮಂತ್ರಿ ಕಚೇರಿಗೂ ಜಿಪಿಎಸ್ ಆಧಾರಿತ ಛಾಯಾಚಿತ್ರಗಳು, ವಿಡಿಯೊಗಳು ಮತ್ತು ದಾಖಲೆಗಳೊಂದಿಗೆ ಮನವಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇಂದಿನ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ ನಿರ್ಣಾಯಕ ಘಟ್ಟವಾಗಬಹುದೇ ಎಂಬ ಪ್ರಶ್ನೆ ಉದ್ಭವಿಸಿದೆ. ಅನಧಿಕೃತ ಎಂದು ಆರೋಪಿಸಲಾದ ಹಾಟ್ ಮಿಕ್ಸ್ ಘಟಕದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆಯೇ ಅಥವಾ ಘಟಕವನ್ನು ಸ್ಥಳಾಂತರಿಸುವ ಬಗ್ಗೆ ತೀರ್ಮಾನ ಹೊರಬೀಳುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ.

Spread the love
  • Related Posts

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    🖊️• ಬರಹ: ರಾಜೇಶ್ ಎಂ ಕಾನರ್ಪ ಮಂಗಗಳ ಕೈಯಲ್ಲಿ ಕುರುಕುರೇ ಪ್ಯಾಕೇಟ್!!! ಪ್ರೀತಿಯ ಹೆಸರಿನಲ್ಲಿ ವಾನರಗಳಿಗೆ ವಿಷವಿಕ್ಕುತ್ತಿರುವ ಮನುಜಕುಲ??? ವಾನರಗಳಿಗೆ ಪ್ಯಾಕೆಟ್‌ ತಿಂಡಿ ಬೇಡ, ಪ್ರಕೃತಿಯ ಆಹಾರ ಬೇಕು!!! ಪ್ರಕೃತಿಯ ಮಡಿಲಲ್ಲಿ ಸ್ವತಂತ್ರವಾಗಿ ಬದುಕಬೇಕಾದ ವಾನರಗಳು ಇಂದು ಮನುಷ್ಯರ ಕೈಯಲ್ಲಿರುವ ಕುರುಕುರೆ,…

    Spread the love

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    You Missed

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 6 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 8 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 10 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 26 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 15 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 15 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ