ಮಂಡ್ಯದಿಂದ ದಕ್ಷಿಣ ಕನ್ನಡಕ್ಕೆ ಉಪನ್ಯಾಸಕರೊರ್ವರ ದಿಡೀರ್ ವರ್ಗಾವಣೆ! ವಿದ್ಯಾರ್ಥಿಗಳಿಂದ ವರ್ಗಾವಣೆ ರದ್ದು ಗೊಳಿಸುವಂತೆ ಶಿಕ್ಷಣ ಸಚಿವರಿಗೆ ಪತ್ರ

ಮಂಡ್ಯ: ಕೆ.ಆರ್‌.ಪೇಟೆ ತಾಲೂಕಿನ ಶೀಳನೆರೆ ಪದವಿ ಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಭಾಷೆಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಎಂ.ವಾಸುದೇವರವರ ವರ್ಗಾವಣೆಯನ್ನು ರದ್ದುಪಡಿಸುವಂತೆ ಕಾಲೇಜಿನ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಉಪನ್ಯಾಸಕ ಕೆ.ಎಂ.ವಾಸುದೇವ ಮೇಲೆ ಸಾಕ್ಷಾಧಾರವಿಲ್ಲದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರ್ನಾಡ ಮುಡಿಪು ಪದವಿ ಪೂರ್ವ ಕಾಲೇಜಿಗೆ ವರ್ಗಾವಣೆ ಮಾಡಲಾಗಿದೆ. ವಿಷಯ ತಿಳಿದ ಹಳೆಯ ವಿದ್ಯಾರ್ಥಿಗಳು ಮತ್ತು ಹಾಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಮೂಲಕ ಪ್ರಾಥಮಿಕ ಮತ್ತುಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್‌ಗೆ ಮನವಿ ಸಲ್ಲಿಸಿದ್ದಾರೆ.

ವರ್ಗಾವಣೆಯ ವಿಚಾರದಲ್ಲಿ ವಿದ್ಯಾರ್ಥಿಗಳು, ಸ್ಥಳೀಯರು, ಹಳೆಯ ವಿದ್ಯಾರ್ಥಿಗಳ ಅಭಿಪ್ರಾಯಗಳನ್ನು ಗಣನೆಗೆ ತೆಗದುಕೊಳ್ಳಬೇಕು ಎಂದು ನಾವು ಒತ್ತಾಯಿಸುತ್ತೇವೆ. ಕೆ.ಎಂ.ವಾಸುದೇವ ಅವರು ಶೀಳನೆರೆಯ ಕಾಲೇಜಿಗೆ ಬಂದ ನಂತರ ಕಾಲೇಜು ಹಾಗೂ ವಿದ್ಯಾರ್ಥಿಗಳ ಸಾಮರ್ಥ್ಯಾಭಿವೃದ್ದಿಗಾಗಿ ಬಹಳಷ್ಟು ಶ್ರಮಿಸಿದ್ದಾರೆ’ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕೆ.ಎಂ.ವಾಸುದೇವ ಅವರು ಈ ಕಾಲೇಜಿನ ಉಪನ್ಯಾಸಕರಾದಾಗಿನಿಂದ ಇಲ್ಲಿಯವರೆಗೂ ಪ್ರತಿ ಶೈಕ್ಷಣಿಕ ವರ್ಷದಲ್ಲಿಯು ಫಲಿತಾಂಶ ಉತ್ತಮ ರೀತಿಯಲ್ಲಿದೆ. ಅಲ್ಲದೆ, ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯದಲ್ಲಿ, ವಿಶೇಷವಾಗಿ ಇಂಗ್ಲಿಷ್ ವಿಷಯದಲ್ಲಿ ವಿದ್ಯಾರ್ಥಿಗಳ ಕಲಿಕೆ ಬಹಳಷ್ಟು ಸುಧಾರಿಸಿದೆ. ಸಮಯವನ್ನು ಲೆಕ್ಕಿಸದೆ ವಿದ್ಯಾರ್ಥಿಗಳಿಗೆ ಭೋಧನೆಯನ್ನು ಮಾಡುವ ಮೂಲಕ ವಿದ್ಯಾರ್ಥಿಗಳ ಹಾಗೂ ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಬಿಡುವಿನ ಸಮಯವನ್ನೂ ಕೂಡ ಸರ್ಕಾರಿ ಶಾಲಾ-ಕಾಲೇಜುಗಳ ಅಭಿವೃದ್ಧಿಗಾಗಿ ಮೀಸಲಿಟ್ಟು, ದುಡಿದಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಕೆ.ಆರ್.ಪೇಟೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆ (ಶತಮಾನದ ಶಾಲೆ)ಯನ್ನು ಅಭಿವೃದ್ಧಿಗೊಳಿಸಲು ಕೆ.ಎಂ.ವಾಸುದೇವ ಅವರು ಸಾಕಷ್ಟು ಶ್ರಮಿಸಿದ್ದಾರೆ. ಅಲ್ಲದೆ, ಅದೇ ಶಾಲೆಗೆ ತಮ್ಮ ಮಗನಾದ ಬುದ್ದದಾಸ್ ಅವರನ್ನು ಸೇರಿಸಿದ್ದು, ಸರ್ಕಾರಿ ನೌಕರರಿಗೆ ಮಾದರಿಯಾಗಿದ್ದಾರೆ. ಶೀಳನೆರೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಮನೆ ( ಎಲ್.ಕೆ.ಜಿ. & ಯು.ಕೆ.ಜಿ) ತರಗತಿಗಳನ್ನ ತೆರೆಯುವುದರಲ್ಲಿ ಯಶಸ್ವಿಯಾಗಿದ್ದಾರೆ.

ಅವರ ಸೇವೆಯನ್ನು ಸಹಿಸದ ಕೆಲವು ತಿಳಿಗೇಡಿ-ಭ್ರಷ್ಟ ವ್ಯಕ್ತಿಗಳು ವಾಸುದೇವ ಅವರ ವಿರುದ್ಧ ಪದೇ-ಪದೇ ಮೂಗರ್ಜಿಗಳನ್ನು ಬರೆದಿದ್ದಾರೆ. ಯಾರೋ ಒಬ್ಬರು ದುರುದ್ದೇಶಗಳಿಂದ ಬರೆದ ಅರ್ಜಿಗೆ ಸಂಬಂಧಿಸಿದಂತೆ ಕಾಲೇಜಿನಿಂದಾಗಲಿ, ವಿದ್ಯಾರ್ಥಿಗಳಿಂದಾಗಲಿ ಅಥವಾ ಗ್ರಾಮಸ್ಥರಿಂದಾಗಲಿ ಮಾಹಿತಿಗಳನ್ನು ಪಡೆಯದೆ, ಸಮರ್ಪಕ ವಿಚಾರಣೆ ನಡೆಸದೆ ಕ್ರಮ ವಹಿಸಿರುವುದು ನಮಗೆಲ್ಲ ನೋವುಂಟುಮಾಡಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 62 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 102 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ