ಮಂಡ್ಯದಿಂದ ದಕ್ಷಿಣ ಕನ್ನಡಕ್ಕೆ ಉಪನ್ಯಾಸಕರೊರ್ವರ ದಿಡೀರ್ ವರ್ಗಾವಣೆ! ವಿದ್ಯಾರ್ಥಿಗಳಿಂದ ವರ್ಗಾವಣೆ ರದ್ದು ಗೊಳಿಸುವಂತೆ ಶಿಕ್ಷಣ ಸಚಿವರಿಗೆ ಪತ್ರ

ಮಂಡ್ಯ: ಕೆ.ಆರ್‌.ಪೇಟೆ ತಾಲೂಕಿನ ಶೀಳನೆರೆ ಪದವಿ ಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಭಾಷೆಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಎಂ.ವಾಸುದೇವರವರ ವರ್ಗಾವಣೆಯನ್ನು ರದ್ದುಪಡಿಸುವಂತೆ ಕಾಲೇಜಿನ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಉಪನ್ಯಾಸಕ ಕೆ.ಎಂ.ವಾಸುದೇವ ಮೇಲೆ ಸಾಕ್ಷಾಧಾರವಿಲ್ಲದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರ್ನಾಡ ಮುಡಿಪು ಪದವಿ ಪೂರ್ವ ಕಾಲೇಜಿಗೆ ವರ್ಗಾವಣೆ ಮಾಡಲಾಗಿದೆ. ವಿಷಯ ತಿಳಿದ ಹಳೆಯ ವಿದ್ಯಾರ್ಥಿಗಳು ಮತ್ತು ಹಾಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಮೂಲಕ ಪ್ರಾಥಮಿಕ ಮತ್ತುಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್‌ಗೆ ಮನವಿ ಸಲ್ಲಿಸಿದ್ದಾರೆ.

ವರ್ಗಾವಣೆಯ ವಿಚಾರದಲ್ಲಿ ವಿದ್ಯಾರ್ಥಿಗಳು, ಸ್ಥಳೀಯರು, ಹಳೆಯ ವಿದ್ಯಾರ್ಥಿಗಳ ಅಭಿಪ್ರಾಯಗಳನ್ನು ಗಣನೆಗೆ ತೆಗದುಕೊಳ್ಳಬೇಕು ಎಂದು ನಾವು ಒತ್ತಾಯಿಸುತ್ತೇವೆ. ಕೆ.ಎಂ.ವಾಸುದೇವ ಅವರು ಶೀಳನೆರೆಯ ಕಾಲೇಜಿಗೆ ಬಂದ ನಂತರ ಕಾಲೇಜು ಹಾಗೂ ವಿದ್ಯಾರ್ಥಿಗಳ ಸಾಮರ್ಥ್ಯಾಭಿವೃದ್ದಿಗಾಗಿ ಬಹಳಷ್ಟು ಶ್ರಮಿಸಿದ್ದಾರೆ’ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕೆ.ಎಂ.ವಾಸುದೇವ ಅವರು ಈ ಕಾಲೇಜಿನ ಉಪನ್ಯಾಸಕರಾದಾಗಿನಿಂದ ಇಲ್ಲಿಯವರೆಗೂ ಪ್ರತಿ ಶೈಕ್ಷಣಿಕ ವರ್ಷದಲ್ಲಿಯು ಫಲಿತಾಂಶ ಉತ್ತಮ ರೀತಿಯಲ್ಲಿದೆ. ಅಲ್ಲದೆ, ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯದಲ್ಲಿ, ವಿಶೇಷವಾಗಿ ಇಂಗ್ಲಿಷ್ ವಿಷಯದಲ್ಲಿ ವಿದ್ಯಾರ್ಥಿಗಳ ಕಲಿಕೆ ಬಹಳಷ್ಟು ಸುಧಾರಿಸಿದೆ. ಸಮಯವನ್ನು ಲೆಕ್ಕಿಸದೆ ವಿದ್ಯಾರ್ಥಿಗಳಿಗೆ ಭೋಧನೆಯನ್ನು ಮಾಡುವ ಮೂಲಕ ವಿದ್ಯಾರ್ಥಿಗಳ ಹಾಗೂ ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಬಿಡುವಿನ ಸಮಯವನ್ನೂ ಕೂಡ ಸರ್ಕಾರಿ ಶಾಲಾ-ಕಾಲೇಜುಗಳ ಅಭಿವೃದ್ಧಿಗಾಗಿ ಮೀಸಲಿಟ್ಟು, ದುಡಿದಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಕೆ.ಆರ್.ಪೇಟೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆ (ಶತಮಾನದ ಶಾಲೆ)ಯನ್ನು ಅಭಿವೃದ್ಧಿಗೊಳಿಸಲು ಕೆ.ಎಂ.ವಾಸುದೇವ ಅವರು ಸಾಕಷ್ಟು ಶ್ರಮಿಸಿದ್ದಾರೆ. ಅಲ್ಲದೆ, ಅದೇ ಶಾಲೆಗೆ ತಮ್ಮ ಮಗನಾದ ಬುದ್ದದಾಸ್ ಅವರನ್ನು ಸೇರಿಸಿದ್ದು, ಸರ್ಕಾರಿ ನೌಕರರಿಗೆ ಮಾದರಿಯಾಗಿದ್ದಾರೆ. ಶೀಳನೆರೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಮನೆ ( ಎಲ್.ಕೆ.ಜಿ. & ಯು.ಕೆ.ಜಿ) ತರಗತಿಗಳನ್ನ ತೆರೆಯುವುದರಲ್ಲಿ ಯಶಸ್ವಿಯಾಗಿದ್ದಾರೆ.

ಅವರ ಸೇವೆಯನ್ನು ಸಹಿಸದ ಕೆಲವು ತಿಳಿಗೇಡಿ-ಭ್ರಷ್ಟ ವ್ಯಕ್ತಿಗಳು ವಾಸುದೇವ ಅವರ ವಿರುದ್ಧ ಪದೇ-ಪದೇ ಮೂಗರ್ಜಿಗಳನ್ನು ಬರೆದಿದ್ದಾರೆ. ಯಾರೋ ಒಬ್ಬರು ದುರುದ್ದೇಶಗಳಿಂದ ಬರೆದ ಅರ್ಜಿಗೆ ಸಂಬಂಧಿಸಿದಂತೆ ಕಾಲೇಜಿನಿಂದಾಗಲಿ, ವಿದ್ಯಾರ್ಥಿಗಳಿಂದಾಗಲಿ ಅಥವಾ ಗ್ರಾಮಸ್ಥರಿಂದಾಗಲಿ ಮಾಹಿತಿಗಳನ್ನು ಪಡೆಯದೆ, ಸಮರ್ಪಕ ವಿಚಾರಣೆ ನಡೆಸದೆ ಕ್ರಮ ವಹಿಸಿರುವುದು ನಮಗೆಲ್ಲ ನೋವುಂಟುಮಾಡಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 6 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 6 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 11 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 8 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 10 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ