ಮಂಗಳೂರು ಪೊಲೀಸರೇ, ನೀವು ಲಿಫ್ಟ್ ಮಾಡಬೇಕಿರುವುದು ವಾಹನಗಳನ್ನಲ್ಲ, ಪಾರ್ಕಿಂಗ್ ಜಾಗ ಬಾಡಿಗೆಗೆ ಬಿಟ್ಟಿರೋ ಕಟ್ಟಡದ ಮಾಲಕರನ್ನು…!

🖊️ಭರತ್ ರಾಜ್

ನಿಮಗೆಲ್ಲಾ ಮಂಗಳೂರಿನ ಬಲ್ಮಠದಲ್ಲಿರೋ ಇಂದ್ರ ಭವನ ಅನ್ನೋ ಹೊಟೇಲ್ ಬಗ್ಗೆ ಗೊತ್ತಿದೆ ಅಂದುಕೊಳ್ತೀನಿ. ಬಜೆಟ್ ಹಣಕ್ಕೆ ಚಾ, ತಿಂಡಿ ತಿನ್ನೋಕೆ ಮತ್ತು ಕೊಂಚ ಹರಟೆ ಹೊಡೆದು ಚರ್ಚಿಸೋಕೆ ಹೇಳಿ ಮಾಡಿಸಿದ ಜಾಗ. ಆದ್ರೆ ಚಿಲ್ಲರೆ ಹಣದಲ್ಲಿ ಕಾಫಿ ತಿಂಡಿ ಕುಡಿಯೋಕೆ ಬರೋ ಗ್ರಾಹಕರು ಕಳೆದೊಂದು ತಿಂಗಳಿನಿಂದ ಸಾವಿರಾರು ರೂ. ಹಣವನ್ನ ಪೊಲೀಸರಿಗೆ ದಂಡದ ರೂಪದಲ್ಲಿ ಕಟ್ಟುತ್ತಿದ್ದಾರೆ.

ನೋ ಪಾರ್ಕಿಂಗ್ ಹೆಸರಲ್ಲಿ ಬೈಕ್ ಗಳನ್ನ ಲಿಫ್ಟ್ ಮಾಡಲಾಗುತ್ತಿದೆ. ಇರಲಿ ಬಿಡಿ, ಪೊಲೀಸರು ಅದ್ಯಾರದ್ದೋ ದೂರಿಗೆ ಸ್ಪಂದಿಸಿ ಬೆಳಿಗ್ಗಿನಿಂದ ಸಂಜೆಯವರೆಗೂ ಈ ಜಾಗದಲ್ಲಿ ತಮ್ಮ ಕರ್ತವ್ಯವನ್ನು ಚಾಚೂ ತಪ್ಪದೇ ಪಾಲಿಸ್ತಿದ್ದಾರೆ ಅನ್ನೋಣ. ಆದ್ರೆ ವಿಷ್ಯ ಇರೋದು, ಪೊಲೀಸರು ಕಳೆದೊಂದು ತಿಂಗಳಿನಿಂದ ಇಲ್ಲಿ ಬೈಕ್ ಗಳನ್ನು ಎತ್ತಾಕಿಗೊಂಡು ಹೋಗ್ತಾ ಇದ್ರೂ ಮತ್ತೆ ಮತ್ತೆ ಈ ಜಾಗದಲ್ಲಿ ಬೈಕ್ ಗಳು ಬಂದು ನಿಲ್ಲುತ್ತಲೇ ಇವೆ. ಇದಕ್ಕೆ ಕಾರಣ ಇಂದ್ರ ಭವನ ಹೊಟೇಲ್ ನ ಕಾಫಿ ಹೀರೋಕೆ ಬರೋ ಗ್ರಾಹಕರಿಗೆ ಈ ಭಾಗದಲ್ಲಿ ಮತ್ಯಾವ ಜಾಗದಲ್ಲೂ ಪಾರ್ಕಿಂಗ್ ಇಲ್ಲದೇ ಇರೋದು.

ಅಲ್ಲಿಗೆ ನಿಜವಾದ ಸಮಸ್ಯೆ ಇರೋದು ಹೊಟೇಲ್ ಗೆ ಬರೋ ಗ್ರಾಹಕನಲ್ಲಂತೂ ಅಲ್ಲವೇ ಅಲ್ಲ, ಸಮಸ್ಯೆ ಇರೋದು ಪಾರ್ಕಿಂಗ್ ಜಾಗ ಮೀಸಲಿಡದ ಹೊಟೇಲ್ ನವರದ್ದು. ಅಂದ್ರೆ ಈ ಹೊಟೇಲ್ ಇರೋದು ದ್ವಾರಕ ಅನ್ನೋ ಕಾಂಪ್ಲೆಕ್ಸ್ ‌ನಲ್ಲಿ. ಅಸಲಿಗೆ ಕಟ್ಟಡದ ಬೇಸ್ ಮೆಂಟ್ ಜಾಗವನ್ನ ವಾಹನಗಳ ಪಾರ್ಕಿಂಗ್ ಗೆ ಮೀಸಲಿಡಬೇಕಾದ ಕಟ್ಟಡದ ಮಾಲೀಕ ಅದನ್ನೂ ಹಣದಾಸೆಗೆ ಬಾಡಿಗೆಗೆ ಕೊಟ್ಟಿದ್ದಾರೆ ಬಿಡಿ!.

ಆದ್ರೆ ಇಂಥವರ ಮೇಲೆ ಕ್ರಮ ಕೈಗೊಳ್ಳಬೇಕಾದ ಬದಲು ನೋ ಪಾರ್ಕಿಂಗ್ ಹೆಸರಿನಲ್ಲಿ ವಸೂಲಿ ನಡೆಯುತ್ತಿದೆ. ಇದು ಮಂಗಳೂರಿನ ಮಟ್ಟಿಗೆ ಕೇವಲ ಒಂದು ಉದಾಹರಣೆಯಷ್ಟೇ. ಹಾಗೆ ನೋಡಿದರೆ ಮಂಗಳೂರಿನ ಬಹುತೇಕ ಕಡೆಗಳಲ್ಲಿ ಇಂಥದ್ದೇ ಪರಿಸ್ಥಿತಿಯಿದೆ.‌ ನಗರದ ಬಹುತೇಕ ಹೊಟೇಲ್ ಗಳ ಎದುರು ವಾಹನ ಪಾರ್ಕ್ ಮಾಡೋಕೆ ಜಾಗವೇ ಇಲ್ಲ. ಇರೋ ನೆಲ ಮಹಡಿಯ ಜಾಗಗಳನ್ನೂ ಪಾರ್ಕಿಂಗ್ ಬದಲು ಬಾಡಿಗೆಗೆ ಬಿಟ್ಟಿದ್ದಾರೆ ಮಾಲೀಕರು. ಹೀಗಿರುವಾಗ ಅ ಕಟ್ಟಡಕ್ಕೆ ಬರೋ ಗ್ರಾಹಕ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸೋದು ಅನಿವಾರ್ಯವೇ ಬಿಡಿ. ಇನ್ನು ಇಂಥದ್ದಕ್ಕೆ ದಂಡ ಹಾಕೋಕೆ ನಿಂತ್ರೆ ಮಂಗಳೂರು ಪೊಲೀಸರ ಆದಾಯ‌ ಅಬಕಾರಿ ಇಲಾಖೆಯ ಆದಾಯವನ್ನೂ ಮೀರಿಸದೇ ಇರದು. ಅಸಲಿಗೆ ಮಂಗಳೂರು ನಗರದ ಈ ಹಿಂದಿನ ಇಬ್ಬರು ಪೊಲೀಸ್ ಆಯುಕ್ತರು ಇದೇ ಕಾರಣಕ್ಕೆ ನಗರದಲ್ಲಿ ಪಾರ್ಕಿಂಗ್ ಜಾಗ ಅತಿಕ್ರಮಿಸಿರೋ ಕಟ್ಟಡಗಳ ಲಿಸ್ಟ್ ಮಾಡಿದ್ದರು. ಅದನ್ನ ಮಂಗಳೂರು ಮಹಾನಗರ ಪಾಲಿಕೆಗೆ ಕೊಟ್ಟು ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಿದ್ದರು. ಆದ್ರೆ ಪೊಲೀಸ್ ಕಮಿಷನರ್ ಗಳು ಬದಲಾದ್ರೆ ವಿನಃ ಮಂಗಳೂರು ಪಾಲಿಕೆ ಮಾತ್ರ ಅಂಥದ್ದೊಂದು ಗಂಡಸ್ತನ ತೋರುವ ಕೆಲಸ ಮಾಡಲೇ ಇಲ್ಲ.

ಈ ಮಧ್ಯೆ ಕೆಲ ಕಟ್ಟಡ ಮಾಲೀಕರು ಕೋರ್ಟ್ ಗೆ ಹೋಗಿದ್ದಾರೆ ಅಂತೆಲ್ಲಾ ರಾಗ ಬದಲಿಸಿದ್ದು ಬಿಟ್ರೆ ನ್ಯಾಯಾಲಯದ ಎದುರು ವಾಸ್ತವತೆ ಬಿಚ್ಚಿಡೋ ಪ್ರತಿವಾದವನ್ನೂ ಪಾಲಿಕೆ ಆಡಳಿತ ಮಾಡಿದಂತೆ ತೋರುತ್ತಿಲ್ಲ. ಪರಿಣಾಮ ಇಂದಿಗೂ ನಗರದಲ್ಲಿರೋ ಬಹುತೇಕ ಎಲ್ಲಾ ಕಟ್ಟಡಗಳ ಪಾರ್ಕಿಂಗ್ ಜಾಗಗಳು ಬಾಡಿಗೆ ಹೆಸರಲ್ಲಿ ಮಾಲೀಕರ ಜೇಬು ತುಂಬಿಸುತ್ತಿವೆ. ಅ ಕಟ್ಟಡಕ್ಕೆ ಅಗತ್ಯ ಕೆಲಸಕ್ಕೆ ಅಂತ ಬರೋ ಗ್ರಾಹಕರು ರಸ್ತೆಯಲ್ಲೋ ಇನ್ನೆಲ್ಲೋ ವಾಹನವಿಟ್ಟು ಪೊಲೀಸರಿಗೆ ದಂಡ ತೆರುವಂತಾಗಿದೆ. ಇನ್ನು ನಮ್ಮ‌ ಪೊಲೀಸರಿಗಂತೂ ಹೀಗೆ ಸಿಗೋ ಬೈಕ್ ಗಳನ್ನ ಎತ್ತಾಕಿಕೊಂಡು ಹೋಗೋದೇ ಅಪ್ಪಟ ಕರ್ತವ್ಯ ನಿಷ್ಠೆ…! ಅದರ ಬದಲು ಎತ್ತಿಕೊಂಡು ಹೋದ ಜಾಗದಲ್ಲಿ ಮತ್ತೆ ಮತ್ತೆ ವಾಹನಗಳನ್ನು ಪಾರ್ಕ್ ಯಾಕೆ ಮಾಡ್ತಾರೆ ಮತ್ತು ಅದಕ್ಕೆ ಪರಿಹಾರ ಏನು ಅನ್ನೋದ್ರ ಬಗ್ಗೆ ಪೊಲೀಸ್ ಇಲಾಖೆ ಗಮನ ಹರಿಸಬೇಕಿದೆ.

ಇದರ ಜೊತೆಗೆ ಹಿಂದಿನ ಪೊಲೀಸ್ ಕಮಿಷನರ್ ಗಳು ಕೊಟ್ಟಿರೋ‌ ಪಾರ್ಕಿಂಗ್ ಅತಿಕ್ರಮಿಸಿರೋ ಕಟ್ಟಡಗಳ ಲಿಸ್ಟ್ ತೆಗೆದು ಪಾಲಿಕೆ ಅಧಿಕಾರಿಗಳು ‌ಫೀಲ್ಡಿಗಿಳಿಯಲಿ. ಅಂಥ ಅತಿಕ್ರಮಣ ತೆರವು ಮಾಡೋ ಕೊಂಚ ಧೈರ್ಯ ತೋರುವ ಕೆಲಸವಾದರೂ ಆಗಲಿ. ಆಗ ಮಾತ್ರ ಮಂಗಳೂರಿನ ಪಾರ್ಕಿಂಗ್ ಸಮಸ್ಯೆಗೆ ಸಂಪೂರ್ಣ ಅಲ್ಲದೇ ಇದ್ದರೂ ಅರ್ಧದಷ್ಟಾದರೂ ಪರಿಹಾರ ಸಿಗಲಿದೆ. ಸ್ಮಾರ್ಟ್ ಸಿಟಿ ಹೆಸರಲ್ಲಿ ರಸ್ತೆಗಳ ಉದ್ದ ಅಗಲ ಹೆಚ್ಚಿಸಿ ಕಾಂಕ್ರೀಟ್ ನ ಶೃಂಗಾರ ಮಾಡಿದರೆ ಸಾಲದು. ಇಷ್ಟೆಲ್ಲಾ ಮಾಡಿದರೂ ಮತ್ತೆ ಮತ್ತೆ ವಾಹನಗಳು ರಸ್ತೆಯಲ್ಲೇ ನಿಲ್ಲಬೇಕು, ಮತ್ತೆ ಮತ್ತೆ ಫೈನ್ ಕಟ್ಟಬೇಕು ಅನ್ನೋದಾದರೆ ನಿಮ್ಮ ಈ ಸ್ಮಾರ್ಟ್ ಸಿಟಿ ಯಾವ ಪುರುಷಾರ್ಥಕ್ಕೆ? ಮೊದಲು ಕಟ್ಟಡಗಳ ಅತಿಕ್ರಮ ತೆರವು ಮಾಡಿ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಡುವ ಕೆಲಸ ಆಗಬೇಕಿದೆ. ಸರ್ಕಾರದ ಬೊಕ್ಕಸ ತುಂಬಿಸಲು ದಂಡದ ಹೆಸರಲ್ಲಿ ಬೈಕ್ ಚಾಲಕರ ಜೇಬಿಗೆ ಕತ್ತರಿ ಹಾಕಿದರೆ ಏನು ಫಲ? ನೂರು ರೂ. ಪೆಟ್ರೋಲ್ ಜೊತೆಗೆ ಚಿಲ್ಲರೆ ಹಣದಲ್ಲಿ ಕಾಫಿ ತಿಂಡಿ ತಿಂದು ಬದುಕೋರಿಂದ ಸಾವಿರಾರು ರೂ. ದಂಡ ಕಿತ್ತು ಸಾಧಿಸೋದಾದ್ರೂ ಏನು?

ಸದ್ಯ ಮಂಗಳೂರಿಗೆ ಹೊಸ ಪೊಲೀಸ್ ಕಮಿಷನರ್ ‌ಬಂದಿದ್ದಾರೆ. ಪಾಲಿಕೆ ಆಡಳಿತಕ್ಕೆ ನೆನಪಿಲ್ಲ ಅಂತಾದ್ರೆ ಮತ್ತೆ ಆ ಅಕ್ರಮ ಕಟ್ಟಡಗಳ ಫೈಲ್ ತೆಗೆದು ಪಾಲಿಕೆ ಅಧಿಕಾರಿಗಳ ಮುಖಕ್ಕೆ ಎಸೆಯಿರಿ. ಒತ್ತಡ ತಂದಾದ್ರೂ ಆ ಕೆಲಸ ‌ಮಾಡಿಸಿ..ಆಗ ಮಾತ್ರ ಮಂಗಳೂರು ನಿಮ್ಮಂಥವರನ್ನ ನೆನಪಿನಲ್ಲಿಟ್ಟುಕೊಳ್ಳುತ್ತೆ…ದಂಡ ಹಾಕುವುದರ ಹೊರತಾಗಿಯೂ ಇಂಥ ಸಮಸ್ಯೆಗಳಿಗೆ ಪರಿಹಾರವಿದೆ…ದಯವಿಟ್ಟು ಅದನ್ನ ಮಾಡಿ ತೋರಿಸಿ…

Spread the love
  • Related Posts

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಬೆಳ್ತಂಗಡಿ: ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಪುಷ್ಟಿ ಮುಂಡಾಜೆಗೆ ಪ್ರಥಮ ಸ್ಥಾನ. ಅಳದಂಗಡಿ ಆಮಂತ್ರಣ ಪರಿವಾರದ ದಶಮಾನೋತ್ಸವದ ಸಂದರ್ಭ ಶನಿವಾರ ಅಳದಂಗಡಿಯಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ…

    Spread the love

    You Missed

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 302 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 101 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 96 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 84 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 68 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

    • By admin
    • January 17, 2026
    • 88 views
    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ