ಮಂಗಳೂರು ಪೊಲೀಸರೇ, ನೀವು ಲಿಫ್ಟ್ ಮಾಡಬೇಕಿರುವುದು ವಾಹನಗಳನ್ನಲ್ಲ, ಪಾರ್ಕಿಂಗ್ ಜಾಗ ಬಾಡಿಗೆಗೆ ಬಿಟ್ಟಿರೋ ಕಟ್ಟಡದ ಮಾಲಕರನ್ನು…!

🖊️ಭರತ್ ರಾಜ್

ನಿಮಗೆಲ್ಲಾ ಮಂಗಳೂರಿನ ಬಲ್ಮಠದಲ್ಲಿರೋ ಇಂದ್ರ ಭವನ ಅನ್ನೋ ಹೊಟೇಲ್ ಬಗ್ಗೆ ಗೊತ್ತಿದೆ ಅಂದುಕೊಳ್ತೀನಿ. ಬಜೆಟ್ ಹಣಕ್ಕೆ ಚಾ, ತಿಂಡಿ ತಿನ್ನೋಕೆ ಮತ್ತು ಕೊಂಚ ಹರಟೆ ಹೊಡೆದು ಚರ್ಚಿಸೋಕೆ ಹೇಳಿ ಮಾಡಿಸಿದ ಜಾಗ. ಆದ್ರೆ ಚಿಲ್ಲರೆ ಹಣದಲ್ಲಿ ಕಾಫಿ ತಿಂಡಿ ಕುಡಿಯೋಕೆ ಬರೋ ಗ್ರಾಹಕರು ಕಳೆದೊಂದು ತಿಂಗಳಿನಿಂದ ಸಾವಿರಾರು ರೂ. ಹಣವನ್ನ ಪೊಲೀಸರಿಗೆ ದಂಡದ ರೂಪದಲ್ಲಿ ಕಟ್ಟುತ್ತಿದ್ದಾರೆ.

ನೋ ಪಾರ್ಕಿಂಗ್ ಹೆಸರಲ್ಲಿ ಬೈಕ್ ಗಳನ್ನ ಲಿಫ್ಟ್ ಮಾಡಲಾಗುತ್ತಿದೆ. ಇರಲಿ ಬಿಡಿ, ಪೊಲೀಸರು ಅದ್ಯಾರದ್ದೋ ದೂರಿಗೆ ಸ್ಪಂದಿಸಿ ಬೆಳಿಗ್ಗಿನಿಂದ ಸಂಜೆಯವರೆಗೂ ಈ ಜಾಗದಲ್ಲಿ ತಮ್ಮ ಕರ್ತವ್ಯವನ್ನು ಚಾಚೂ ತಪ್ಪದೇ ಪಾಲಿಸ್ತಿದ್ದಾರೆ ಅನ್ನೋಣ. ಆದ್ರೆ ವಿಷ್ಯ ಇರೋದು, ಪೊಲೀಸರು ಕಳೆದೊಂದು ತಿಂಗಳಿನಿಂದ ಇಲ್ಲಿ ಬೈಕ್ ಗಳನ್ನು ಎತ್ತಾಕಿಗೊಂಡು ಹೋಗ್ತಾ ಇದ್ರೂ ಮತ್ತೆ ಮತ್ತೆ ಈ ಜಾಗದಲ್ಲಿ ಬೈಕ್ ಗಳು ಬಂದು ನಿಲ್ಲುತ್ತಲೇ ಇವೆ. ಇದಕ್ಕೆ ಕಾರಣ ಇಂದ್ರ ಭವನ ಹೊಟೇಲ್ ನ ಕಾಫಿ ಹೀರೋಕೆ ಬರೋ ಗ್ರಾಹಕರಿಗೆ ಈ ಭಾಗದಲ್ಲಿ ಮತ್ಯಾವ ಜಾಗದಲ್ಲೂ ಪಾರ್ಕಿಂಗ್ ಇಲ್ಲದೇ ಇರೋದು.

ಅಲ್ಲಿಗೆ ನಿಜವಾದ ಸಮಸ್ಯೆ ಇರೋದು ಹೊಟೇಲ್ ಗೆ ಬರೋ ಗ್ರಾಹಕನಲ್ಲಂತೂ ಅಲ್ಲವೇ ಅಲ್ಲ, ಸಮಸ್ಯೆ ಇರೋದು ಪಾರ್ಕಿಂಗ್ ಜಾಗ ಮೀಸಲಿಡದ ಹೊಟೇಲ್ ನವರದ್ದು. ಅಂದ್ರೆ ಈ ಹೊಟೇಲ್ ಇರೋದು ದ್ವಾರಕ ಅನ್ನೋ ಕಾಂಪ್ಲೆಕ್ಸ್ ‌ನಲ್ಲಿ. ಅಸಲಿಗೆ ಕಟ್ಟಡದ ಬೇಸ್ ಮೆಂಟ್ ಜಾಗವನ್ನ ವಾಹನಗಳ ಪಾರ್ಕಿಂಗ್ ಗೆ ಮೀಸಲಿಡಬೇಕಾದ ಕಟ್ಟಡದ ಮಾಲೀಕ ಅದನ್ನೂ ಹಣದಾಸೆಗೆ ಬಾಡಿಗೆಗೆ ಕೊಟ್ಟಿದ್ದಾರೆ ಬಿಡಿ!.

ಆದ್ರೆ ಇಂಥವರ ಮೇಲೆ ಕ್ರಮ ಕೈಗೊಳ್ಳಬೇಕಾದ ಬದಲು ನೋ ಪಾರ್ಕಿಂಗ್ ಹೆಸರಿನಲ್ಲಿ ವಸೂಲಿ ನಡೆಯುತ್ತಿದೆ. ಇದು ಮಂಗಳೂರಿನ ಮಟ್ಟಿಗೆ ಕೇವಲ ಒಂದು ಉದಾಹರಣೆಯಷ್ಟೇ. ಹಾಗೆ ನೋಡಿದರೆ ಮಂಗಳೂರಿನ ಬಹುತೇಕ ಕಡೆಗಳಲ್ಲಿ ಇಂಥದ್ದೇ ಪರಿಸ್ಥಿತಿಯಿದೆ.‌ ನಗರದ ಬಹುತೇಕ ಹೊಟೇಲ್ ಗಳ ಎದುರು ವಾಹನ ಪಾರ್ಕ್ ಮಾಡೋಕೆ ಜಾಗವೇ ಇಲ್ಲ. ಇರೋ ನೆಲ ಮಹಡಿಯ ಜಾಗಗಳನ್ನೂ ಪಾರ್ಕಿಂಗ್ ಬದಲು ಬಾಡಿಗೆಗೆ ಬಿಟ್ಟಿದ್ದಾರೆ ಮಾಲೀಕರು. ಹೀಗಿರುವಾಗ ಅ ಕಟ್ಟಡಕ್ಕೆ ಬರೋ ಗ್ರಾಹಕ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸೋದು ಅನಿವಾರ್ಯವೇ ಬಿಡಿ. ಇನ್ನು ಇಂಥದ್ದಕ್ಕೆ ದಂಡ ಹಾಕೋಕೆ ನಿಂತ್ರೆ ಮಂಗಳೂರು ಪೊಲೀಸರ ಆದಾಯ‌ ಅಬಕಾರಿ ಇಲಾಖೆಯ ಆದಾಯವನ್ನೂ ಮೀರಿಸದೇ ಇರದು. ಅಸಲಿಗೆ ಮಂಗಳೂರು ನಗರದ ಈ ಹಿಂದಿನ ಇಬ್ಬರು ಪೊಲೀಸ್ ಆಯುಕ್ತರು ಇದೇ ಕಾರಣಕ್ಕೆ ನಗರದಲ್ಲಿ ಪಾರ್ಕಿಂಗ್ ಜಾಗ ಅತಿಕ್ರಮಿಸಿರೋ ಕಟ್ಟಡಗಳ ಲಿಸ್ಟ್ ಮಾಡಿದ್ದರು. ಅದನ್ನ ಮಂಗಳೂರು ಮಹಾನಗರ ಪಾಲಿಕೆಗೆ ಕೊಟ್ಟು ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಿದ್ದರು. ಆದ್ರೆ ಪೊಲೀಸ್ ಕಮಿಷನರ್ ಗಳು ಬದಲಾದ್ರೆ ವಿನಃ ಮಂಗಳೂರು ಪಾಲಿಕೆ ಮಾತ್ರ ಅಂಥದ್ದೊಂದು ಗಂಡಸ್ತನ ತೋರುವ ಕೆಲಸ ಮಾಡಲೇ ಇಲ್ಲ.

ಈ ಮಧ್ಯೆ ಕೆಲ ಕಟ್ಟಡ ಮಾಲೀಕರು ಕೋರ್ಟ್ ಗೆ ಹೋಗಿದ್ದಾರೆ ಅಂತೆಲ್ಲಾ ರಾಗ ಬದಲಿಸಿದ್ದು ಬಿಟ್ರೆ ನ್ಯಾಯಾಲಯದ ಎದುರು ವಾಸ್ತವತೆ ಬಿಚ್ಚಿಡೋ ಪ್ರತಿವಾದವನ್ನೂ ಪಾಲಿಕೆ ಆಡಳಿತ ಮಾಡಿದಂತೆ ತೋರುತ್ತಿಲ್ಲ. ಪರಿಣಾಮ ಇಂದಿಗೂ ನಗರದಲ್ಲಿರೋ ಬಹುತೇಕ ಎಲ್ಲಾ ಕಟ್ಟಡಗಳ ಪಾರ್ಕಿಂಗ್ ಜಾಗಗಳು ಬಾಡಿಗೆ ಹೆಸರಲ್ಲಿ ಮಾಲೀಕರ ಜೇಬು ತುಂಬಿಸುತ್ತಿವೆ. ಅ ಕಟ್ಟಡಕ್ಕೆ ಅಗತ್ಯ ಕೆಲಸಕ್ಕೆ ಅಂತ ಬರೋ ಗ್ರಾಹಕರು ರಸ್ತೆಯಲ್ಲೋ ಇನ್ನೆಲ್ಲೋ ವಾಹನವಿಟ್ಟು ಪೊಲೀಸರಿಗೆ ದಂಡ ತೆರುವಂತಾಗಿದೆ. ಇನ್ನು ನಮ್ಮ‌ ಪೊಲೀಸರಿಗಂತೂ ಹೀಗೆ ಸಿಗೋ ಬೈಕ್ ಗಳನ್ನ ಎತ್ತಾಕಿಕೊಂಡು ಹೋಗೋದೇ ಅಪ್ಪಟ ಕರ್ತವ್ಯ ನಿಷ್ಠೆ…! ಅದರ ಬದಲು ಎತ್ತಿಕೊಂಡು ಹೋದ ಜಾಗದಲ್ಲಿ ಮತ್ತೆ ಮತ್ತೆ ವಾಹನಗಳನ್ನು ಪಾರ್ಕ್ ಯಾಕೆ ಮಾಡ್ತಾರೆ ಮತ್ತು ಅದಕ್ಕೆ ಪರಿಹಾರ ಏನು ಅನ್ನೋದ್ರ ಬಗ್ಗೆ ಪೊಲೀಸ್ ಇಲಾಖೆ ಗಮನ ಹರಿಸಬೇಕಿದೆ.

ಇದರ ಜೊತೆಗೆ ಹಿಂದಿನ ಪೊಲೀಸ್ ಕಮಿಷನರ್ ಗಳು ಕೊಟ್ಟಿರೋ‌ ಪಾರ್ಕಿಂಗ್ ಅತಿಕ್ರಮಿಸಿರೋ ಕಟ್ಟಡಗಳ ಲಿಸ್ಟ್ ತೆಗೆದು ಪಾಲಿಕೆ ಅಧಿಕಾರಿಗಳು ‌ಫೀಲ್ಡಿಗಿಳಿಯಲಿ. ಅಂಥ ಅತಿಕ್ರಮಣ ತೆರವು ಮಾಡೋ ಕೊಂಚ ಧೈರ್ಯ ತೋರುವ ಕೆಲಸವಾದರೂ ಆಗಲಿ. ಆಗ ಮಾತ್ರ ಮಂಗಳೂರಿನ ಪಾರ್ಕಿಂಗ್ ಸಮಸ್ಯೆಗೆ ಸಂಪೂರ್ಣ ಅಲ್ಲದೇ ಇದ್ದರೂ ಅರ್ಧದಷ್ಟಾದರೂ ಪರಿಹಾರ ಸಿಗಲಿದೆ. ಸ್ಮಾರ್ಟ್ ಸಿಟಿ ಹೆಸರಲ್ಲಿ ರಸ್ತೆಗಳ ಉದ್ದ ಅಗಲ ಹೆಚ್ಚಿಸಿ ಕಾಂಕ್ರೀಟ್ ನ ಶೃಂಗಾರ ಮಾಡಿದರೆ ಸಾಲದು. ಇಷ್ಟೆಲ್ಲಾ ಮಾಡಿದರೂ ಮತ್ತೆ ಮತ್ತೆ ವಾಹನಗಳು ರಸ್ತೆಯಲ್ಲೇ ನಿಲ್ಲಬೇಕು, ಮತ್ತೆ ಮತ್ತೆ ಫೈನ್ ಕಟ್ಟಬೇಕು ಅನ್ನೋದಾದರೆ ನಿಮ್ಮ ಈ ಸ್ಮಾರ್ಟ್ ಸಿಟಿ ಯಾವ ಪುರುಷಾರ್ಥಕ್ಕೆ? ಮೊದಲು ಕಟ್ಟಡಗಳ ಅತಿಕ್ರಮ ತೆರವು ಮಾಡಿ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಡುವ ಕೆಲಸ ಆಗಬೇಕಿದೆ. ಸರ್ಕಾರದ ಬೊಕ್ಕಸ ತುಂಬಿಸಲು ದಂಡದ ಹೆಸರಲ್ಲಿ ಬೈಕ್ ಚಾಲಕರ ಜೇಬಿಗೆ ಕತ್ತರಿ ಹಾಕಿದರೆ ಏನು ಫಲ? ನೂರು ರೂ. ಪೆಟ್ರೋಲ್ ಜೊತೆಗೆ ಚಿಲ್ಲರೆ ಹಣದಲ್ಲಿ ಕಾಫಿ ತಿಂಡಿ ತಿಂದು ಬದುಕೋರಿಂದ ಸಾವಿರಾರು ರೂ. ದಂಡ ಕಿತ್ತು ಸಾಧಿಸೋದಾದ್ರೂ ಏನು?

ಸದ್ಯ ಮಂಗಳೂರಿಗೆ ಹೊಸ ಪೊಲೀಸ್ ಕಮಿಷನರ್ ‌ಬಂದಿದ್ದಾರೆ. ಪಾಲಿಕೆ ಆಡಳಿತಕ್ಕೆ ನೆನಪಿಲ್ಲ ಅಂತಾದ್ರೆ ಮತ್ತೆ ಆ ಅಕ್ರಮ ಕಟ್ಟಡಗಳ ಫೈಲ್ ತೆಗೆದು ಪಾಲಿಕೆ ಅಧಿಕಾರಿಗಳ ಮುಖಕ್ಕೆ ಎಸೆಯಿರಿ. ಒತ್ತಡ ತಂದಾದ್ರೂ ಆ ಕೆಲಸ ‌ಮಾಡಿಸಿ..ಆಗ ಮಾತ್ರ ಮಂಗಳೂರು ನಿಮ್ಮಂಥವರನ್ನ ನೆನಪಿನಲ್ಲಿಟ್ಟುಕೊಳ್ಳುತ್ತೆ…ದಂಡ ಹಾಕುವುದರ ಹೊರತಾಗಿಯೂ ಇಂಥ ಸಮಸ್ಯೆಗಳಿಗೆ ಪರಿಹಾರವಿದೆ…ದಯವಿಟ್ಟು ಅದನ್ನ ಮಾಡಿ ತೋರಿಸಿ…

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 105 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 64 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 194 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 197 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 100 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 118 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ