ಮಂಗಳೂರು ಪೊಲೀಸರೇ, ನೀವು ಲಿಫ್ಟ್ ಮಾಡಬೇಕಿರುವುದು ವಾಹನಗಳನ್ನಲ್ಲ, ಪಾರ್ಕಿಂಗ್ ಜಾಗ ಬಾಡಿಗೆಗೆ ಬಿಟ್ಟಿರೋ ಕಟ್ಟಡದ ಮಾಲಕರನ್ನು…!

🖊️ಭರತ್ ರಾಜ್

ನಿಮಗೆಲ್ಲಾ ಮಂಗಳೂರಿನ ಬಲ್ಮಠದಲ್ಲಿರೋ ಇಂದ್ರ ಭವನ ಅನ್ನೋ ಹೊಟೇಲ್ ಬಗ್ಗೆ ಗೊತ್ತಿದೆ ಅಂದುಕೊಳ್ತೀನಿ. ಬಜೆಟ್ ಹಣಕ್ಕೆ ಚಾ, ತಿಂಡಿ ತಿನ್ನೋಕೆ ಮತ್ತು ಕೊಂಚ ಹರಟೆ ಹೊಡೆದು ಚರ್ಚಿಸೋಕೆ ಹೇಳಿ ಮಾಡಿಸಿದ ಜಾಗ. ಆದ್ರೆ ಚಿಲ್ಲರೆ ಹಣದಲ್ಲಿ ಕಾಫಿ ತಿಂಡಿ ಕುಡಿಯೋಕೆ ಬರೋ ಗ್ರಾಹಕರು ಕಳೆದೊಂದು ತಿಂಗಳಿನಿಂದ ಸಾವಿರಾರು ರೂ. ಹಣವನ್ನ ಪೊಲೀಸರಿಗೆ ದಂಡದ ರೂಪದಲ್ಲಿ ಕಟ್ಟುತ್ತಿದ್ದಾರೆ.

ನೋ ಪಾರ್ಕಿಂಗ್ ಹೆಸರಲ್ಲಿ ಬೈಕ್ ಗಳನ್ನ ಲಿಫ್ಟ್ ಮಾಡಲಾಗುತ್ತಿದೆ. ಇರಲಿ ಬಿಡಿ, ಪೊಲೀಸರು ಅದ್ಯಾರದ್ದೋ ದೂರಿಗೆ ಸ್ಪಂದಿಸಿ ಬೆಳಿಗ್ಗಿನಿಂದ ಸಂಜೆಯವರೆಗೂ ಈ ಜಾಗದಲ್ಲಿ ತಮ್ಮ ಕರ್ತವ್ಯವನ್ನು ಚಾಚೂ ತಪ್ಪದೇ ಪಾಲಿಸ್ತಿದ್ದಾರೆ ಅನ್ನೋಣ. ಆದ್ರೆ ವಿಷ್ಯ ಇರೋದು, ಪೊಲೀಸರು ಕಳೆದೊಂದು ತಿಂಗಳಿನಿಂದ ಇಲ್ಲಿ ಬೈಕ್ ಗಳನ್ನು ಎತ್ತಾಕಿಗೊಂಡು ಹೋಗ್ತಾ ಇದ್ರೂ ಮತ್ತೆ ಮತ್ತೆ ಈ ಜಾಗದಲ್ಲಿ ಬೈಕ್ ಗಳು ಬಂದು ನಿಲ್ಲುತ್ತಲೇ ಇವೆ. ಇದಕ್ಕೆ ಕಾರಣ ಇಂದ್ರ ಭವನ ಹೊಟೇಲ್ ನ ಕಾಫಿ ಹೀರೋಕೆ ಬರೋ ಗ್ರಾಹಕರಿಗೆ ಈ ಭಾಗದಲ್ಲಿ ಮತ್ಯಾವ ಜಾಗದಲ್ಲೂ ಪಾರ್ಕಿಂಗ್ ಇಲ್ಲದೇ ಇರೋದು.

ಅಲ್ಲಿಗೆ ನಿಜವಾದ ಸಮಸ್ಯೆ ಇರೋದು ಹೊಟೇಲ್ ಗೆ ಬರೋ ಗ್ರಾಹಕನಲ್ಲಂತೂ ಅಲ್ಲವೇ ಅಲ್ಲ, ಸಮಸ್ಯೆ ಇರೋದು ಪಾರ್ಕಿಂಗ್ ಜಾಗ ಮೀಸಲಿಡದ ಹೊಟೇಲ್ ನವರದ್ದು. ಅಂದ್ರೆ ಈ ಹೊಟೇಲ್ ಇರೋದು ದ್ವಾರಕ ಅನ್ನೋ ಕಾಂಪ್ಲೆಕ್ಸ್ ‌ನಲ್ಲಿ. ಅಸಲಿಗೆ ಕಟ್ಟಡದ ಬೇಸ್ ಮೆಂಟ್ ಜಾಗವನ್ನ ವಾಹನಗಳ ಪಾರ್ಕಿಂಗ್ ಗೆ ಮೀಸಲಿಡಬೇಕಾದ ಕಟ್ಟಡದ ಮಾಲೀಕ ಅದನ್ನೂ ಹಣದಾಸೆಗೆ ಬಾಡಿಗೆಗೆ ಕೊಟ್ಟಿದ್ದಾರೆ ಬಿಡಿ!.

ಆದ್ರೆ ಇಂಥವರ ಮೇಲೆ ಕ್ರಮ ಕೈಗೊಳ್ಳಬೇಕಾದ ಬದಲು ನೋ ಪಾರ್ಕಿಂಗ್ ಹೆಸರಿನಲ್ಲಿ ವಸೂಲಿ ನಡೆಯುತ್ತಿದೆ. ಇದು ಮಂಗಳೂರಿನ ಮಟ್ಟಿಗೆ ಕೇವಲ ಒಂದು ಉದಾಹರಣೆಯಷ್ಟೇ. ಹಾಗೆ ನೋಡಿದರೆ ಮಂಗಳೂರಿನ ಬಹುತೇಕ ಕಡೆಗಳಲ್ಲಿ ಇಂಥದ್ದೇ ಪರಿಸ್ಥಿತಿಯಿದೆ.‌ ನಗರದ ಬಹುತೇಕ ಹೊಟೇಲ್ ಗಳ ಎದುರು ವಾಹನ ಪಾರ್ಕ್ ಮಾಡೋಕೆ ಜಾಗವೇ ಇಲ್ಲ. ಇರೋ ನೆಲ ಮಹಡಿಯ ಜಾಗಗಳನ್ನೂ ಪಾರ್ಕಿಂಗ್ ಬದಲು ಬಾಡಿಗೆಗೆ ಬಿಟ್ಟಿದ್ದಾರೆ ಮಾಲೀಕರು. ಹೀಗಿರುವಾಗ ಅ ಕಟ್ಟಡಕ್ಕೆ ಬರೋ ಗ್ರಾಹಕ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸೋದು ಅನಿವಾರ್ಯವೇ ಬಿಡಿ. ಇನ್ನು ಇಂಥದ್ದಕ್ಕೆ ದಂಡ ಹಾಕೋಕೆ ನಿಂತ್ರೆ ಮಂಗಳೂರು ಪೊಲೀಸರ ಆದಾಯ‌ ಅಬಕಾರಿ ಇಲಾಖೆಯ ಆದಾಯವನ್ನೂ ಮೀರಿಸದೇ ಇರದು. ಅಸಲಿಗೆ ಮಂಗಳೂರು ನಗರದ ಈ ಹಿಂದಿನ ಇಬ್ಬರು ಪೊಲೀಸ್ ಆಯುಕ್ತರು ಇದೇ ಕಾರಣಕ್ಕೆ ನಗರದಲ್ಲಿ ಪಾರ್ಕಿಂಗ್ ಜಾಗ ಅತಿಕ್ರಮಿಸಿರೋ ಕಟ್ಟಡಗಳ ಲಿಸ್ಟ್ ಮಾಡಿದ್ದರು. ಅದನ್ನ ಮಂಗಳೂರು ಮಹಾನಗರ ಪಾಲಿಕೆಗೆ ಕೊಟ್ಟು ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಿದ್ದರು. ಆದ್ರೆ ಪೊಲೀಸ್ ಕಮಿಷನರ್ ಗಳು ಬದಲಾದ್ರೆ ವಿನಃ ಮಂಗಳೂರು ಪಾಲಿಕೆ ಮಾತ್ರ ಅಂಥದ್ದೊಂದು ಗಂಡಸ್ತನ ತೋರುವ ಕೆಲಸ ಮಾಡಲೇ ಇಲ್ಲ.

ಈ ಮಧ್ಯೆ ಕೆಲ ಕಟ್ಟಡ ಮಾಲೀಕರು ಕೋರ್ಟ್ ಗೆ ಹೋಗಿದ್ದಾರೆ ಅಂತೆಲ್ಲಾ ರಾಗ ಬದಲಿಸಿದ್ದು ಬಿಟ್ರೆ ನ್ಯಾಯಾಲಯದ ಎದುರು ವಾಸ್ತವತೆ ಬಿಚ್ಚಿಡೋ ಪ್ರತಿವಾದವನ್ನೂ ಪಾಲಿಕೆ ಆಡಳಿತ ಮಾಡಿದಂತೆ ತೋರುತ್ತಿಲ್ಲ. ಪರಿಣಾಮ ಇಂದಿಗೂ ನಗರದಲ್ಲಿರೋ ಬಹುತೇಕ ಎಲ್ಲಾ ಕಟ್ಟಡಗಳ ಪಾರ್ಕಿಂಗ್ ಜಾಗಗಳು ಬಾಡಿಗೆ ಹೆಸರಲ್ಲಿ ಮಾಲೀಕರ ಜೇಬು ತುಂಬಿಸುತ್ತಿವೆ. ಅ ಕಟ್ಟಡಕ್ಕೆ ಅಗತ್ಯ ಕೆಲಸಕ್ಕೆ ಅಂತ ಬರೋ ಗ್ರಾಹಕರು ರಸ್ತೆಯಲ್ಲೋ ಇನ್ನೆಲ್ಲೋ ವಾಹನವಿಟ್ಟು ಪೊಲೀಸರಿಗೆ ದಂಡ ತೆರುವಂತಾಗಿದೆ. ಇನ್ನು ನಮ್ಮ‌ ಪೊಲೀಸರಿಗಂತೂ ಹೀಗೆ ಸಿಗೋ ಬೈಕ್ ಗಳನ್ನ ಎತ್ತಾಕಿಕೊಂಡು ಹೋಗೋದೇ ಅಪ್ಪಟ ಕರ್ತವ್ಯ ನಿಷ್ಠೆ…! ಅದರ ಬದಲು ಎತ್ತಿಕೊಂಡು ಹೋದ ಜಾಗದಲ್ಲಿ ಮತ್ತೆ ಮತ್ತೆ ವಾಹನಗಳನ್ನು ಪಾರ್ಕ್ ಯಾಕೆ ಮಾಡ್ತಾರೆ ಮತ್ತು ಅದಕ್ಕೆ ಪರಿಹಾರ ಏನು ಅನ್ನೋದ್ರ ಬಗ್ಗೆ ಪೊಲೀಸ್ ಇಲಾಖೆ ಗಮನ ಹರಿಸಬೇಕಿದೆ.

ಇದರ ಜೊತೆಗೆ ಹಿಂದಿನ ಪೊಲೀಸ್ ಕಮಿಷನರ್ ಗಳು ಕೊಟ್ಟಿರೋ‌ ಪಾರ್ಕಿಂಗ್ ಅತಿಕ್ರಮಿಸಿರೋ ಕಟ್ಟಡಗಳ ಲಿಸ್ಟ್ ತೆಗೆದು ಪಾಲಿಕೆ ಅಧಿಕಾರಿಗಳು ‌ಫೀಲ್ಡಿಗಿಳಿಯಲಿ. ಅಂಥ ಅತಿಕ್ರಮಣ ತೆರವು ಮಾಡೋ ಕೊಂಚ ಧೈರ್ಯ ತೋರುವ ಕೆಲಸವಾದರೂ ಆಗಲಿ. ಆಗ ಮಾತ್ರ ಮಂಗಳೂರಿನ ಪಾರ್ಕಿಂಗ್ ಸಮಸ್ಯೆಗೆ ಸಂಪೂರ್ಣ ಅಲ್ಲದೇ ಇದ್ದರೂ ಅರ್ಧದಷ್ಟಾದರೂ ಪರಿಹಾರ ಸಿಗಲಿದೆ. ಸ್ಮಾರ್ಟ್ ಸಿಟಿ ಹೆಸರಲ್ಲಿ ರಸ್ತೆಗಳ ಉದ್ದ ಅಗಲ ಹೆಚ್ಚಿಸಿ ಕಾಂಕ್ರೀಟ್ ನ ಶೃಂಗಾರ ಮಾಡಿದರೆ ಸಾಲದು. ಇಷ್ಟೆಲ್ಲಾ ಮಾಡಿದರೂ ಮತ್ತೆ ಮತ್ತೆ ವಾಹನಗಳು ರಸ್ತೆಯಲ್ಲೇ ನಿಲ್ಲಬೇಕು, ಮತ್ತೆ ಮತ್ತೆ ಫೈನ್ ಕಟ್ಟಬೇಕು ಅನ್ನೋದಾದರೆ ನಿಮ್ಮ ಈ ಸ್ಮಾರ್ಟ್ ಸಿಟಿ ಯಾವ ಪುರುಷಾರ್ಥಕ್ಕೆ? ಮೊದಲು ಕಟ್ಟಡಗಳ ಅತಿಕ್ರಮ ತೆರವು ಮಾಡಿ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಡುವ ಕೆಲಸ ಆಗಬೇಕಿದೆ. ಸರ್ಕಾರದ ಬೊಕ್ಕಸ ತುಂಬಿಸಲು ದಂಡದ ಹೆಸರಲ್ಲಿ ಬೈಕ್ ಚಾಲಕರ ಜೇಬಿಗೆ ಕತ್ತರಿ ಹಾಕಿದರೆ ಏನು ಫಲ? ನೂರು ರೂ. ಪೆಟ್ರೋಲ್ ಜೊತೆಗೆ ಚಿಲ್ಲರೆ ಹಣದಲ್ಲಿ ಕಾಫಿ ತಿಂಡಿ ತಿಂದು ಬದುಕೋರಿಂದ ಸಾವಿರಾರು ರೂ. ದಂಡ ಕಿತ್ತು ಸಾಧಿಸೋದಾದ್ರೂ ಏನು?

ಸದ್ಯ ಮಂಗಳೂರಿಗೆ ಹೊಸ ಪೊಲೀಸ್ ಕಮಿಷನರ್ ‌ಬಂದಿದ್ದಾರೆ. ಪಾಲಿಕೆ ಆಡಳಿತಕ್ಕೆ ನೆನಪಿಲ್ಲ ಅಂತಾದ್ರೆ ಮತ್ತೆ ಆ ಅಕ್ರಮ ಕಟ್ಟಡಗಳ ಫೈಲ್ ತೆಗೆದು ಪಾಲಿಕೆ ಅಧಿಕಾರಿಗಳ ಮುಖಕ್ಕೆ ಎಸೆಯಿರಿ. ಒತ್ತಡ ತಂದಾದ್ರೂ ಆ ಕೆಲಸ ‌ಮಾಡಿಸಿ..ಆಗ ಮಾತ್ರ ಮಂಗಳೂರು ನಿಮ್ಮಂಥವರನ್ನ ನೆನಪಿನಲ್ಲಿಟ್ಟುಕೊಳ್ಳುತ್ತೆ…ದಂಡ ಹಾಕುವುದರ ಹೊರತಾಗಿಯೂ ಇಂಥ ಸಮಸ್ಯೆಗಳಿಗೆ ಪರಿಹಾರವಿದೆ…ದಯವಿಟ್ಟು ಅದನ್ನ ಮಾಡಿ ತೋರಿಸಿ…

Spread the love
  • Related Posts

    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಪುರಿಯ–ಮಾಲಾಡಿ–ಪುಂಜಾಲ ಕಟ್ಟೆ–ಮಡಂತ್ಯಾರು–ಕುಕ್ಕೇಡಿ ಭಾಗದ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು. ಈ ಮಹತ್ವದ ಕಾಮಗಾರಿಗಾಗಿ ರೂ.50.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದ್ದು, ಮಂಗಳೂರು ಕಾವೂರು ಮೂಲದ ಮುಗೆರೋಡಿ ಕನ್ಸ್ಟ್ರಕ್ಷನ್ ಸಂಸ್ಥೆಯವರು ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ.…

    Spread the love

    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    ಬೆಳ್ತಂಗಡಿ :ಲೈಲ್ಯಾಂಡ್ ದೊಸ್ತ್ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಎ.26 ರಂದು ಸಂಜೆ ಚಾರ್ಮಾಡಿಯ ಎಂಟನೇ ತಿರುವಿನಲ್ಲಿ ಪಲ್ಟಿಯಾಗಿ ಹಲವಾರಿಗೆ ಗಾಯವಾಗಿದ್ದು ಸ್ಥಳೀಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. Spread the…

    Spread the love

    You Missed

    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    • By admin
    • April 27, 2026
    • 12 views
    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    • By admin
    • April 26, 2026
    • 76 views
    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    • By admin
    • April 26, 2026
    • 71 views
    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    • By admin
    • April 25, 2026
    • 78 views
    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    • By admin
    • April 25, 2026
    • 170 views
    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 154 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ