ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಜೀರ್ ಮುಹಮ್ಮದ್ ನ ಬಂಧನ!

ಮಂಗಳೂರು : ಕೆಲವು ದಿನಗಳ ಹಿಂದೆ ಮಂಗಳೂರಿನ ಬಿಜೈ ಮತ್ತು ಕೋರ್ಟ್ ಸಮೀಪ ಗೋಡೆ ಮೇಲೆ ಉಗ್ರರ ಪರವಾಗಿ ಗೋಡೆ ಬರಹ  ಬರೆದ  ಪ್ರಕರಣ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಅಲ್ಲದೇ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿನ ದೃಶ್ಯಾವಳಿಗಳು ಅಸ್ಪಷ್ಟವಾಗಿದ್ದರಿಂದ ಪೊಲೀಸರಿಗೆ ಆರೋಪಿಗಳನ್ನು ಬಂಧಿಸೋದು ಕೂಡ ಬಹು ದೊಡ್ಡ ಸವಾಲಾಗಿತ್ತು. ಆದ್ರೆ ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕದ್ರಿ ಪೊಲೀಸರು ಯುವಕನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತೀರ್ಥಹಳ್ಳಿಯ ನಜೀರ್ ಮುಹಮ್ಮದ್‌ (26)ಬಂಧಿತ ಆರೋಪಿ . ಇಂದು ಮುಂಜಾನೆ ಕದ್ರಿ ಪೊಲೀಸರು ಆತನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದು , ಈತ ನಗರದಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದ.   ಮೊಬೈಲ್  ಲೊಕೇಶನ್  ಆಧಾರದಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನು ಈತನ ಜೊತೆಗೆ ಬೈಕ್ ನಲ್ಲಿ ಬಂದು ಗೋಡೆ ಬರಹಕ್ಕೆ ಸಹಕರಿಸಿದ ಇನ್ನೊಬ್ಬ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸಂಘಿಗಳನ್ನು ಹಾಗೂ ಮನುವಾದಿಗಳನ್ನು ನಿಯಂತ್ರಿಸಲು ಲಷ್ಕರ್ ಇ ತೊಯಿಬಾ ಮತ್ತು ತಾಲಿಬಾನ್ ಗಳನ್ನೂ ಕರೆಯುವಂತೆ ಪ್ರೆರೆಪಿಸಬೇಡಿ ಎಂದು ಬರೆದಿರುವ ಗೋಡೆ ಬರಹ ನ.27ರಂದು ಕದ್ರಿ‌ ಪೊಲೀಸ್ ಠಾಣೆ ಸಮೀಪದ ಬಿಜೈ ಬಳಿಯ ರಸ್ತೆಯ ಗೋಡೆಯೊಂದರಲ್ಲಿ ಬರೆಯಲಾಗಿತ್ತು. .” ಅಲ್ಲದೆ ‘ಲಷ್ಕರ್ ಝಿಂದಾಬಾದ್’ ಎಂದು ಬರೆಯಲಾಗಿತ್ತು.

 ನ.29ರಂದು ನಗರದ ಪಿವಿಎಸ್ ಸಮೀಪದ ನ್ಯಾಯಾಲಯದ ಆವರಣದ ಹಳೆ ಕಟ್ಟಡದ ಗೋಡೆಯ ಮೇಲೆ “Gustak e rasool ek hi saza tan say juda” ಎಂದು ಬರಹ ಪ್ರತ್ಯಕ್ಷವಾಗಿತ್ತು. ಪ್ರವಾದಿಯದ್ದು ಒಂದೇ ಶಿಕ್ಷೆ ದೇಹದಿಂದ ರುಂಡ ಬೇರ್ಪಡಿಸುವುದು ಎಂದು ಬರೆಯಲಾಗಿತ್ತು.

Spread the love
  • Related Posts

    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

    🖊️•ಬರಹ: ರಾಜೇಶ.ಎಂ.ಕಾನರ್ಪ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಹಿನ್ನೆಲೆಯಲ್ಲಿ ನದಿಗಳು, ಹೊಳೆಗಳು ಹಾಗೂ ಜಲಮೂಲಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿರುವುದು ಕಂಡುಬಂದಿದೆ. ಕಳೆದ ವರ್ಷದ 2025ಜೂನ್ ತಿಂಗಳಲ್ಲಿ ಉಕ್ಕಿ ಹರಿಯುತ್ತಿದ್ದ ನದಿ, ಈ ವರ್ಷದ…

    Spread the love

    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    ಉಜಿರೆ: ರಾಷ್ಟ್ರೀಯ ಹೆದ್ದಾರಿ 275ರಿಂದ ರಾಜ್ಯ ಹೆದ್ದಾರಿ 276ನ್ನು ಸಂಪರ್ಕಿಸುವ ಬೆಳ್ತಂಗಡಿ ತಾಲೂಕಿನ ಸೋಮಂತಡ್ಕ- ಹೇಡ್ಯ ರಸ್ತೆ ನವೀಕರಣ ಹಾಗೂ ವಿಸ್ತರಣೆಗೆ ಕೇಂದ್ರ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಈ ರಸ್ತೆಯ ಅಭಿವೃದ್ಧಿ ಭಾಗ್ಯ ಸನ್ನಿಹಿತವಾಗಿದೆ. ಕೇಂದ್ರ ಸರಕಾರ ದ.ಕ. ಜಿಲ್ಲೆಯ…

    Spread the love

    You Missed

    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

    • By admin
    • June 20, 2026
    • 12 views
    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

    • By admin
    • June 20, 2026
    • 35 views
    ಕರಾವಳಿಯಲ್ಲಿ ಕೈಕೊಟ್ಟ ಮುಂಗಾರು, ಹೆಚ್ಚಿದ ನೀರಿನ ಬಿಕ್ಕಟ್ಟಿನ ಆತಂಕ; ನದಿಯ ಒಡಲು ಹೇಳುತ್ತಿದೆ ಎಚ್ಚರಿಕೆಯ ಸಂದೇಶ:

    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    • By admin
    • June 18, 2026
    • 48 views
    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ

    • By admin
    • June 18, 2026
    • 42 views
    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ

    “ಜೆಒಸಾ ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಸಾಧನೆ; ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ-ಎನ್‌ಐಟಿಗಳಲ್ಲಿ ಸ್ಥಾನ”

    • By admin
    • June 18, 2026
    • 97 views
    “ಜೆಒಸಾ ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಸಾಧನೆ; ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ-ಎನ್‌ಐಟಿಗಳಲ್ಲಿ ಸ್ಥಾನ”

    “ಸಾಂಕ್ರಾಮಿಕ ರೋಗಕ್ಕೆ ಉಚಿತ ಆಹ್ವಾನ: ಉಜಿರೆ ಚರಂಡಿಯಲ್ಲಿ ತ್ಯಾಜ್ಯ ನೀರು ಶೇಖರಣೆ”

    • By admin
    • June 18, 2026
    • 79 views
    “ಸಾಂಕ್ರಾಮಿಕ ರೋಗಕ್ಕೆ ಉಚಿತ ಆಹ್ವಾನ: ಉಜಿರೆ ಚರಂಡಿಯಲ್ಲಿ ತ್ಯಾಜ್ಯ ನೀರು ಶೇಖರಣೆ”