ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಜೀರ್ ಮುಹಮ್ಮದ್ ನ ಬಂಧನ!

ಮಂಗಳೂರು : ಕೆಲವು ದಿನಗಳ ಹಿಂದೆ ಮಂಗಳೂರಿನ ಬಿಜೈ ಮತ್ತು ಕೋರ್ಟ್ ಸಮೀಪ ಗೋಡೆ ಮೇಲೆ ಉಗ್ರರ ಪರವಾಗಿ ಗೋಡೆ ಬರಹ  ಬರೆದ  ಪ್ರಕರಣ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಅಲ್ಲದೇ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿನ ದೃಶ್ಯಾವಳಿಗಳು ಅಸ್ಪಷ್ಟವಾಗಿದ್ದರಿಂದ ಪೊಲೀಸರಿಗೆ ಆರೋಪಿಗಳನ್ನು ಬಂಧಿಸೋದು ಕೂಡ ಬಹು ದೊಡ್ಡ ಸವಾಲಾಗಿತ್ತು. ಆದ್ರೆ ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕದ್ರಿ ಪೊಲೀಸರು ಯುವಕನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತೀರ್ಥಹಳ್ಳಿಯ ನಜೀರ್ ಮುಹಮ್ಮದ್‌ (26)ಬಂಧಿತ ಆರೋಪಿ . ಇಂದು ಮುಂಜಾನೆ ಕದ್ರಿ ಪೊಲೀಸರು ಆತನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದು , ಈತ ನಗರದಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದ.   ಮೊಬೈಲ್  ಲೊಕೇಶನ್  ಆಧಾರದಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನು ಈತನ ಜೊತೆಗೆ ಬೈಕ್ ನಲ್ಲಿ ಬಂದು ಗೋಡೆ ಬರಹಕ್ಕೆ ಸಹಕರಿಸಿದ ಇನ್ನೊಬ್ಬ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸಂಘಿಗಳನ್ನು ಹಾಗೂ ಮನುವಾದಿಗಳನ್ನು ನಿಯಂತ್ರಿಸಲು ಲಷ್ಕರ್ ಇ ತೊಯಿಬಾ ಮತ್ತು ತಾಲಿಬಾನ್ ಗಳನ್ನೂ ಕರೆಯುವಂತೆ ಪ್ರೆರೆಪಿಸಬೇಡಿ ಎಂದು ಬರೆದಿರುವ ಗೋಡೆ ಬರಹ ನ.27ರಂದು ಕದ್ರಿ‌ ಪೊಲೀಸ್ ಠಾಣೆ ಸಮೀಪದ ಬಿಜೈ ಬಳಿಯ ರಸ್ತೆಯ ಗೋಡೆಯೊಂದರಲ್ಲಿ ಬರೆಯಲಾಗಿತ್ತು. .” ಅಲ್ಲದೆ ‘ಲಷ್ಕರ್ ಝಿಂದಾಬಾದ್’ ಎಂದು ಬರೆಯಲಾಗಿತ್ತು.

 ನ.29ರಂದು ನಗರದ ಪಿವಿಎಸ್ ಸಮೀಪದ ನ್ಯಾಯಾಲಯದ ಆವರಣದ ಹಳೆ ಕಟ್ಟಡದ ಗೋಡೆಯ ಮೇಲೆ “Gustak e rasool ek hi saza tan say juda” ಎಂದು ಬರಹ ಪ್ರತ್ಯಕ್ಷವಾಗಿತ್ತು. ಪ್ರವಾದಿಯದ್ದು ಒಂದೇ ಶಿಕ್ಷೆ ದೇಹದಿಂದ ರುಂಡ ಬೇರ್ಪಡಿಸುವುದು ಎಂದು ಬರೆಯಲಾಗಿತ್ತು.

Spread the love
  • Related Posts

    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಜೂ.29 ರಂದು ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಹತ್ತು ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷರು ಮತ್ತು ಬೆಳಾಲು ಶಾಲೆಯ ಹಿರಿಯ…

    Spread the love

    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಅಬ್ಬರದ ಮಳೆಯಾಗುತ್ತಿದೆ. ಮಳೆಯ ಅಬ್ಬರದಿಂದ ಹೊನ್ನಾವರ ತಾಲೂಕಿನ ರಾಮತೀರ್ಥ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು ಹೆದ್ದಾರಿಯ ಮೇಲೆ ಬಿದ್ದಿದೆ.ಅದೃಷ್ಟವಶಾತ್ ಆ ಸಂದರ್ಭದಲ್ಲಿ ಯಾವುದೇ ವಾಹನ ಸಂಚಾರ ಮಾಡದ ಕಾರಣ ದೊಡ್ಡ ಅವಘಡ ಸಂಭವಿಸುವುದು…

    Spread the love

    You Missed

    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    • By admin
    • July 3, 2026
    • 13 views
    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    • By admin
    • July 2, 2026
    • 41 views
    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

    • By admin
    • July 2, 2026
    • 123 views
    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

    ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    • By admin
    • July 2, 2026
    • 39 views
    ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ
    • By admin
    • July 2, 2026
    • 7 views

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಕಲೇಶಪುರ ಪಾಲಹಳ್ಳಿ ಕರಗೂರು ಕೂಡಿಗೆ ಶ್ರೀ ವಾಯುಪುತ್ರ ದೇವಾಲಯಕ್ಕೆ ಅನುದಾನ ಮಂಜೂರು

    • By admin
    • July 2, 2026
    • 9 views