ಮಂಜೇಶ್ವರ ಬಂದರು ಇಂದು ಲೋಕಾರ್ಪಣೆ! ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರಿಂದ ನೂತನ ಬಂದರಿಗೆ ಚಾಲನೆ!

ಕಾಸರಗೋಡು: ಮಂಜೇಶ್ವರ ಬಂದರು ಇಂದು ಲೋಕಾರ್ಪಣೆಗೊಳ್ಳಲಿದೆ.

ಬೆಳಗ್ಗೆ 10.30ಕ್ಕೆ ನಡೆಯುವ ಸಮಾರಂಭದಲ್ಲಿ ವೀಡಿಯೋ ಕಾನ್ಪರೆನ್ಸ್ ಮೂಲಕ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಂದರಿಗೆ ಚಾಲನೆ ನೀಡಲಿದ್ದು, ಇದರೊಂದಿಗೆ ಕೊಯಿಲಾಂಡಿಯ ಬಂದರನ್ನೂ ಅವರು ಉದ್ಘಾಟಿಸುವರು.

ಕೇಂದ್ರ ಮೀನುಗಾರಿಕೆ ಸಚಿವ ಗಿರಿರಾಜ್ ಸಿಂಗ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ರಾಜ್ಯ ಮೀನುಗಾರಿಕೆ ಸಚಿವೆ ಮೆರ್ಸಿ ಕುಟ್ಟಿಯಮ್ಮ ಅಧ್ಯಕ್ಷತೆ ವಹಿಸುವರು. ಕಂದಾಯ ಸಚಿವ ಇ.ಚಂದ್ರಶೇಖರನ್, ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ಶಾಸಕ ಎಂ.ಸಿ.ಕಮರುದ್ದೀನ್ ಮೊದಲಾದವರು ಭಾಗವಹಿಸಲಿದ್ದಾರೆ. 

ಅನೇಕ ವರ್ಷಗಳ ಕನಸು ನನಸಾಗುವಂತೆ ಮಂಜೇಶ್ವರ ಬಂದರು ಉದ್ಘಾಟನೆಗೆ ಸಿದ್ಧವಾಗಿದ್ದು, ಇಂದು ಲೋಕಾರ್ಪಣೆಗೊಳ್ಳಲಿದೆ.

ಕಾಸರಗೋಡು ಜಿಲ್ಲೆಯ ಮೀನುಗಾರಿಕೆ ವಲಯಕ್ಕೆ ಹೊಸ ಹುರುಪು ನೀಡುವ ನಿಟ್ಟಿನಲ್ಲಿ ಮಂಜೇಶ್ವರದಲ್ಲಿ ಬಂದರು ನಿರ್ಮಾಣಗೊಳ್ಳಬೇಕು ಎಂಬ ಬೇಡಿಕೆ ತುಂಬ ಹಳೆಯದು. ಜಿಲ್ಲೆಯ ಕೊಯಿಪ್ಪಾಡಿ, ಶಿರಿಯ, ಬಂಗ್ರ ಮಂಜೇಶ್ವರ ಮತ್ಸ್ಯ ಗ್ರಾಮಗಳ ಸರಿಸುಮಾರು ಹತ್ತು ಸಾವಿರ ಮೀನುಗಾರರು ಈ ಬಂದರು ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದು ಹಾರ್ಬರ್ ಕಾರ್ಯಕಾರಿ ಇಂಜಿನಿಯರಿಂಗ್ ಎ.ಮುಹಮ್ಮದ್ ಅಶ್ರಫ್ ತಿಳಿಸಿದರು.

ಬಂದರು ಚಟುವಟಿಕೆ ಆರಂಭಿಸುವ ಮೂಲಕ ಸ್ಥಳೀಯ 1200ಕ್ಕೂ ಅಧಿಕ ಮೀನುಗಾರ ಕಾರ್ಮಿಕರಿಗೆ ಪ್ರತ್ಯಕ್ಷವಾಗಿ, 4800 ಮಂದಿಗೆ ಪರೋಕ್ಷವಾಗಿ ಪ್ರಯೋಜನ ಲಭಿಸಲಿದೆ. ಮೀನುಗಾರಿಕೆ ಸಂಬಂಧ ಮಾರಾಟ, ರಫ್ತು ಸಂಬಂಧಿ ವಲಯಗಳ ಮಂದಿಗೆ ಉದ್ಯೋಗಾವಕಾಶ ಲಭಿಸಲಿದೆ.

    ಮಂಜೇಶ್ವರ ಬಂದರು ಯೋಜನೆ ಒಟ್ಟು 48.80 ಕೋಟಿ ರೂ.ನಲ್ಲಿ ಜಾರಿಗೊಳ್ಳಲಿದೆ. ಇದರಲ್ಲಿ ಶೇ 75 ಕೇಂದ್ರ ಸರಕಾರದ ಪಾಲು, ಶೇ 25 ರಾಜ್ಯ ಸರಕಾರದ ಪಾಲು ಇರುವುದು. ಯೋಜನೆಗಾಗಿ ಈಗಾಗಲೇ 45.71 ಕೋಟಿ ರೂ. ವೆಚ್ಚ ನಡೆಸಲಾಗಿದೆ. ಪುಣೆಯ ಕೇಂದ್ರ ಸರಕಾರಿ ಸಂಸ್ಥೆ ಸೆಂಟ್ರಲ್ ವಾಟರ್ ಆಂಡ್ ಪವರ್ ರಿಸರ್ಚ್ ಸ್ಟೇಷನ್ ನಡೆಸಿರುವ ಅಧ್ಯಯನ ತಳಹದಿಯ್ಲಲಿ ಈ ಹಾರ್ಬರ್ ನ ರೂಪುರೇಷೆ ರಚನೆಗೊಂಡಿದೆ. ಹಾರ್ಬರ್ ಬೇಸಿನ್ ನೊಂದಿಗೆ ಸೇರಿಕೊಂಡು ಮುಸೋಡಿ ಪ್ರದೆಶದಲ್ಲಿ 8.92 ಎಕ್ರೆ, ಹೊಸಬೆಟ್ಟು ಪ್ರದೇಶದಲ್ಲಿ 2.85 ಎಕ್ರೆ ಸಹಿತ 11.77 ಎಕ್ರೆ ಜಾಗದಲ್ಲಿ ನಿರ್ಮಾಣ ಚಟುವಟಿಕೆಗಳಿಗಾಗಿ ಡ್ರಡ್ಜಿಂಗ್ ನಡೆಸಲಾಗಿದೆ. 

      ವಿವಿಧ ಸೌಲಭ್ಯಗಳು: 

ಮೀನುಗಾರಿಕೆ ಜಲವಾಹನಗಳು ದಡಸೇರುವ ನಿಟ್ಟಿನಲ್ಲಿ ಶಾಂತಯುತ ಹಾರ್ಬರ್ ಬೇಸಿನ್ ಒದಗಿಸುವ ನಿಟ್ಟಿನಲ್ಲಿ 490 ಮೀಟರ್, 530 ಮೀಟರ್ ಉದ್ದನೆಯ ಉತ್ತರ ಮತ್ತು ದಕ್ಷಿಣದಲ್ಲಿ ಎರಡು ಬ್ರೇಕ್ ವಾಟರ್ ಗಳನ್ನು ನಿರ್ಮಿಸಲಾಗಿದೆ. 275 ಬೋಟುಗಳಿಗೆ ಈ ಸೌಲಭ್ಯವಿದೆ. ಯೋಜನೆ ಸಂಬಂಧಿ ಚಟುವಟಿಕೆಗಳು ಮುಸೋಡಿ ಪ್ರದೇಶದ ಜಾಗದಲ್ಲಿ ನಡೆದಿವೆ. ಯಾಂತ್ರೀಕೃತ ಬೋಟುಗಳಿಗೆ 80 ಮೀಟರ್, ಕಿರು ದೋಣಿಗಳಿಗಾಗಿ 20 ಮೀಟರ್ ಸಹಿತ 100 ಮೀಟರ್ ವಾರ್ಫ್ ಮತ್ತು ಹರಾಜು ಕೇಂದ್ರವನ್ನೂ ನಿರ್ಮಿಸಲಾಗಿದೆ. ಪಾಕಿರ್ಂಗ್ ಏರಿಯಾ, ವರ್ಕ್ ಶಾಪ್, ಶಾಪ್ ಬಿಲ್ಡಿಂಗ್, ರೆಸ್ಟ್ ಶೆಡ್, ಟಾಯ್ಲೆಟ್ ಬ್ಲೋಕ್, ನೀರು ಸಂಗ್ರಹಾಗಾರ, ಅತಿಥಿಗೃಹ, ವಿದ್ಯುದೀಕರಣ ಸಹಿತ ಎಲ್ಲ ಹಿನ್ನೆಲೆ ಸೌಲಭ್ಯ ಸಿದ್ಧಪಡಿಸಲಾಗಿದೆ. 

ರಾಜ್ಯ ಹಾರ್ಬರ್ ಇಂಜಿನಿಯರಿಂಗ್ ಇಲಾಖೆ ಕಾಸರಗೋಡು ಜಿಲ್ಲೆಯಲ್ಲಿ ಸದ್ರಿ ಎರಡು ಮೀನು ಇಳಿಕೆ ಕೇಂದ್ರ ಯೋಜನೆಗಳನ್ನು ಜಾರಿಗೊಳಿಸಿದೆ. ಇದರಲ್ಲಿ ಮಂಜೇಶ್ವರ ಮೀನು ಇಳಿಕೆ ಕೇಂದ್ರ ಚಟುವಟಿಕೆ ಸುಗಮಗೊಳಿಸುವ ನಿಟ್ಟಿನಲ್ಲಿ ಬ್ರೇಕ್ ವಾಟರ್ ನ ಉದ್ದ ಹೆಚ್ಚಿಸುವ ಚಟುವಟಿಕೆ ಮುಂದುವರಿಯುತ್ತಿದೆ.

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 13 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 19 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 37 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 210 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 61 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ