ಮಂಜೇಶ್ವರ ಬಂದರು ಇಂದು ಲೋಕಾರ್ಪಣೆ! ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರಿಂದ ನೂತನ ಬಂದರಿಗೆ ಚಾಲನೆ!

ಕಾಸರಗೋಡು: ಮಂಜೇಶ್ವರ ಬಂದರು ಇಂದು ಲೋಕಾರ್ಪಣೆಗೊಳ್ಳಲಿದೆ.

ಬೆಳಗ್ಗೆ 10.30ಕ್ಕೆ ನಡೆಯುವ ಸಮಾರಂಭದಲ್ಲಿ ವೀಡಿಯೋ ಕಾನ್ಪರೆನ್ಸ್ ಮೂಲಕ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಂದರಿಗೆ ಚಾಲನೆ ನೀಡಲಿದ್ದು, ಇದರೊಂದಿಗೆ ಕೊಯಿಲಾಂಡಿಯ ಬಂದರನ್ನೂ ಅವರು ಉದ್ಘಾಟಿಸುವರು.

ಕೇಂದ್ರ ಮೀನುಗಾರಿಕೆ ಸಚಿವ ಗಿರಿರಾಜ್ ಸಿಂಗ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ರಾಜ್ಯ ಮೀನುಗಾರಿಕೆ ಸಚಿವೆ ಮೆರ್ಸಿ ಕುಟ್ಟಿಯಮ್ಮ ಅಧ್ಯಕ್ಷತೆ ವಹಿಸುವರು. ಕಂದಾಯ ಸಚಿವ ಇ.ಚಂದ್ರಶೇಖರನ್, ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ಶಾಸಕ ಎಂ.ಸಿ.ಕಮರುದ್ದೀನ್ ಮೊದಲಾದವರು ಭಾಗವಹಿಸಲಿದ್ದಾರೆ. 

ಅನೇಕ ವರ್ಷಗಳ ಕನಸು ನನಸಾಗುವಂತೆ ಮಂಜೇಶ್ವರ ಬಂದರು ಉದ್ಘಾಟನೆಗೆ ಸಿದ್ಧವಾಗಿದ್ದು, ಇಂದು ಲೋಕಾರ್ಪಣೆಗೊಳ್ಳಲಿದೆ.

ಕಾಸರಗೋಡು ಜಿಲ್ಲೆಯ ಮೀನುಗಾರಿಕೆ ವಲಯಕ್ಕೆ ಹೊಸ ಹುರುಪು ನೀಡುವ ನಿಟ್ಟಿನಲ್ಲಿ ಮಂಜೇಶ್ವರದಲ್ಲಿ ಬಂದರು ನಿರ್ಮಾಣಗೊಳ್ಳಬೇಕು ಎಂಬ ಬೇಡಿಕೆ ತುಂಬ ಹಳೆಯದು. ಜಿಲ್ಲೆಯ ಕೊಯಿಪ್ಪಾಡಿ, ಶಿರಿಯ, ಬಂಗ್ರ ಮಂಜೇಶ್ವರ ಮತ್ಸ್ಯ ಗ್ರಾಮಗಳ ಸರಿಸುಮಾರು ಹತ್ತು ಸಾವಿರ ಮೀನುಗಾರರು ಈ ಬಂದರು ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದು ಹಾರ್ಬರ್ ಕಾರ್ಯಕಾರಿ ಇಂಜಿನಿಯರಿಂಗ್ ಎ.ಮುಹಮ್ಮದ್ ಅಶ್ರಫ್ ತಿಳಿಸಿದರು.

ಬಂದರು ಚಟುವಟಿಕೆ ಆರಂಭಿಸುವ ಮೂಲಕ ಸ್ಥಳೀಯ 1200ಕ್ಕೂ ಅಧಿಕ ಮೀನುಗಾರ ಕಾರ್ಮಿಕರಿಗೆ ಪ್ರತ್ಯಕ್ಷವಾಗಿ, 4800 ಮಂದಿಗೆ ಪರೋಕ್ಷವಾಗಿ ಪ್ರಯೋಜನ ಲಭಿಸಲಿದೆ. ಮೀನುಗಾರಿಕೆ ಸಂಬಂಧ ಮಾರಾಟ, ರಫ್ತು ಸಂಬಂಧಿ ವಲಯಗಳ ಮಂದಿಗೆ ಉದ್ಯೋಗಾವಕಾಶ ಲಭಿಸಲಿದೆ.

    ಮಂಜೇಶ್ವರ ಬಂದರು ಯೋಜನೆ ಒಟ್ಟು 48.80 ಕೋಟಿ ರೂ.ನಲ್ಲಿ ಜಾರಿಗೊಳ್ಳಲಿದೆ. ಇದರಲ್ಲಿ ಶೇ 75 ಕೇಂದ್ರ ಸರಕಾರದ ಪಾಲು, ಶೇ 25 ರಾಜ್ಯ ಸರಕಾರದ ಪಾಲು ಇರುವುದು. ಯೋಜನೆಗಾಗಿ ಈಗಾಗಲೇ 45.71 ಕೋಟಿ ರೂ. ವೆಚ್ಚ ನಡೆಸಲಾಗಿದೆ. ಪುಣೆಯ ಕೇಂದ್ರ ಸರಕಾರಿ ಸಂಸ್ಥೆ ಸೆಂಟ್ರಲ್ ವಾಟರ್ ಆಂಡ್ ಪವರ್ ರಿಸರ್ಚ್ ಸ್ಟೇಷನ್ ನಡೆಸಿರುವ ಅಧ್ಯಯನ ತಳಹದಿಯ್ಲಲಿ ಈ ಹಾರ್ಬರ್ ನ ರೂಪುರೇಷೆ ರಚನೆಗೊಂಡಿದೆ. ಹಾರ್ಬರ್ ಬೇಸಿನ್ ನೊಂದಿಗೆ ಸೇರಿಕೊಂಡು ಮುಸೋಡಿ ಪ್ರದೆಶದಲ್ಲಿ 8.92 ಎಕ್ರೆ, ಹೊಸಬೆಟ್ಟು ಪ್ರದೇಶದಲ್ಲಿ 2.85 ಎಕ್ರೆ ಸಹಿತ 11.77 ಎಕ್ರೆ ಜಾಗದಲ್ಲಿ ನಿರ್ಮಾಣ ಚಟುವಟಿಕೆಗಳಿಗಾಗಿ ಡ್ರಡ್ಜಿಂಗ್ ನಡೆಸಲಾಗಿದೆ. 

      ವಿವಿಧ ಸೌಲಭ್ಯಗಳು: 

ಮೀನುಗಾರಿಕೆ ಜಲವಾಹನಗಳು ದಡಸೇರುವ ನಿಟ್ಟಿನಲ್ಲಿ ಶಾಂತಯುತ ಹಾರ್ಬರ್ ಬೇಸಿನ್ ಒದಗಿಸುವ ನಿಟ್ಟಿನಲ್ಲಿ 490 ಮೀಟರ್, 530 ಮೀಟರ್ ಉದ್ದನೆಯ ಉತ್ತರ ಮತ್ತು ದಕ್ಷಿಣದಲ್ಲಿ ಎರಡು ಬ್ರೇಕ್ ವಾಟರ್ ಗಳನ್ನು ನಿರ್ಮಿಸಲಾಗಿದೆ. 275 ಬೋಟುಗಳಿಗೆ ಈ ಸೌಲಭ್ಯವಿದೆ. ಯೋಜನೆ ಸಂಬಂಧಿ ಚಟುವಟಿಕೆಗಳು ಮುಸೋಡಿ ಪ್ರದೇಶದ ಜಾಗದಲ್ಲಿ ನಡೆದಿವೆ. ಯಾಂತ್ರೀಕೃತ ಬೋಟುಗಳಿಗೆ 80 ಮೀಟರ್, ಕಿರು ದೋಣಿಗಳಿಗಾಗಿ 20 ಮೀಟರ್ ಸಹಿತ 100 ಮೀಟರ್ ವಾರ್ಫ್ ಮತ್ತು ಹರಾಜು ಕೇಂದ್ರವನ್ನೂ ನಿರ್ಮಿಸಲಾಗಿದೆ. ಪಾಕಿರ್ಂಗ್ ಏರಿಯಾ, ವರ್ಕ್ ಶಾಪ್, ಶಾಪ್ ಬಿಲ್ಡಿಂಗ್, ರೆಸ್ಟ್ ಶೆಡ್, ಟಾಯ್ಲೆಟ್ ಬ್ಲೋಕ್, ನೀರು ಸಂಗ್ರಹಾಗಾರ, ಅತಿಥಿಗೃಹ, ವಿದ್ಯುದೀಕರಣ ಸಹಿತ ಎಲ್ಲ ಹಿನ್ನೆಲೆ ಸೌಲಭ್ಯ ಸಿದ್ಧಪಡಿಸಲಾಗಿದೆ. 

ರಾಜ್ಯ ಹಾರ್ಬರ್ ಇಂಜಿನಿಯರಿಂಗ್ ಇಲಾಖೆ ಕಾಸರಗೋಡು ಜಿಲ್ಲೆಯಲ್ಲಿ ಸದ್ರಿ ಎರಡು ಮೀನು ಇಳಿಕೆ ಕೇಂದ್ರ ಯೋಜನೆಗಳನ್ನು ಜಾರಿಗೊಳಿಸಿದೆ. ಇದರಲ್ಲಿ ಮಂಜೇಶ್ವರ ಮೀನು ಇಳಿಕೆ ಕೇಂದ್ರ ಚಟುವಟಿಕೆ ಸುಗಮಗೊಳಿಸುವ ನಿಟ್ಟಿನಲ್ಲಿ ಬ್ರೇಕ್ ವಾಟರ್ ನ ಉದ್ದ ಹೆಚ್ಚಿಸುವ ಚಟುವಟಿಕೆ ಮುಂದುವರಿಯುತ್ತಿದೆ.

Spread the love
  • Related Posts

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ: ಫ್ರೆಂಡ್ಸ್ ವ್ಯಾಟ್ಸಾಪ್ ಗ್ರೂಪ್ ನ 13ವರ್ಷಗಳ ನಂತರ ಮೊದಲ ಬಾರಿಗೆ ಸ್ನೇಹಿತರನ್ನೆಲ್ಲ ಒಗ್ಗೂಡಿಸಿ ಫ್ರೆಂಡ್ಸ್ ಸಮಾಗಮ -2025 ಕಾರ್ಯಕ್ರಮವನ್ನು ತಾಲೂಕಿನ ಬಲಿಪ ರೆಸಾರ್ಟ್ ನಲ್ಲಿ ನಡೆಸಲಾಯಿತು. 2013ರಲ್ಲಿ ಪ್ರಾರಂಭಗೊಂಡ ಈ ಗ್ರೂಫ್ ನಲ್ಲಿ ವಕೀಲರು, ಉಪನ್ಯಾಸಕರು, ಇಲಾಖಾ ಅಧಿಕಾರಿಗಳು, ಪ್ರಗತಿಪರ…

    Spread the love

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    You Missed

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    • By admin
    • December 15, 2025
    • 182 views
    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 61 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 24 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 43 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 66 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 40 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ