ಮಂಜೇಶ್ವರ ಬಂದರು ಇಂದು ಲೋಕಾರ್ಪಣೆ! ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರಿಂದ ನೂತನ ಬಂದರಿಗೆ ಚಾಲನೆ!

ಕಾಸರಗೋಡು: ಮಂಜೇಶ್ವರ ಬಂದರು ಇಂದು ಲೋಕಾರ್ಪಣೆಗೊಳ್ಳಲಿದೆ.

ಬೆಳಗ್ಗೆ 10.30ಕ್ಕೆ ನಡೆಯುವ ಸಮಾರಂಭದಲ್ಲಿ ವೀಡಿಯೋ ಕಾನ್ಪರೆನ್ಸ್ ಮೂಲಕ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಂದರಿಗೆ ಚಾಲನೆ ನೀಡಲಿದ್ದು, ಇದರೊಂದಿಗೆ ಕೊಯಿಲಾಂಡಿಯ ಬಂದರನ್ನೂ ಅವರು ಉದ್ಘಾಟಿಸುವರು.

ಕೇಂದ್ರ ಮೀನುಗಾರಿಕೆ ಸಚಿವ ಗಿರಿರಾಜ್ ಸಿಂಗ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ರಾಜ್ಯ ಮೀನುಗಾರಿಕೆ ಸಚಿವೆ ಮೆರ್ಸಿ ಕುಟ್ಟಿಯಮ್ಮ ಅಧ್ಯಕ್ಷತೆ ವಹಿಸುವರು. ಕಂದಾಯ ಸಚಿವ ಇ.ಚಂದ್ರಶೇಖರನ್, ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ಶಾಸಕ ಎಂ.ಸಿ.ಕಮರುದ್ದೀನ್ ಮೊದಲಾದವರು ಭಾಗವಹಿಸಲಿದ್ದಾರೆ. 

ಅನೇಕ ವರ್ಷಗಳ ಕನಸು ನನಸಾಗುವಂತೆ ಮಂಜೇಶ್ವರ ಬಂದರು ಉದ್ಘಾಟನೆಗೆ ಸಿದ್ಧವಾಗಿದ್ದು, ಇಂದು ಲೋಕಾರ್ಪಣೆಗೊಳ್ಳಲಿದೆ.

ಕಾಸರಗೋಡು ಜಿಲ್ಲೆಯ ಮೀನುಗಾರಿಕೆ ವಲಯಕ್ಕೆ ಹೊಸ ಹುರುಪು ನೀಡುವ ನಿಟ್ಟಿನಲ್ಲಿ ಮಂಜೇಶ್ವರದಲ್ಲಿ ಬಂದರು ನಿರ್ಮಾಣಗೊಳ್ಳಬೇಕು ಎಂಬ ಬೇಡಿಕೆ ತುಂಬ ಹಳೆಯದು. ಜಿಲ್ಲೆಯ ಕೊಯಿಪ್ಪಾಡಿ, ಶಿರಿಯ, ಬಂಗ್ರ ಮಂಜೇಶ್ವರ ಮತ್ಸ್ಯ ಗ್ರಾಮಗಳ ಸರಿಸುಮಾರು ಹತ್ತು ಸಾವಿರ ಮೀನುಗಾರರು ಈ ಬಂದರು ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದು ಹಾರ್ಬರ್ ಕಾರ್ಯಕಾರಿ ಇಂಜಿನಿಯರಿಂಗ್ ಎ.ಮುಹಮ್ಮದ್ ಅಶ್ರಫ್ ತಿಳಿಸಿದರು.

ಬಂದರು ಚಟುವಟಿಕೆ ಆರಂಭಿಸುವ ಮೂಲಕ ಸ್ಥಳೀಯ 1200ಕ್ಕೂ ಅಧಿಕ ಮೀನುಗಾರ ಕಾರ್ಮಿಕರಿಗೆ ಪ್ರತ್ಯಕ್ಷವಾಗಿ, 4800 ಮಂದಿಗೆ ಪರೋಕ್ಷವಾಗಿ ಪ್ರಯೋಜನ ಲಭಿಸಲಿದೆ. ಮೀನುಗಾರಿಕೆ ಸಂಬಂಧ ಮಾರಾಟ, ರಫ್ತು ಸಂಬಂಧಿ ವಲಯಗಳ ಮಂದಿಗೆ ಉದ್ಯೋಗಾವಕಾಶ ಲಭಿಸಲಿದೆ.

    ಮಂಜೇಶ್ವರ ಬಂದರು ಯೋಜನೆ ಒಟ್ಟು 48.80 ಕೋಟಿ ರೂ.ನಲ್ಲಿ ಜಾರಿಗೊಳ್ಳಲಿದೆ. ಇದರಲ್ಲಿ ಶೇ 75 ಕೇಂದ್ರ ಸರಕಾರದ ಪಾಲು, ಶೇ 25 ರಾಜ್ಯ ಸರಕಾರದ ಪಾಲು ಇರುವುದು. ಯೋಜನೆಗಾಗಿ ಈಗಾಗಲೇ 45.71 ಕೋಟಿ ರೂ. ವೆಚ್ಚ ನಡೆಸಲಾಗಿದೆ. ಪುಣೆಯ ಕೇಂದ್ರ ಸರಕಾರಿ ಸಂಸ್ಥೆ ಸೆಂಟ್ರಲ್ ವಾಟರ್ ಆಂಡ್ ಪವರ್ ರಿಸರ್ಚ್ ಸ್ಟೇಷನ್ ನಡೆಸಿರುವ ಅಧ್ಯಯನ ತಳಹದಿಯ್ಲಲಿ ಈ ಹಾರ್ಬರ್ ನ ರೂಪುರೇಷೆ ರಚನೆಗೊಂಡಿದೆ. ಹಾರ್ಬರ್ ಬೇಸಿನ್ ನೊಂದಿಗೆ ಸೇರಿಕೊಂಡು ಮುಸೋಡಿ ಪ್ರದೆಶದಲ್ಲಿ 8.92 ಎಕ್ರೆ, ಹೊಸಬೆಟ್ಟು ಪ್ರದೇಶದಲ್ಲಿ 2.85 ಎಕ್ರೆ ಸಹಿತ 11.77 ಎಕ್ರೆ ಜಾಗದಲ್ಲಿ ನಿರ್ಮಾಣ ಚಟುವಟಿಕೆಗಳಿಗಾಗಿ ಡ್ರಡ್ಜಿಂಗ್ ನಡೆಸಲಾಗಿದೆ. 

      ವಿವಿಧ ಸೌಲಭ್ಯಗಳು: 

ಮೀನುಗಾರಿಕೆ ಜಲವಾಹನಗಳು ದಡಸೇರುವ ನಿಟ್ಟಿನಲ್ಲಿ ಶಾಂತಯುತ ಹಾರ್ಬರ್ ಬೇಸಿನ್ ಒದಗಿಸುವ ನಿಟ್ಟಿನಲ್ಲಿ 490 ಮೀಟರ್, 530 ಮೀಟರ್ ಉದ್ದನೆಯ ಉತ್ತರ ಮತ್ತು ದಕ್ಷಿಣದಲ್ಲಿ ಎರಡು ಬ್ರೇಕ್ ವಾಟರ್ ಗಳನ್ನು ನಿರ್ಮಿಸಲಾಗಿದೆ. 275 ಬೋಟುಗಳಿಗೆ ಈ ಸೌಲಭ್ಯವಿದೆ. ಯೋಜನೆ ಸಂಬಂಧಿ ಚಟುವಟಿಕೆಗಳು ಮುಸೋಡಿ ಪ್ರದೇಶದ ಜಾಗದಲ್ಲಿ ನಡೆದಿವೆ. ಯಾಂತ್ರೀಕೃತ ಬೋಟುಗಳಿಗೆ 80 ಮೀಟರ್, ಕಿರು ದೋಣಿಗಳಿಗಾಗಿ 20 ಮೀಟರ್ ಸಹಿತ 100 ಮೀಟರ್ ವಾರ್ಫ್ ಮತ್ತು ಹರಾಜು ಕೇಂದ್ರವನ್ನೂ ನಿರ್ಮಿಸಲಾಗಿದೆ. ಪಾಕಿರ್ಂಗ್ ಏರಿಯಾ, ವರ್ಕ್ ಶಾಪ್, ಶಾಪ್ ಬಿಲ್ಡಿಂಗ್, ರೆಸ್ಟ್ ಶೆಡ್, ಟಾಯ್ಲೆಟ್ ಬ್ಲೋಕ್, ನೀರು ಸಂಗ್ರಹಾಗಾರ, ಅತಿಥಿಗೃಹ, ವಿದ್ಯುದೀಕರಣ ಸಹಿತ ಎಲ್ಲ ಹಿನ್ನೆಲೆ ಸೌಲಭ್ಯ ಸಿದ್ಧಪಡಿಸಲಾಗಿದೆ. 

ರಾಜ್ಯ ಹಾರ್ಬರ್ ಇಂಜಿನಿಯರಿಂಗ್ ಇಲಾಖೆ ಕಾಸರಗೋಡು ಜಿಲ್ಲೆಯಲ್ಲಿ ಸದ್ರಿ ಎರಡು ಮೀನು ಇಳಿಕೆ ಕೇಂದ್ರ ಯೋಜನೆಗಳನ್ನು ಜಾರಿಗೊಳಿಸಿದೆ. ಇದರಲ್ಲಿ ಮಂಜೇಶ್ವರ ಮೀನು ಇಳಿಕೆ ಕೇಂದ್ರ ಚಟುವಟಿಕೆ ಸುಗಮಗೊಳಿಸುವ ನಿಟ್ಟಿನಲ್ಲಿ ಬ್ರೇಕ್ ವಾಟರ್ ನ ಉದ್ದ ಹೆಚ್ಚಿಸುವ ಚಟುವಟಿಕೆ ಮುಂದುವರಿಯುತ್ತಿದೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಸಂಜೆ ಆರ್ಭಟಿಸಿದ ವರುಣನ ಅಬ್ಬರಕ್ಕೆ ಭೀಕರ ದುರಂತವೊಂದು ಸಂಭವಿಸಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಮೂವರು ಮಕ್ಕಳು ಸೇರಿದಂತೆ ಒಟ್ಟು 8 ಜನರು ಮೃತಪಟ್ಟಿದ್ದಾರೆ. ಬುಧವಾರ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 20 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 46 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 91 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 45 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 80 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ