ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

ಬೆಳ್ತಂಗಡಿ : ಗ್ರಾಹಕರಿಗೆ ಸರಿಯಾದ ಸಮಯಕ್ಕೆ ಗ್ಯಾಸ್ ಸರಬರಾಜು ಮಾಡದೆ ಕಚೇರಿಗೆ ಹೋದಾಗ ಪ್ರತಿನಿತ್ಯ ಗಲಾಟೆ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಆಹಾರ ಇಲಾಖೆಗೆ ಬಂದ ದೂರಿನ ಆಧಾರದಲ್ಲಿ ಕೊನೆಯ ಎಚ್ಚರಿಕೆಯ ನೋಟಿಸ್ ಜಾರಿ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲ ಜಂಕ್ಷನ್ ಬಳಿಯಿರುವ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿ ಕಚೇರಿಯಲ್ಲಿ ಗ್ರಾಹಕರಿಗೆ ಸರಿಯಾದ ಗ್ಯಾಸ್ ಸರಬರಾಜು ಮಾಡದೆ, ಸರಿಯಾಗಿ ವ್ಯವಹಾರ ನಡೆಸದೆ ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಗಲಾಟೆ ಬಗ್ಗೆ ಲಿಖಿತ ದೂರು ಬಂದ ಮೇರೆಗೆ ಬೆಳ್ತಂಗಡಿ ಆಹಾರ ಇಲಾಖೆಯಿಂದ ಎ.22 ರಂದು ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿ ವ್ಯವಸ್ಥಾಪಕರಿಗೆ ಎಚ್ಚರಿಕೆ ನೋಟಿಸ್ ಜಾರಿ ಮಾಡಲಾಗಿದೆ.

ನೋಟಿಸ್ ನಲ್ಲಿರುವ ಅಂಶ: ಪ್ರತಿದಿನ ಈ ಕಚೇರಿಗೆ ಇದೇ ವಿಚಾರವಾಗಿ ಸಾರ್ವಜನಿಕರಿಂದ ದೂರುಗಳು ಬರುತ್ತಿದೆ ಅಲ್ಲದೆ ನಿಮ್ಮ ಗ್ಯಾಸ್ ಏಜೆನ್ಸಿಯ ಬಗ್ಗೆ ಸರಿಯಾದ ಗ್ಯಾಸ್ ಸರಬರಾಜು ಇಲ್ಲದೆ ಇರುವ ಬಗ್ಗೆ ದೂರುಗಳು ಬರುತ್ತಿದ್ದು, ಅನಿಲ ಸಂಪರ್ಕ ಹೆಚ್ಚಾಗಿದ್ದು. ಅದಕ್ಕೆ ಸರಿಯಾಗಿ ಮೂಲಭೂತ ವ್ಯವಸ್ಥೆಯನ್ನು ಕೈಗೊಂಡು ಕೈಗೊಂಡ ಕ್ರಮದ ಬಗ್ಗೆ ಈ ಕಚೇರಿಗೆ ವರದಿ ಸಲ್ಲಿಸುವಂತೆ ತಿಳಿಸಿದೆ. ‘ಈ ಹಿಂದೆಯೂ ಸಾಕಷ್ಟು ಬಾರಿ ನಿಮಗೆ ಈ ಬಗ್ಗೆ ತಿಳಿಸಿದ್ದರೂ ಕ್ರಮ ವಹಿಸದೆ ಇರುವುದು ಉದ್ಧಟತನಕ್ಕೆ ಸಾಕ್ಷಿಯಾಗಿದೆ. ಗ್ರಾಹಕರು ಅವರಿಗೆ ಅನುಕೂಲವಾಗುವಂತೆ ಏಜೆನ್ಸಿ ಬದಲಾಯಿಸಲು ಹಕ್ಕು ಅವರಿಗೆ ಇದ್ದು. ನಿಮ್ಮಲ್ಲಿ ಬದಲಾವಣೆಗೆ ಮನವಿ ಮಾಡಿದ್ದಲ್ಲಿ ತಕ್ಷಣವೇ ಬದಲಾವಣೆಗೆ ಅವಕಾಶ ಮಾಡಿಕೊಡುವುದು ಹಾಗೂ ಮಾಡಿದ ಬಗ್ಗೆ ಈ ಕಚೇರಿಗೆ ಮಾಹಿತಿಯನ್ನು ನೀಡುವುದು. ಇದು ನಿಮಗೆ ನೀಡುತ್ತಿರುವ ಕೊನೆಯ ಎಚ್ಚರಿಕೆಯಾಗಿದ್ದು. ಮುಂದೆ ಈ ರೀತಿಯ ತಪ್ಪುಗಳು ಕಂಡಬಂದಲ್ಲಿ ಶಿಸ್ತು ಕ್ರಮ ವಹಿಸಲಾಗುವುದು ಎಂದು ಬೆಳ್ತಂಗಡಿ ಆಹಾರ ಇಲಾಖೆ ಎ.22 ರಂದು ನೀಡಿದ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.

Spread the love
  • Related Posts

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23) ಪ್ರಕಟಗೊಳ್ಳಲಿದೆ. ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಫಲಿತಾಂಶದ ಮುಖ್ಯಾಂಶಗಳು: ದಿನಾಂಕ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆಯವರ ನೇತೃತ್ವದಲ್ಲಿ ಏಪ್ರಿಲ್ 14ರಿಂದ ಪ್ರಾರಂಭವಾಗಿ ಏಪ್ರಿಲ್ 21ರಂದು ಮಂಗಳವಾರ ಬ್ರಹ್ಮರಥೋತ್ಸವದ ಸಂಭ್ರಮದೊಂದಿಗೆ ವಿಜೃಂಭಣೆಯಿಂದ ನೆರವೇರಿತು. ರಾತ್ರಿ ಒಳಾಂಗಣದಲ್ಲಿ…

    Spread the love

    You Missed

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 28 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 19 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 40 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 25 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 58 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ