ವ್ಯಸನ ಮುಕ್ತನಾಗಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ ಯುವಕ!!! ಆ ಒಂದು ಮದ್ಯವರ್ಜನ ಶಿಬಿರ ಯುವಕನ ಬದುಕನ್ನೇ ಬದಲಾಯಿಸಿ ಬಿಟ್ಟಿತ್ತೇ!!!? “ಸ್ವಾವಲಂಬಿ ಬದುಕು”

“ಮದ್ಯಮುಕ್ತನಾಗಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ – ಮಂಜು”

ತುಮಕೂರು ತಾಲೂಕಿನ ಅಂತರಸನಹಳ್ಳಿ ಯ ದಿವಂಗತ ವೀರಭದ್ರಪ್ಪನವರ ಮಗನಾದ 34 ವರ್ಷ ವಯಸ್ಸಿನ ಶ್ರೀ ಮಂಜುರವರು ಕಳೆದ 2 ವರ್ಷಗಳ ಹಿಂದೆ ತುಮಕೂರಿನ ಹೋಟೆಲ್ ಅಸೋಸಿಯೇಷನ್ ನಲ್ಲಿ ನಡೆದ ಮದ್ಯವರ್ಜನ ಶಿಬಿರಕ್ಕೆ ಸೇರಿ ಇದೀಗ ಸಂಪೂರ್ಣ ಪಾನಮುಕ್ತರಾಗಿ ಸ್ವತ: ಶ್ರೀ ಗಣೇಶ ಗೋಬಿ ಸೆಂಟರ ನ್ನು ಪ್ರಾರಂಭಿಸಿ ನೆಮ್ಮದಿಯ ಜೀವನವನ್ನು ನಡೆಸುತ್ತಿದ್ದಾರೆ.


ತಂದೆ ವೀರಭದ್ರಯ್ಯ ನವರು ಅಡುಗೆ ಕೆಲಸ ಮಾಡುತ್ತಿದ್ದು ಅವರೂ ಮದ್ಯಪಾನ ಸೇವಿಸುತ್ತಿದ್ದರು…..!
ಸಣ್ಣ ವಯಸ್ಸಿನಲ್ಲಿ ತನ್ನ ಗೆಳೆಯರ ಸಹವಾಸದಿಂದ ಕುಡಿತ ಪ್ರಾರಂಭಿಸಿ ದಿನೇ ದಿನೇ ಕುಡಿತದ ಪ್ರಮಾಣ ಜಾಸ್ತಿಯಾಗುತ್ತಾ ಬಂತು… ತಂದೆ ಬುದ್ಧಿ ಹೇಳಿದರು ಏನೂ ಪ್ರಯೋಜನವಾಗಲಿಲ್ಲ…!! ಕಾರಣ ಅವರೂ ಮದ್ಯವ್ಯಸನಿಯಾಗಿದ್ದ ರು.
ತುಮಕೂರು ಸಿಟಿಯಲ್ಲಿ ಇದ್ದ ಎಲ್ಲಾ ವೈನ್ ಶಾಪ್ ಮತ್ತು ಬಾರ್ ಗಳ ಪರಿಚಯ ಈ ಕುಡಿತದಿಂದ ಆಗಿತ್ತು….!!!
ಕುಡಿತ ಎಷ್ಟು ವಿಪರೀತವಾಗಿತ್ತು ಎಂದರೆ ತಾನು 5 10 ರೂಗಳನ್ನು ಭಿಕ್ಷೆಬೇಡಿಯೂ ಕುಡಿತ ಮಾಡಿಕೊಂಡು ಬಂದ ದಿನಗಳನ್ನು ಈಗ ನೆನಪಿಸಿಕೊಂಡು ಹಳೇ ಜೀವನ ಬಹಳ ಅಸಹ್ಯವಾಗಿತ್ತು…. ಮತ್ತು ಸಮಾಜದಲ್ಲಿ, ಊರಲ್ಲಿ, ಮನೆಯಲ್ಲಿ ಒಂದು ಚೂರು ಮರ್ಯಾದೆಯೇ ಇರಲಿಲ್ಲ!!!! ದಿನಕ್ಕೆ ಅಡುಗೆ ಕೆಲಸ ಮಾಡಿ 500 ರಿಂದ 600 ರೂಪಾಯಿ ಸಂಪಾದಿಸಿದರೂ ಸಂಜೆ ಮನೆಗೆ ಬರಲು ಒಂದು ರೂಪಾಯಿ ಉಳಿಯುತ್ತಿರಲಿಲ್ಲ……..
6 ವರ್ಷಗಳ ಹಿಂದೆ ತಂದೆ ತೀರಿಕೊಂಡರೂ ಬುದ್ಧಿ ಬರಲಿಲ್ಲ,!!! 2011ರಲ್ಲಿ ಮನೆಯಲ್ಲಿ ನಡೆದ ದೊಡ್ಡದೊಂದು ಸಮಸ್ಯೆಯಿಂದ ಕುಡಿತದ ಪ್ರಮಾಣ ಇನ್ನೂ ಜಾಸ್ತಿಯಾಯಿತು. ತಾಯಿಗೆ ಒಂದು ಚೂರು ಪ್ರೀತಿ ಗೌರವ ನೀಡಲಿಲ್ಲ!!! ಬದಲಾಗಿ ಮಾನಸಿಕ ಹಿಂಸೆ ನೀಡುತ್ತಿದ್ದರು…….


ಕಳೆದ 2 ವರ್ಷಗಳ ಹಿಂದೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಮದ್ಯವರ್ಜನ ಶಿಬಿರ ದಿಂದ ತನ್ನ ಜೀವನ ಪಾವನವಾಯಿತು…. ಮತ್ತು ಕಳೆದ 3 ತಿಂಗಳ ಹಿಂದೆ ಸಮಾಜದಲ್ಲಿ ಸ್ವಾವಲಂಬಿಯಾಗಿ ಸಾಧನೆಯನ್ನು ಮಾಡಿ ಗೌರವಯುತವಾದ ಜೀವನವನ್ನು ನಡೆಸುವ ಛಲವನ್ನು ಹೊತ್ತುಕೊಂಡು 50000 ಸ್ವತ: ದುಡಿಮೆ ಮಾಡಿ , & ಇತರರ ಸಹಕಾರದಿಂದ ತನ್ನ ತಾಯಿಯ ಮಾರ್ಗದರ್ಶನದಿಂದ 2 ಲಕ್ಷ ರೂಪಾಯಿ ಬಂಡವಾಳ ಹಾಕಿ ತುಮಕೂರಿನ ಯಲ್ಲಾಪುರ ರಸ್ತೆ ಅಂತರಸನಹಳ್ಳಿ ಯಲ್ಲಿ ಶ್ರೀ ಗಣೇಶ ಗೋಬಿ ಸೆಂಟರನ್ನು ಪ್ರಾರಂಭಿಸಿರುತ್ತಾರೆ. ಇಲ್ಲಿ ಗೋಬಿ ಮಂಚೂರಿ ಪಾನಿಪುರಿ ಫ್ರೈಡ್ ರೈಸ್ ಹಾಗು ಎಲ್ಲಾತರದ ತಂಪು ಪಾನೀಯಗಳನ್ನು ಸ್ವತಹ ತಾವೇ ತಯಾರಿಸಿ ವ್ಯಾಪಾರ ಮಾಡಿ ಉತ್ತಮ ಲಾಭವನ್ನು ಪಡೆಯುತ್ತಿದ್ದಾರೆ.

ಕುಡಿತದ ಸಂದರ್ಭದಲ್ಲಿ ಯಾರು ಕೂಡ ಇವರ ಮೇಲೆ ವಿಶ್ವಾಸವಿಲ್ಲ ದವರು ಈ ಅಂಗಡಿ ತೆರೆಯಲು ಎಲ್ಲರೂ ಸಹಕಾರ ನೀಡಿರುತ್ತಾರೆ…!! ಸೆಂಟರ್ ಪ್ರಾರಂಭಿಸುವಾಗ ಧರ್ಮಸ್ಥಳದ ಪ್ರಸಾದ ಕಾಯಿ ಯನ್ನು ಇಟ್ಟು ಪೂಜೆಮಾಡಿ ಉದ್ಘಾಟನೆ ಮಾಡಿರುತ್ತಾರೆ.
ಈ ಎಲ್ಲಾ ಸಾಧನೆಗೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ, ಪೂಜ್ಯ ಹೆಗ್ಗಡೆಯವರ ಆಶೀರ್ವಾದ & ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮತ್ತು ಜನಜಾಗೃತಿ ವೇದಿಕೆಯ ಕಾರ್ಯಕರ್ತರ ಶ್ರಮದಿಂದ ಸಾಧ್ಯವಾಗಿದೆ ಎಂದು ತಾಯಿ ಮಗ ಇಬ್ಬರು ಸಂತೋಷವನ್ನು ವ್ಯಕ್ತಪಡಿಸುತ್ತಾರೆ.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 293 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 50 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 323 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 55 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 116 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ