ವ್ಯಸನ ಮುಕ್ತನಾಗಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ ಯುವಕ!!! ಆ ಒಂದು ಮದ್ಯವರ್ಜನ ಶಿಬಿರ ಯುವಕನ ಬದುಕನ್ನೇ ಬದಲಾಯಿಸಿ ಬಿಟ್ಟಿತ್ತೇ!!!? “ಸ್ವಾವಲಂಬಿ ಬದುಕು”

“ಮದ್ಯಮುಕ್ತನಾಗಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ – ಮಂಜು”

ತುಮಕೂರು ತಾಲೂಕಿನ ಅಂತರಸನಹಳ್ಳಿ ಯ ದಿವಂಗತ ವೀರಭದ್ರಪ್ಪನವರ ಮಗನಾದ 34 ವರ್ಷ ವಯಸ್ಸಿನ ಶ್ರೀ ಮಂಜುರವರು ಕಳೆದ 2 ವರ್ಷಗಳ ಹಿಂದೆ ತುಮಕೂರಿನ ಹೋಟೆಲ್ ಅಸೋಸಿಯೇಷನ್ ನಲ್ಲಿ ನಡೆದ ಮದ್ಯವರ್ಜನ ಶಿಬಿರಕ್ಕೆ ಸೇರಿ ಇದೀಗ ಸಂಪೂರ್ಣ ಪಾನಮುಕ್ತರಾಗಿ ಸ್ವತ: ಶ್ರೀ ಗಣೇಶ ಗೋಬಿ ಸೆಂಟರ ನ್ನು ಪ್ರಾರಂಭಿಸಿ ನೆಮ್ಮದಿಯ ಜೀವನವನ್ನು ನಡೆಸುತ್ತಿದ್ದಾರೆ.


ತಂದೆ ವೀರಭದ್ರಯ್ಯ ನವರು ಅಡುಗೆ ಕೆಲಸ ಮಾಡುತ್ತಿದ್ದು ಅವರೂ ಮದ್ಯಪಾನ ಸೇವಿಸುತ್ತಿದ್ದರು…..!
ಸಣ್ಣ ವಯಸ್ಸಿನಲ್ಲಿ ತನ್ನ ಗೆಳೆಯರ ಸಹವಾಸದಿಂದ ಕುಡಿತ ಪ್ರಾರಂಭಿಸಿ ದಿನೇ ದಿನೇ ಕುಡಿತದ ಪ್ರಮಾಣ ಜಾಸ್ತಿಯಾಗುತ್ತಾ ಬಂತು… ತಂದೆ ಬುದ್ಧಿ ಹೇಳಿದರು ಏನೂ ಪ್ರಯೋಜನವಾಗಲಿಲ್ಲ…!! ಕಾರಣ ಅವರೂ ಮದ್ಯವ್ಯಸನಿಯಾಗಿದ್ದ ರು.
ತುಮಕೂರು ಸಿಟಿಯಲ್ಲಿ ಇದ್ದ ಎಲ್ಲಾ ವೈನ್ ಶಾಪ್ ಮತ್ತು ಬಾರ್ ಗಳ ಪರಿಚಯ ಈ ಕುಡಿತದಿಂದ ಆಗಿತ್ತು….!!!
ಕುಡಿತ ಎಷ್ಟು ವಿಪರೀತವಾಗಿತ್ತು ಎಂದರೆ ತಾನು 5 10 ರೂಗಳನ್ನು ಭಿಕ್ಷೆಬೇಡಿಯೂ ಕುಡಿತ ಮಾಡಿಕೊಂಡು ಬಂದ ದಿನಗಳನ್ನು ಈಗ ನೆನಪಿಸಿಕೊಂಡು ಹಳೇ ಜೀವನ ಬಹಳ ಅಸಹ್ಯವಾಗಿತ್ತು…. ಮತ್ತು ಸಮಾಜದಲ್ಲಿ, ಊರಲ್ಲಿ, ಮನೆಯಲ್ಲಿ ಒಂದು ಚೂರು ಮರ್ಯಾದೆಯೇ ಇರಲಿಲ್ಲ!!!! ದಿನಕ್ಕೆ ಅಡುಗೆ ಕೆಲಸ ಮಾಡಿ 500 ರಿಂದ 600 ರೂಪಾಯಿ ಸಂಪಾದಿಸಿದರೂ ಸಂಜೆ ಮನೆಗೆ ಬರಲು ಒಂದು ರೂಪಾಯಿ ಉಳಿಯುತ್ತಿರಲಿಲ್ಲ……..
6 ವರ್ಷಗಳ ಹಿಂದೆ ತಂದೆ ತೀರಿಕೊಂಡರೂ ಬುದ್ಧಿ ಬರಲಿಲ್ಲ,!!! 2011ರಲ್ಲಿ ಮನೆಯಲ್ಲಿ ನಡೆದ ದೊಡ್ಡದೊಂದು ಸಮಸ್ಯೆಯಿಂದ ಕುಡಿತದ ಪ್ರಮಾಣ ಇನ್ನೂ ಜಾಸ್ತಿಯಾಯಿತು. ತಾಯಿಗೆ ಒಂದು ಚೂರು ಪ್ರೀತಿ ಗೌರವ ನೀಡಲಿಲ್ಲ!!! ಬದಲಾಗಿ ಮಾನಸಿಕ ಹಿಂಸೆ ನೀಡುತ್ತಿದ್ದರು…….


ಕಳೆದ 2 ವರ್ಷಗಳ ಹಿಂದೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಮದ್ಯವರ್ಜನ ಶಿಬಿರ ದಿಂದ ತನ್ನ ಜೀವನ ಪಾವನವಾಯಿತು…. ಮತ್ತು ಕಳೆದ 3 ತಿಂಗಳ ಹಿಂದೆ ಸಮಾಜದಲ್ಲಿ ಸ್ವಾವಲಂಬಿಯಾಗಿ ಸಾಧನೆಯನ್ನು ಮಾಡಿ ಗೌರವಯುತವಾದ ಜೀವನವನ್ನು ನಡೆಸುವ ಛಲವನ್ನು ಹೊತ್ತುಕೊಂಡು 50000 ಸ್ವತ: ದುಡಿಮೆ ಮಾಡಿ , & ಇತರರ ಸಹಕಾರದಿಂದ ತನ್ನ ತಾಯಿಯ ಮಾರ್ಗದರ್ಶನದಿಂದ 2 ಲಕ್ಷ ರೂಪಾಯಿ ಬಂಡವಾಳ ಹಾಕಿ ತುಮಕೂರಿನ ಯಲ್ಲಾಪುರ ರಸ್ತೆ ಅಂತರಸನಹಳ್ಳಿ ಯಲ್ಲಿ ಶ್ರೀ ಗಣೇಶ ಗೋಬಿ ಸೆಂಟರನ್ನು ಪ್ರಾರಂಭಿಸಿರುತ್ತಾರೆ. ಇಲ್ಲಿ ಗೋಬಿ ಮಂಚೂರಿ ಪಾನಿಪುರಿ ಫ್ರೈಡ್ ರೈಸ್ ಹಾಗು ಎಲ್ಲಾತರದ ತಂಪು ಪಾನೀಯಗಳನ್ನು ಸ್ವತಹ ತಾವೇ ತಯಾರಿಸಿ ವ್ಯಾಪಾರ ಮಾಡಿ ಉತ್ತಮ ಲಾಭವನ್ನು ಪಡೆಯುತ್ತಿದ್ದಾರೆ.

ಕುಡಿತದ ಸಂದರ್ಭದಲ್ಲಿ ಯಾರು ಕೂಡ ಇವರ ಮೇಲೆ ವಿಶ್ವಾಸವಿಲ್ಲ ದವರು ಈ ಅಂಗಡಿ ತೆರೆಯಲು ಎಲ್ಲರೂ ಸಹಕಾರ ನೀಡಿರುತ್ತಾರೆ…!! ಸೆಂಟರ್ ಪ್ರಾರಂಭಿಸುವಾಗ ಧರ್ಮಸ್ಥಳದ ಪ್ರಸಾದ ಕಾಯಿ ಯನ್ನು ಇಟ್ಟು ಪೂಜೆಮಾಡಿ ಉದ್ಘಾಟನೆ ಮಾಡಿರುತ್ತಾರೆ.
ಈ ಎಲ್ಲಾ ಸಾಧನೆಗೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ, ಪೂಜ್ಯ ಹೆಗ್ಗಡೆಯವರ ಆಶೀರ್ವಾದ & ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮತ್ತು ಜನಜಾಗೃತಿ ವೇದಿಕೆಯ ಕಾರ್ಯಕರ್ತರ ಶ್ರಮದಿಂದ ಸಾಧ್ಯವಾಗಿದೆ ಎಂದು ತಾಯಿ ಮಗ ಇಬ್ಬರು ಸಂತೋಷವನ್ನು ವ್ಯಕ್ತಪಡಿಸುತ್ತಾರೆ.

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 18 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 23 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 39 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 215 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 62 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ