ವ್ಯಸನ ಮುಕ್ತನಾಗಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ ಯುವಕ!!! ಆ ಒಂದು ಮದ್ಯವರ್ಜನ ಶಿಬಿರ ಯುವಕನ ಬದುಕನ್ನೇ ಬದಲಾಯಿಸಿ ಬಿಟ್ಟಿತ್ತೇ!!!? “ಸ್ವಾವಲಂಬಿ ಬದುಕು”

“ಮದ್ಯಮುಕ್ತನಾಗಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ – ಮಂಜು”

ತುಮಕೂರು ತಾಲೂಕಿನ ಅಂತರಸನಹಳ್ಳಿ ಯ ದಿವಂಗತ ವೀರಭದ್ರಪ್ಪನವರ ಮಗನಾದ 34 ವರ್ಷ ವಯಸ್ಸಿನ ಶ್ರೀ ಮಂಜುರವರು ಕಳೆದ 2 ವರ್ಷಗಳ ಹಿಂದೆ ತುಮಕೂರಿನ ಹೋಟೆಲ್ ಅಸೋಸಿಯೇಷನ್ ನಲ್ಲಿ ನಡೆದ ಮದ್ಯವರ್ಜನ ಶಿಬಿರಕ್ಕೆ ಸೇರಿ ಇದೀಗ ಸಂಪೂರ್ಣ ಪಾನಮುಕ್ತರಾಗಿ ಸ್ವತ: ಶ್ರೀ ಗಣೇಶ ಗೋಬಿ ಸೆಂಟರ ನ್ನು ಪ್ರಾರಂಭಿಸಿ ನೆಮ್ಮದಿಯ ಜೀವನವನ್ನು ನಡೆಸುತ್ತಿದ್ದಾರೆ.


ತಂದೆ ವೀರಭದ್ರಯ್ಯ ನವರು ಅಡುಗೆ ಕೆಲಸ ಮಾಡುತ್ತಿದ್ದು ಅವರೂ ಮದ್ಯಪಾನ ಸೇವಿಸುತ್ತಿದ್ದರು…..!
ಸಣ್ಣ ವಯಸ್ಸಿನಲ್ಲಿ ತನ್ನ ಗೆಳೆಯರ ಸಹವಾಸದಿಂದ ಕುಡಿತ ಪ್ರಾರಂಭಿಸಿ ದಿನೇ ದಿನೇ ಕುಡಿತದ ಪ್ರಮಾಣ ಜಾಸ್ತಿಯಾಗುತ್ತಾ ಬಂತು… ತಂದೆ ಬುದ್ಧಿ ಹೇಳಿದರು ಏನೂ ಪ್ರಯೋಜನವಾಗಲಿಲ್ಲ…!! ಕಾರಣ ಅವರೂ ಮದ್ಯವ್ಯಸನಿಯಾಗಿದ್ದ ರು.
ತುಮಕೂರು ಸಿಟಿಯಲ್ಲಿ ಇದ್ದ ಎಲ್ಲಾ ವೈನ್ ಶಾಪ್ ಮತ್ತು ಬಾರ್ ಗಳ ಪರಿಚಯ ಈ ಕುಡಿತದಿಂದ ಆಗಿತ್ತು….!!!
ಕುಡಿತ ಎಷ್ಟು ವಿಪರೀತವಾಗಿತ್ತು ಎಂದರೆ ತಾನು 5 10 ರೂಗಳನ್ನು ಭಿಕ್ಷೆಬೇಡಿಯೂ ಕುಡಿತ ಮಾಡಿಕೊಂಡು ಬಂದ ದಿನಗಳನ್ನು ಈಗ ನೆನಪಿಸಿಕೊಂಡು ಹಳೇ ಜೀವನ ಬಹಳ ಅಸಹ್ಯವಾಗಿತ್ತು…. ಮತ್ತು ಸಮಾಜದಲ್ಲಿ, ಊರಲ್ಲಿ, ಮನೆಯಲ್ಲಿ ಒಂದು ಚೂರು ಮರ್ಯಾದೆಯೇ ಇರಲಿಲ್ಲ!!!! ದಿನಕ್ಕೆ ಅಡುಗೆ ಕೆಲಸ ಮಾಡಿ 500 ರಿಂದ 600 ರೂಪಾಯಿ ಸಂಪಾದಿಸಿದರೂ ಸಂಜೆ ಮನೆಗೆ ಬರಲು ಒಂದು ರೂಪಾಯಿ ಉಳಿಯುತ್ತಿರಲಿಲ್ಲ……..
6 ವರ್ಷಗಳ ಹಿಂದೆ ತಂದೆ ತೀರಿಕೊಂಡರೂ ಬುದ್ಧಿ ಬರಲಿಲ್ಲ,!!! 2011ರಲ್ಲಿ ಮನೆಯಲ್ಲಿ ನಡೆದ ದೊಡ್ಡದೊಂದು ಸಮಸ್ಯೆಯಿಂದ ಕುಡಿತದ ಪ್ರಮಾಣ ಇನ್ನೂ ಜಾಸ್ತಿಯಾಯಿತು. ತಾಯಿಗೆ ಒಂದು ಚೂರು ಪ್ರೀತಿ ಗೌರವ ನೀಡಲಿಲ್ಲ!!! ಬದಲಾಗಿ ಮಾನಸಿಕ ಹಿಂಸೆ ನೀಡುತ್ತಿದ್ದರು…….


ಕಳೆದ 2 ವರ್ಷಗಳ ಹಿಂದೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಮದ್ಯವರ್ಜನ ಶಿಬಿರ ದಿಂದ ತನ್ನ ಜೀವನ ಪಾವನವಾಯಿತು…. ಮತ್ತು ಕಳೆದ 3 ತಿಂಗಳ ಹಿಂದೆ ಸಮಾಜದಲ್ಲಿ ಸ್ವಾವಲಂಬಿಯಾಗಿ ಸಾಧನೆಯನ್ನು ಮಾಡಿ ಗೌರವಯುತವಾದ ಜೀವನವನ್ನು ನಡೆಸುವ ಛಲವನ್ನು ಹೊತ್ತುಕೊಂಡು 50000 ಸ್ವತ: ದುಡಿಮೆ ಮಾಡಿ , & ಇತರರ ಸಹಕಾರದಿಂದ ತನ್ನ ತಾಯಿಯ ಮಾರ್ಗದರ್ಶನದಿಂದ 2 ಲಕ್ಷ ರೂಪಾಯಿ ಬಂಡವಾಳ ಹಾಕಿ ತುಮಕೂರಿನ ಯಲ್ಲಾಪುರ ರಸ್ತೆ ಅಂತರಸನಹಳ್ಳಿ ಯಲ್ಲಿ ಶ್ರೀ ಗಣೇಶ ಗೋಬಿ ಸೆಂಟರನ್ನು ಪ್ರಾರಂಭಿಸಿರುತ್ತಾರೆ. ಇಲ್ಲಿ ಗೋಬಿ ಮಂಚೂರಿ ಪಾನಿಪುರಿ ಫ್ರೈಡ್ ರೈಸ್ ಹಾಗು ಎಲ್ಲಾತರದ ತಂಪು ಪಾನೀಯಗಳನ್ನು ಸ್ವತಹ ತಾವೇ ತಯಾರಿಸಿ ವ್ಯಾಪಾರ ಮಾಡಿ ಉತ್ತಮ ಲಾಭವನ್ನು ಪಡೆಯುತ್ತಿದ್ದಾರೆ.

ಕುಡಿತದ ಸಂದರ್ಭದಲ್ಲಿ ಯಾರು ಕೂಡ ಇವರ ಮೇಲೆ ವಿಶ್ವಾಸವಿಲ್ಲ ದವರು ಈ ಅಂಗಡಿ ತೆರೆಯಲು ಎಲ್ಲರೂ ಸಹಕಾರ ನೀಡಿರುತ್ತಾರೆ…!! ಸೆಂಟರ್ ಪ್ರಾರಂಭಿಸುವಾಗ ಧರ್ಮಸ್ಥಳದ ಪ್ರಸಾದ ಕಾಯಿ ಯನ್ನು ಇಟ್ಟು ಪೂಜೆಮಾಡಿ ಉದ್ಘಾಟನೆ ಮಾಡಿರುತ್ತಾರೆ.
ಈ ಎಲ್ಲಾ ಸಾಧನೆಗೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ, ಪೂಜ್ಯ ಹೆಗ್ಗಡೆಯವರ ಆಶೀರ್ವಾದ & ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮತ್ತು ಜನಜಾಗೃತಿ ವೇದಿಕೆಯ ಕಾರ್ಯಕರ್ತರ ಶ್ರಮದಿಂದ ಸಾಧ್ಯವಾಗಿದೆ ಎಂದು ತಾಯಿ ಮಗ ಇಬ್ಬರು ಸಂತೋಷವನ್ನು ವ್ಯಕ್ತಪಡಿಸುತ್ತಾರೆ.

Spread the love
  • Related Posts

    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    ಬೆಳ್ತಂಗಡಿ: ಹಲವು ಶೈಕ್ಷಣಿಕ ದಾಖಲೆಗಳ ಮೂಲಕ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಹೆಸರುವಾಸಿಯಾದ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣ ಇಂದು ಹೊಸ ವಿಷಯಕ್ಕೆ ಗಮನ ಸೆಳೆಯಿತು. ಏಪ್ರಿಲ್ 10 ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರ…

    Spread the love

    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    ಕನ್ಯಾಡಿ: ಸೇವಾ ಭಾರತಿ ಕನ್ಯಾಡಿ ವತಿಯಿಂದ ಕರ್ನಾಟಕ ಸರ್ಕಾರದ ಅಸಂಘಟಿತ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಮಿಕ ಆಯುಕ್ತರಾದ ಎಸ್.ಬಿ. ರವಿಕುಮಾರ್ ಅವರನ್ನು ಭೇಟಿ ಮಾಡಿ ಅಸಂಘಟಿತ ಕಾರ್ಮಿಕರ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲಾಯಿತು. ಪ್ರಮುಖವಾಗಿ ಕೃಷಿ ಕಾರ್ಮಿಕರು…

    Spread the love

    You Missed

    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    • By admin
    • April 10, 2026
    • 26 views
    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    • By admin
    • April 10, 2026
    • 7 views
    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    • By admin
    • April 9, 2026
    • 26 views
    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    • By admin
    • April 9, 2026
    • 34 views
    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

    • By admin
    • April 7, 2026
    • 89 views
    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    • By admin
    • April 7, 2026
    • 37 views
     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ!