ವ್ಯಸನ ಮುಕ್ತನಾಗಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ ಯುವಕ!!! ಆ ಒಂದು ಮದ್ಯವರ್ಜನ ಶಿಬಿರ ಯುವಕನ ಬದುಕನ್ನೇ ಬದಲಾಯಿಸಿ ಬಿಟ್ಟಿತ್ತೇ!!!? “ಸ್ವಾವಲಂಬಿ ಬದುಕು”

“ಮದ್ಯಮುಕ್ತನಾಗಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ – ಮಂಜು”

ತುಮಕೂರು ತಾಲೂಕಿನ ಅಂತರಸನಹಳ್ಳಿ ಯ ದಿವಂಗತ ವೀರಭದ್ರಪ್ಪನವರ ಮಗನಾದ 34 ವರ್ಷ ವಯಸ್ಸಿನ ಶ್ರೀ ಮಂಜುರವರು ಕಳೆದ 2 ವರ್ಷಗಳ ಹಿಂದೆ ತುಮಕೂರಿನ ಹೋಟೆಲ್ ಅಸೋಸಿಯೇಷನ್ ನಲ್ಲಿ ನಡೆದ ಮದ್ಯವರ್ಜನ ಶಿಬಿರಕ್ಕೆ ಸೇರಿ ಇದೀಗ ಸಂಪೂರ್ಣ ಪಾನಮುಕ್ತರಾಗಿ ಸ್ವತ: ಶ್ರೀ ಗಣೇಶ ಗೋಬಿ ಸೆಂಟರ ನ್ನು ಪ್ರಾರಂಭಿಸಿ ನೆಮ್ಮದಿಯ ಜೀವನವನ್ನು ನಡೆಸುತ್ತಿದ್ದಾರೆ.


ತಂದೆ ವೀರಭದ್ರಯ್ಯ ನವರು ಅಡುಗೆ ಕೆಲಸ ಮಾಡುತ್ತಿದ್ದು ಅವರೂ ಮದ್ಯಪಾನ ಸೇವಿಸುತ್ತಿದ್ದರು…..!
ಸಣ್ಣ ವಯಸ್ಸಿನಲ್ಲಿ ತನ್ನ ಗೆಳೆಯರ ಸಹವಾಸದಿಂದ ಕುಡಿತ ಪ್ರಾರಂಭಿಸಿ ದಿನೇ ದಿನೇ ಕುಡಿತದ ಪ್ರಮಾಣ ಜಾಸ್ತಿಯಾಗುತ್ತಾ ಬಂತು… ತಂದೆ ಬುದ್ಧಿ ಹೇಳಿದರು ಏನೂ ಪ್ರಯೋಜನವಾಗಲಿಲ್ಲ…!! ಕಾರಣ ಅವರೂ ಮದ್ಯವ್ಯಸನಿಯಾಗಿದ್ದ ರು.
ತುಮಕೂರು ಸಿಟಿಯಲ್ಲಿ ಇದ್ದ ಎಲ್ಲಾ ವೈನ್ ಶಾಪ್ ಮತ್ತು ಬಾರ್ ಗಳ ಪರಿಚಯ ಈ ಕುಡಿತದಿಂದ ಆಗಿತ್ತು….!!!
ಕುಡಿತ ಎಷ್ಟು ವಿಪರೀತವಾಗಿತ್ತು ಎಂದರೆ ತಾನು 5 10 ರೂಗಳನ್ನು ಭಿಕ್ಷೆಬೇಡಿಯೂ ಕುಡಿತ ಮಾಡಿಕೊಂಡು ಬಂದ ದಿನಗಳನ್ನು ಈಗ ನೆನಪಿಸಿಕೊಂಡು ಹಳೇ ಜೀವನ ಬಹಳ ಅಸಹ್ಯವಾಗಿತ್ತು…. ಮತ್ತು ಸಮಾಜದಲ್ಲಿ, ಊರಲ್ಲಿ, ಮನೆಯಲ್ಲಿ ಒಂದು ಚೂರು ಮರ್ಯಾದೆಯೇ ಇರಲಿಲ್ಲ!!!! ದಿನಕ್ಕೆ ಅಡುಗೆ ಕೆಲಸ ಮಾಡಿ 500 ರಿಂದ 600 ರೂಪಾಯಿ ಸಂಪಾದಿಸಿದರೂ ಸಂಜೆ ಮನೆಗೆ ಬರಲು ಒಂದು ರೂಪಾಯಿ ಉಳಿಯುತ್ತಿರಲಿಲ್ಲ……..
6 ವರ್ಷಗಳ ಹಿಂದೆ ತಂದೆ ತೀರಿಕೊಂಡರೂ ಬುದ್ಧಿ ಬರಲಿಲ್ಲ,!!! 2011ರಲ್ಲಿ ಮನೆಯಲ್ಲಿ ನಡೆದ ದೊಡ್ಡದೊಂದು ಸಮಸ್ಯೆಯಿಂದ ಕುಡಿತದ ಪ್ರಮಾಣ ಇನ್ನೂ ಜಾಸ್ತಿಯಾಯಿತು. ತಾಯಿಗೆ ಒಂದು ಚೂರು ಪ್ರೀತಿ ಗೌರವ ನೀಡಲಿಲ್ಲ!!! ಬದಲಾಗಿ ಮಾನಸಿಕ ಹಿಂಸೆ ನೀಡುತ್ತಿದ್ದರು…….


ಕಳೆದ 2 ವರ್ಷಗಳ ಹಿಂದೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಮದ್ಯವರ್ಜನ ಶಿಬಿರ ದಿಂದ ತನ್ನ ಜೀವನ ಪಾವನವಾಯಿತು…. ಮತ್ತು ಕಳೆದ 3 ತಿಂಗಳ ಹಿಂದೆ ಸಮಾಜದಲ್ಲಿ ಸ್ವಾವಲಂಬಿಯಾಗಿ ಸಾಧನೆಯನ್ನು ಮಾಡಿ ಗೌರವಯುತವಾದ ಜೀವನವನ್ನು ನಡೆಸುವ ಛಲವನ್ನು ಹೊತ್ತುಕೊಂಡು 50000 ಸ್ವತ: ದುಡಿಮೆ ಮಾಡಿ , & ಇತರರ ಸಹಕಾರದಿಂದ ತನ್ನ ತಾಯಿಯ ಮಾರ್ಗದರ್ಶನದಿಂದ 2 ಲಕ್ಷ ರೂಪಾಯಿ ಬಂಡವಾಳ ಹಾಕಿ ತುಮಕೂರಿನ ಯಲ್ಲಾಪುರ ರಸ್ತೆ ಅಂತರಸನಹಳ್ಳಿ ಯಲ್ಲಿ ಶ್ರೀ ಗಣೇಶ ಗೋಬಿ ಸೆಂಟರನ್ನು ಪ್ರಾರಂಭಿಸಿರುತ್ತಾರೆ. ಇಲ್ಲಿ ಗೋಬಿ ಮಂಚೂರಿ ಪಾನಿಪುರಿ ಫ್ರೈಡ್ ರೈಸ್ ಹಾಗು ಎಲ್ಲಾತರದ ತಂಪು ಪಾನೀಯಗಳನ್ನು ಸ್ವತಹ ತಾವೇ ತಯಾರಿಸಿ ವ್ಯಾಪಾರ ಮಾಡಿ ಉತ್ತಮ ಲಾಭವನ್ನು ಪಡೆಯುತ್ತಿದ್ದಾರೆ.

ಕುಡಿತದ ಸಂದರ್ಭದಲ್ಲಿ ಯಾರು ಕೂಡ ಇವರ ಮೇಲೆ ವಿಶ್ವಾಸವಿಲ್ಲ ದವರು ಈ ಅಂಗಡಿ ತೆರೆಯಲು ಎಲ್ಲರೂ ಸಹಕಾರ ನೀಡಿರುತ್ತಾರೆ…!! ಸೆಂಟರ್ ಪ್ರಾರಂಭಿಸುವಾಗ ಧರ್ಮಸ್ಥಳದ ಪ್ರಸಾದ ಕಾಯಿ ಯನ್ನು ಇಟ್ಟು ಪೂಜೆಮಾಡಿ ಉದ್ಘಾಟನೆ ಮಾಡಿರುತ್ತಾರೆ.
ಈ ಎಲ್ಲಾ ಸಾಧನೆಗೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ, ಪೂಜ್ಯ ಹೆಗ್ಗಡೆಯವರ ಆಶೀರ್ವಾದ & ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮತ್ತು ಜನಜಾಗೃತಿ ವೇದಿಕೆಯ ಕಾರ್ಯಕರ್ತರ ಶ್ರಮದಿಂದ ಸಾಧ್ಯವಾಗಿದೆ ಎಂದು ತಾಯಿ ಮಗ ಇಬ್ಬರು ಸಂತೋಷವನ್ನು ವ್ಯಕ್ತಪಡಿಸುತ್ತಾರೆ.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 28 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 75 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ