ವ್ಯಸನ ಮುಕ್ತನಾಗಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ ಯುವಕ!!! ಆ ಒಂದು ಮದ್ಯವರ್ಜನ ಶಿಬಿರ ಯುವಕನ ಬದುಕನ್ನೇ ಬದಲಾಯಿಸಿ ಬಿಟ್ಟಿತ್ತೇ!!!? “ಸ್ವಾವಲಂಬಿ ಬದುಕು”

“ಮದ್ಯಮುಕ್ತನಾಗಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ – ಮಂಜು”

ತುಮಕೂರು ತಾಲೂಕಿನ ಅಂತರಸನಹಳ್ಳಿ ಯ ದಿವಂಗತ ವೀರಭದ್ರಪ್ಪನವರ ಮಗನಾದ 34 ವರ್ಷ ವಯಸ್ಸಿನ ಶ್ರೀ ಮಂಜುರವರು ಕಳೆದ 2 ವರ್ಷಗಳ ಹಿಂದೆ ತುಮಕೂರಿನ ಹೋಟೆಲ್ ಅಸೋಸಿಯೇಷನ್ ನಲ್ಲಿ ನಡೆದ ಮದ್ಯವರ್ಜನ ಶಿಬಿರಕ್ಕೆ ಸೇರಿ ಇದೀಗ ಸಂಪೂರ್ಣ ಪಾನಮುಕ್ತರಾಗಿ ಸ್ವತ: ಶ್ರೀ ಗಣೇಶ ಗೋಬಿ ಸೆಂಟರ ನ್ನು ಪ್ರಾರಂಭಿಸಿ ನೆಮ್ಮದಿಯ ಜೀವನವನ್ನು ನಡೆಸುತ್ತಿದ್ದಾರೆ.


ತಂದೆ ವೀರಭದ್ರಯ್ಯ ನವರು ಅಡುಗೆ ಕೆಲಸ ಮಾಡುತ್ತಿದ್ದು ಅವರೂ ಮದ್ಯಪಾನ ಸೇವಿಸುತ್ತಿದ್ದರು…..!
ಸಣ್ಣ ವಯಸ್ಸಿನಲ್ಲಿ ತನ್ನ ಗೆಳೆಯರ ಸಹವಾಸದಿಂದ ಕುಡಿತ ಪ್ರಾರಂಭಿಸಿ ದಿನೇ ದಿನೇ ಕುಡಿತದ ಪ್ರಮಾಣ ಜಾಸ್ತಿಯಾಗುತ್ತಾ ಬಂತು… ತಂದೆ ಬುದ್ಧಿ ಹೇಳಿದರು ಏನೂ ಪ್ರಯೋಜನವಾಗಲಿಲ್ಲ…!! ಕಾರಣ ಅವರೂ ಮದ್ಯವ್ಯಸನಿಯಾಗಿದ್ದ ರು.
ತುಮಕೂರು ಸಿಟಿಯಲ್ಲಿ ಇದ್ದ ಎಲ್ಲಾ ವೈನ್ ಶಾಪ್ ಮತ್ತು ಬಾರ್ ಗಳ ಪರಿಚಯ ಈ ಕುಡಿತದಿಂದ ಆಗಿತ್ತು….!!!
ಕುಡಿತ ಎಷ್ಟು ವಿಪರೀತವಾಗಿತ್ತು ಎಂದರೆ ತಾನು 5 10 ರೂಗಳನ್ನು ಭಿಕ್ಷೆಬೇಡಿಯೂ ಕುಡಿತ ಮಾಡಿಕೊಂಡು ಬಂದ ದಿನಗಳನ್ನು ಈಗ ನೆನಪಿಸಿಕೊಂಡು ಹಳೇ ಜೀವನ ಬಹಳ ಅಸಹ್ಯವಾಗಿತ್ತು…. ಮತ್ತು ಸಮಾಜದಲ್ಲಿ, ಊರಲ್ಲಿ, ಮನೆಯಲ್ಲಿ ಒಂದು ಚೂರು ಮರ್ಯಾದೆಯೇ ಇರಲಿಲ್ಲ!!!! ದಿನಕ್ಕೆ ಅಡುಗೆ ಕೆಲಸ ಮಾಡಿ 500 ರಿಂದ 600 ರೂಪಾಯಿ ಸಂಪಾದಿಸಿದರೂ ಸಂಜೆ ಮನೆಗೆ ಬರಲು ಒಂದು ರೂಪಾಯಿ ಉಳಿಯುತ್ತಿರಲಿಲ್ಲ……..
6 ವರ್ಷಗಳ ಹಿಂದೆ ತಂದೆ ತೀರಿಕೊಂಡರೂ ಬುದ್ಧಿ ಬರಲಿಲ್ಲ,!!! 2011ರಲ್ಲಿ ಮನೆಯಲ್ಲಿ ನಡೆದ ದೊಡ್ಡದೊಂದು ಸಮಸ್ಯೆಯಿಂದ ಕುಡಿತದ ಪ್ರಮಾಣ ಇನ್ನೂ ಜಾಸ್ತಿಯಾಯಿತು. ತಾಯಿಗೆ ಒಂದು ಚೂರು ಪ್ರೀತಿ ಗೌರವ ನೀಡಲಿಲ್ಲ!!! ಬದಲಾಗಿ ಮಾನಸಿಕ ಹಿಂಸೆ ನೀಡುತ್ತಿದ್ದರು…….


ಕಳೆದ 2 ವರ್ಷಗಳ ಹಿಂದೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಮದ್ಯವರ್ಜನ ಶಿಬಿರ ದಿಂದ ತನ್ನ ಜೀವನ ಪಾವನವಾಯಿತು…. ಮತ್ತು ಕಳೆದ 3 ತಿಂಗಳ ಹಿಂದೆ ಸಮಾಜದಲ್ಲಿ ಸ್ವಾವಲಂಬಿಯಾಗಿ ಸಾಧನೆಯನ್ನು ಮಾಡಿ ಗೌರವಯುತವಾದ ಜೀವನವನ್ನು ನಡೆಸುವ ಛಲವನ್ನು ಹೊತ್ತುಕೊಂಡು 50000 ಸ್ವತ: ದುಡಿಮೆ ಮಾಡಿ , & ಇತರರ ಸಹಕಾರದಿಂದ ತನ್ನ ತಾಯಿಯ ಮಾರ್ಗದರ್ಶನದಿಂದ 2 ಲಕ್ಷ ರೂಪಾಯಿ ಬಂಡವಾಳ ಹಾಕಿ ತುಮಕೂರಿನ ಯಲ್ಲಾಪುರ ರಸ್ತೆ ಅಂತರಸನಹಳ್ಳಿ ಯಲ್ಲಿ ಶ್ರೀ ಗಣೇಶ ಗೋಬಿ ಸೆಂಟರನ್ನು ಪ್ರಾರಂಭಿಸಿರುತ್ತಾರೆ. ಇಲ್ಲಿ ಗೋಬಿ ಮಂಚೂರಿ ಪಾನಿಪುರಿ ಫ್ರೈಡ್ ರೈಸ್ ಹಾಗು ಎಲ್ಲಾತರದ ತಂಪು ಪಾನೀಯಗಳನ್ನು ಸ್ವತಹ ತಾವೇ ತಯಾರಿಸಿ ವ್ಯಾಪಾರ ಮಾಡಿ ಉತ್ತಮ ಲಾಭವನ್ನು ಪಡೆಯುತ್ತಿದ್ದಾರೆ.

ಕುಡಿತದ ಸಂದರ್ಭದಲ್ಲಿ ಯಾರು ಕೂಡ ಇವರ ಮೇಲೆ ವಿಶ್ವಾಸವಿಲ್ಲ ದವರು ಈ ಅಂಗಡಿ ತೆರೆಯಲು ಎಲ್ಲರೂ ಸಹಕಾರ ನೀಡಿರುತ್ತಾರೆ…!! ಸೆಂಟರ್ ಪ್ರಾರಂಭಿಸುವಾಗ ಧರ್ಮಸ್ಥಳದ ಪ್ರಸಾದ ಕಾಯಿ ಯನ್ನು ಇಟ್ಟು ಪೂಜೆಮಾಡಿ ಉದ್ಘಾಟನೆ ಮಾಡಿರುತ್ತಾರೆ.
ಈ ಎಲ್ಲಾ ಸಾಧನೆಗೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ, ಪೂಜ್ಯ ಹೆಗ್ಗಡೆಯವರ ಆಶೀರ್ವಾದ & ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮತ್ತು ಜನಜಾಗೃತಿ ವೇದಿಕೆಯ ಕಾರ್ಯಕರ್ತರ ಶ್ರಮದಿಂದ ಸಾಧ್ಯವಾಗಿದೆ ಎಂದು ತಾಯಿ ಮಗ ಇಬ್ಬರು ಸಂತೋಷವನ್ನು ವ್ಯಕ್ತಪಡಿಸುತ್ತಾರೆ.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 4 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ