ಮಂತ್ರಾಲಯ ಧರ್ಮಜಾಗೃತಿ ತಾಣ: ಡಾ| ಹೆಗ್ಗಡೆ

ಮಂತ್ರಾಲಯ: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠ ಧರ್ಮ ಜಾಗೃತಿ ತಾಣವಾಗಿದ್ದು ದೈವಶಕ್ತಿ ಹೊಂದಿದ ಪುಣ್ಯಸ್ಥಳ ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ನುಡಿದರು.

ಶ್ರೀ ಮಠದ ವತಿಯಿಂದ ಡಾ. ಹೆಗ್ಗಡೆಯವರನ್ನು ಗೌರವಿಸಲಾಯಿತು.

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶುಕ್ರವಾರದಿಂದ ಪ್ರಾರಂಭವಾದ ಶ್ರೀ ಗುರು ವೈಭವೋತ್ಸವದ ನಿಮಿತ್ತ ನಡೆದ ರಾಯರ ಪಟ್ಟಾಭಿಷೇಕ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇವರ ಕಣ್ತಪ್ಪಿಸಿ ಏನೂ ಮಾಡಲು ಸಾಧ್ಯವಿಲ್ಲ ನಮ್ಮ ಕಣ್ಣಿಗೆ ಕಾಣದ ಆಗಾಧ ಯಾವಾಗಲೂ ಜಾಗೃತವಾಗಿರುತ್ತದೆ. ಅದನ್ನೇ ನಾವೆಲ್ಲ ದೈವವೆಂದು ಪೂಜಿಸುತ್ತೇವೆ. 1969ರಲ್ಲಿ ನಾನು ಪ್ರಥಮ ಬಾರಿಗೆ ಮಂತ್ರಾಲಯದ ಕ್ಷೇತ್ರಕ್ಕೆ ಭೇಟಿ ನೀಡಿದ್ದೆ. ಆ ಮೇಲೆಯೂ ಸಾಕಷ್ಟು ಬಾರಿ ಬಂದು ಹೋಗಿದ್ದೇನೆ. ಆದರೆ, ಆಗ ಕಂಡ ಮಂತ್ರಾಲಯಕ್ಕೂ ಈಗ ನೋಡುತ್ತಿರುವ ಮಂತ್ರಾಲಯಕ್ಕೂ ಅಗಾಧ ಬದಲಾವಣೆ ಕಂಡು ಬರುತ್ತಿದೆ. ಭೌತಿಕ ಪ್ರಗತಿ ದೊಡ್ಡ ಮಟ್ಟದಲ್ಲಿ ಆಗಿದೆ. ಮಠದ ಪೀಠಾಧಿಪತಿಗಳ ಆಜ್ಞೆ ಅನುಸಾರ ಇಲ್ಲಿಗೆ ಬರುವ ಭಾಗ್ಯ ಸಿಕ್ಕಿದೆ ಎಂದರು.

ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಅನುಗ್ರಹ ಸಂದೇಶ ನೀಡಿ, ಗುರುವೈಭೋತ್ಸವ, ಜಾತ್ಯತೀತ, ಧರ್ಮಾತೀತ ಆಚರಣೆಯಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು 2009ರಲ್ಲಿ ಮಂತ್ರಾಲಯ ಕ್ಷೇತ್ರದಲ್ಲಿ ಉಂಟಾದ ಪ್ರವಾಹ ವೇಳೆ ಸಂಕಷ್ಟಕ್ಕೀಡಾದ ಜನರಿಗೆ ಅಗತ್ಯ ನೆರವು ನೀಡಿದ್ದಾರೆ. ಸ್ವಯಂ ಸೇವಕರನ್ನು ನೆರವಿಗೆ ಕಳುಹಿಸಿದ ಅವರಿಗೂ ಮಂತ್ರಾಲಯಕ್ಕೂ ವಿಶೇಷ ನಂಟಿದೆ. ಆದರ್ಶ ವ್ಯಕ್ತಿ ಹೇಗಿರಲಿ ಎನ್ನಲು ಹೆಗ್ಗಡೆಯವರಿಗಿಂತ ನಿದರ್ಶನ ಸಿಗುವುದಿಲ್ಲ. ಮಂತ್ರಾಲಯದ ಸೇರಿದಂತೆ ಶ್ರೀಮಠದ ಶಾಖಾ ಮಠ ಗುರುವೈಭೋತ್ಸವ ಕಾರ್ಯ ನಡೆಯಲಿವೆ. ಶ್ರೀಮಠದಲ್ಲಿ ಈ ಆರು ದಿನ ನಡೆಯುವ ಗುರುವೈಭೋತ್ಸವ ಕಾರ್ಯಕ್ರಮದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ ಎಂದರು.

ರಜತದ ಸಿಂಹ, ಅಶ್ವ,ಗಜ, ವಾಹನಗಳನ್ನು ಸಮರ್ಪಿಸಲಾಯಿತು. ಶ್ರೀಮಠದಲ್ಲೇ ಮುದ್ರಿಸಿದ ತಮಿಳು, ಕನ್ನಡ ಹಾಗೂ ತೆಲುಗು ಭಾಷೆಗಳ ಪಂಚಾಂಗವನ್ನು ಬಿಡುಗಡೆ ಗೊಳಿಸಲಾಯಿತು. ವಿದ್ವಾನ್ ರಾಜಾ ಎನ್. ಗಿರಿಯಾಚಾರ್ಯ, ವಿದ್ಯಾಪೀಠದ ಪ್ರಾಚಾರ್ಯ ಎನ್.ವಾದಿರಾಜಾಚಾರ್ಯ, ಪಂಚಮುಖಿ, ಶ್ರೀಮಠದ ವ್ಯವಸ್ಥಾಪಕರಾದ ವೆಂಕಟೇಶ ಜೋಶಿ ಇನ್ನಿತರರಿದ್ದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ