ಮಂತ್ರಾಲಯ ಧರ್ಮಜಾಗೃತಿ ತಾಣ: ಡಾ| ಹೆಗ್ಗಡೆ

ಮಂತ್ರಾಲಯ: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠ ಧರ್ಮ ಜಾಗೃತಿ ತಾಣವಾಗಿದ್ದು ದೈವಶಕ್ತಿ ಹೊಂದಿದ ಪುಣ್ಯಸ್ಥಳ ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ನುಡಿದರು.

ಶ್ರೀ ಮಠದ ವತಿಯಿಂದ ಡಾ. ಹೆಗ್ಗಡೆಯವರನ್ನು ಗೌರವಿಸಲಾಯಿತು.

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶುಕ್ರವಾರದಿಂದ ಪ್ರಾರಂಭವಾದ ಶ್ರೀ ಗುರು ವೈಭವೋತ್ಸವದ ನಿಮಿತ್ತ ನಡೆದ ರಾಯರ ಪಟ್ಟಾಭಿಷೇಕ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇವರ ಕಣ್ತಪ್ಪಿಸಿ ಏನೂ ಮಾಡಲು ಸಾಧ್ಯವಿಲ್ಲ ನಮ್ಮ ಕಣ್ಣಿಗೆ ಕಾಣದ ಆಗಾಧ ಯಾವಾಗಲೂ ಜಾಗೃತವಾಗಿರುತ್ತದೆ. ಅದನ್ನೇ ನಾವೆಲ್ಲ ದೈವವೆಂದು ಪೂಜಿಸುತ್ತೇವೆ. 1969ರಲ್ಲಿ ನಾನು ಪ್ರಥಮ ಬಾರಿಗೆ ಮಂತ್ರಾಲಯದ ಕ್ಷೇತ್ರಕ್ಕೆ ಭೇಟಿ ನೀಡಿದ್ದೆ. ಆ ಮೇಲೆಯೂ ಸಾಕಷ್ಟು ಬಾರಿ ಬಂದು ಹೋಗಿದ್ದೇನೆ. ಆದರೆ, ಆಗ ಕಂಡ ಮಂತ್ರಾಲಯಕ್ಕೂ ಈಗ ನೋಡುತ್ತಿರುವ ಮಂತ್ರಾಲಯಕ್ಕೂ ಅಗಾಧ ಬದಲಾವಣೆ ಕಂಡು ಬರುತ್ತಿದೆ. ಭೌತಿಕ ಪ್ರಗತಿ ದೊಡ್ಡ ಮಟ್ಟದಲ್ಲಿ ಆಗಿದೆ. ಮಠದ ಪೀಠಾಧಿಪತಿಗಳ ಆಜ್ಞೆ ಅನುಸಾರ ಇಲ್ಲಿಗೆ ಬರುವ ಭಾಗ್ಯ ಸಿಕ್ಕಿದೆ ಎಂದರು.

ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಅನುಗ್ರಹ ಸಂದೇಶ ನೀಡಿ, ಗುರುವೈಭೋತ್ಸವ, ಜಾತ್ಯತೀತ, ಧರ್ಮಾತೀತ ಆಚರಣೆಯಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು 2009ರಲ್ಲಿ ಮಂತ್ರಾಲಯ ಕ್ಷೇತ್ರದಲ್ಲಿ ಉಂಟಾದ ಪ್ರವಾಹ ವೇಳೆ ಸಂಕಷ್ಟಕ್ಕೀಡಾದ ಜನರಿಗೆ ಅಗತ್ಯ ನೆರವು ನೀಡಿದ್ದಾರೆ. ಸ್ವಯಂ ಸೇವಕರನ್ನು ನೆರವಿಗೆ ಕಳುಹಿಸಿದ ಅವರಿಗೂ ಮಂತ್ರಾಲಯಕ್ಕೂ ವಿಶೇಷ ನಂಟಿದೆ. ಆದರ್ಶ ವ್ಯಕ್ತಿ ಹೇಗಿರಲಿ ಎನ್ನಲು ಹೆಗ್ಗಡೆಯವರಿಗಿಂತ ನಿದರ್ಶನ ಸಿಗುವುದಿಲ್ಲ. ಮಂತ್ರಾಲಯದ ಸೇರಿದಂತೆ ಶ್ರೀಮಠದ ಶಾಖಾ ಮಠ ಗುರುವೈಭೋತ್ಸವ ಕಾರ್ಯ ನಡೆಯಲಿವೆ. ಶ್ರೀಮಠದಲ್ಲಿ ಈ ಆರು ದಿನ ನಡೆಯುವ ಗುರುವೈಭೋತ್ಸವ ಕಾರ್ಯಕ್ರಮದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ ಎಂದರು.

ರಜತದ ಸಿಂಹ, ಅಶ್ವ,ಗಜ, ವಾಹನಗಳನ್ನು ಸಮರ್ಪಿಸಲಾಯಿತು. ಶ್ರೀಮಠದಲ್ಲೇ ಮುದ್ರಿಸಿದ ತಮಿಳು, ಕನ್ನಡ ಹಾಗೂ ತೆಲುಗು ಭಾಷೆಗಳ ಪಂಚಾಂಗವನ್ನು ಬಿಡುಗಡೆ ಗೊಳಿಸಲಾಯಿತು. ವಿದ್ವಾನ್ ರಾಜಾ ಎನ್. ಗಿರಿಯಾಚಾರ್ಯ, ವಿದ್ಯಾಪೀಠದ ಪ್ರಾಚಾರ್ಯ ಎನ್.ವಾದಿರಾಜಾಚಾರ್ಯ, ಪಂಚಮುಖಿ, ಶ್ರೀಮಠದ ವ್ಯವಸ್ಥಾಪಕರಾದ ವೆಂಕಟೇಶ ಜೋಶಿ ಇನ್ನಿತರರಿದ್ದರು.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 200 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 44 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 50 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 109 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 46 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 88 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ