ಮದುವೆಯ ವಯಸ್ಸು ಯುವಕ-ಯುವತಿಗೆ ಒಂದೇ ವಯಸ್ಸು ನಿಗಧಿ ಪಡಿಸಲು ಅರ್ಜಿ : ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್

ನವದೆಹಲಿ: ಯುವಕ, ಯುವತಿಯರ ಮದುವೆಗೆ ಏಕರೂಪದ ವಯಸ್ಸು ನಿಗದಿಪಡಿಸಬೇಕೆಂದು ಕೋರಿ ವಿವಿಧ ಹೈಕೋರ್ಟ್ ಗಳಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟಿಗೆ ವರ್ಗಾಯಿಸಬೇಕೆಂದು ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿಂದ ನೋಟಿಸ್ ಜಾರಿ ಮಾಡಲಾಗಿದೆ.

ಸುಪ್ರೀಂಕೋರ್ಟ್ ಸಿಜೆ ಎಸ್.ಎ. ಬೋಬಡೆ, ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ, ಬಾಲಸುಬ್ರಮಣಿಯನ್ ಅವರುಗಳಿದ್ದ ಪೀಠದಲ್ಲಿ ವಕೀಲ ಅಶ್ವಿನಿಕುಮಾರ್ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದು, ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.

ರಾಜಸ್ಥಾನ ಮತ್ತು ದೆಹಲಿ ಹೈಕೋರ್ಟ್ ಗಳಲ್ಲಿ ಯುವಕ, ಯುವತಿಯರ ಮದುವೆಗೆ ಏಕರೂಪದ ವಯಸ್ಸು ನಿಗದಿಪಡಿಸಲಾಗಿರುವ ವಿಚಾರಣೆ ಬಾಕಿ ಇದೆ.

ಈ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಗೆ ವರ್ಗಾವಣೆ ಮಾಡಬೇಕು. ಈ ಮೂಲಕ ಭಿನ್ನ ಅಭಿಪ್ರಾಯ ಬರುವುದು ತಪ್ಪಿಸಬಹುದಾಗಿದ್ದು, ವಯಸ್ಸನ್ನು ಆಧರಿಸಿ ಸಮಾನತೆ ಮತ್ತು ನ್ಯಾಯ ಒದಗಿಸಬಹುದಾಗಿದೆ ಎಂದು ಹೇಳಲಾಗಿದೆ.

ಈಗಿನ ನಿಯಮದ ಪ್ರಕಾರ, ಮದುವೆಯಾಗಲು ಯುವತಿಯರಿಗೆ 18 ವರ್ಷ, ಯುವಕರಿಗೆ 21 ವರ್ಷ ವಯಸ್ಸು ನಿಗದಿ ಮಾಡಲಾಗಿದ್ದು, ಇದಕ್ಕೆ ಯಾವುದೇ ವೈಜ್ಞಾನಿಕ ಹಿನ್ನೆಲೆ ಇಲ್ಲ. ವಿಶ್ವದ 125 ದೇಶಗಳಲ್ಲಿ ಮದುವೆಗೆ ಏಕರೂಪದ ವಯಸ್ಸಿನ ಮಿತಿ ನಿಗದಿಪಡಿಸಲಾಗಿದೆ. ಭಾರತದಲ್ಲಿಯೂ ಯುವಕ-ಯುವತಿಯರಿಗೆ ಕನಿಷ್ಠ 21 ವರ್ಷ ವಯಸ್ಸಿನ ಮಿತಿ ನಿಗದಿಪಡಿಸಬೇಕೆಂದು ಹೇಳಲಾಗಿದ್ದು, ಈ ಕುರಿತಾದ ಪ್ರತಿಕ್ರಿಯೆಯನ್ನು ನಾಲ್ಕು ವಾರಗಳಲ್ಲಿ ತಿಳಿಸುವಂತೆ ಸುಪ್ರೀಂಕೋರ್ಟ್ ಪೀಠದಿಂದ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.

Spread the love
  • Related Posts

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಧರ್ಮಸ್ಥಳ, ಆ. 4: ಶ್ರೀ ಕ್ಷೇತ್ರ ಧರ್ಮಸ್ಥಳದ ಅಧಿದೈವ ಶ್ರೀ ಮಂಜುನಾಥ ಸ್ವಾಮಿಯ ಮೇಲಿನ ಅಚಲ ಭಕ್ತಿ ಮತ್ತು ಕೃತಜ್ಞತೆಯ ಸಂಕೇತವಾಗಿ ಉಡುಪಿ ಕರಾವಳಿಯ ಆಳಸಮುದ್ರ ಟ್ರಾಲ್ ಬೋಟ್ ಮೀನುಗಾರರು 770 ಗ್ರಾಂ ತೂಕದ ಬೆಳ್ಳಿಯ ‘ರಾಣಿ ಮೀನು’ ಹಾರವನ್ನು ಸಮರ್ಪಿಸಿದ್ದಾರೆ.…

    Spread the love

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ…

    Spread the love

    You Missed

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 2 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    • By admin
    • August 3, 2026
    • 7 views
    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 8 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 6 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 10 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 16 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ