ರಾಷ್ಟ್ರಧ್ವಜದ ‘ಮಾಸ್ಕ್’ ಮಾರಾಟ ಮಾಡುವ ಅಮೇಝಾನ, ಫ್ಲಿಪ್‌ಕಾರ್ಟ್ ಇತ್ಯಾದಿ ಕಂಪನಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ ! – ಸುರಾಜ್ಯ ಅಭಿಯಾನ

ಮಂಗಳೂರು: ‘ಭಾರತೀಯ ರಾಷ್ಟ್ರಧ್ವಜ’ವು ಕೋಟಿಗಟ್ಟಲೆ ಭಾರತೀಯರಿಗೆ ಸ್ವಾಭಿಮಾನದ ವಿಷಯವಾಗಿದೆ; ಕೆಲವು ಅಪವಾದಗಳನ್ನು ಹೊರತುಪಡಿಸಿದರೆ ಅದನ್ನು ಇತರ ಯಾವುದಕ್ಕೂ ಉಪಯೋಗಿಸುವುದು ಕಾನೂನಿಗನುಸಾರ ದಾಖಲಾರ್ಹ ಹಾಗೂ ಜಾಮೀನುರಹಿತ ಅಪರಾಧವಾಗಿದೆ. ಹೀಗಿದ್ದರೂ, ಇಂತಹ ಸಂವೇದನಾಶೀಲ ವಿಷಯಗಳ ಬಗ್ಗೆ ಗಾಂಭೀರ್ಯತೆಯನ್ನಿಡದೇ ಅಮೇಝಾನ್, ಇಂಡಿಯಾಮಾರ್ಟ್, ಫೇಮಸ್‌ಶಾಪ್, ಮೀಂತ್ರಾ, ಸ್ನ್ಯಾಪಡೀಲ್, ಫ್ಲಿಪ್‌ಕಾರ್ಟ್‌ನಂತಹ ‘ಈ-ಕಾಮರ್ಸ್’ ಜಾಲತಾಣಗಳಲ್ಲಿ ಕೊರೋನಾ ಸೋಂಕನ್ನು ತಡೆಗಟ್ಟಲು ಆಗಸ್ಟ್ ೧೫ ರ ನಿಮಿತ್ತ ಭಾರತೀಯ ರಾಷ್ಟ್ರಧ್ವಜದ ಬಣ್ಣಗಳಿರುವ ‘ಮಾಸ್ಕ್’ ನಿರ್ಮಿಸಿ ಅದನ್ನು ದೊಡ್ಡ ಪ್ರಮಾಣದಲ್ಲಿ ಮಾರಾಟ ಮಾಡಲಾಗುತ್ತಿದೆ. ಅಂತಹವರ ಮೇಲೆ ರಾಷ್ಟ್ರಧ್ವಜದ ಅವಮಾನ ಮಾಡಿದ ಪ್ರಕರಣದಲ್ಲಿ ಅಪರಾಧವನ್ನು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು, ಅದೇರೀತಿ ಇಂತಹ ಮಾಸ್ಕ್‌ಗಳ ಮಾರಾಟ, ಉತ್ಪಾದನೆ ಹಾಗೂ ವಿತರಣೆಯಾಗಬಾರದು ಈ ದೃಷ್ಟಿಯಿಂದ ಸರಕಾರವು ಶೀಘ್ರದಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು, ಎಂದು ‘ಸುರಾಜ್ಯ ಅಭಿಯಾನ’ ಉಪಕ್ರಮದ ಮನವಿಯ ಮಾಧ್ಯಮದಿಂದ ಹಿಂದೂ ಜನಜಾಗೃತಿ ಸಮಿತಿಯು ಮಾನ್ಯ ಪ್ರಧಾನಿ ಹಾಗೂ ಕೇಂದ್ರೀಯ ಗೃಹ ಸಚಿವರಲ್ಲಿ ಆಗ್ರಹಿಸಿದೆ.

ರಾಷ್ಟ್ರಧ್ವಜ ಇದು ಶೃಂಗಾರದ ಮಾಧ್ಯಮವಲ್ಲ. ಈ ರೀತಿಯ ಮಾಸ್ಕ್ ಉಪಯೋಗಿಸಿದರೆ ಸೀನುವುದು, ಅದಕ್ಕೆ ಉಗುಳು ತಾಗುವುದು, ಅದು ಅಸ್ವಚ್ಛವಾಗುವುದು, ಅದೇರೀತಿ ಉಪಯೋಗಿಸಿದ ನಂತರ ಕಸದಲ್ಲಿ ಬಿಸಾಡುವುದು ಇತ್ಯಾದಿಗಳಿಂದಾಗಿ ರಾಷ್ಟ್ರಧ್ವಜದ ಅವಮಾನವಾಗುತ್ತದೆ ಹಾಗೂ ಹೀಗೆ ಮಾಡುವುದೆಂದರೆ ಇದು ‘ರಾಷ್ಟ್ರೀಯ ಚಿಹ್ನೆಯ ದುರುಪಯೋಗ ತಡೆ ಕಾನೂನು ೧೯೫೦’, ಕಲಮ್ ೨ ಹಾಗೂ ೫ ಕ್ಕನುಸಾರ; ಅದೇರೀತಿ ‘ರಾಷ್ಟ್ರದ ಘನತೆಯ ಅವಮಾನ ಪ್ರತಿಬಂಧಕ ಅಧಿನಿಯಮ ೧೯೭೧’ರ ಕಲಂ ೨ ಕ್ಕನುಸಾರ ಹಾಗೂ ‘ಬೋಧಚಿಹ್ನೆ ಹಾಗೂ ಹೆಸರು (ದುರುಪಯೋಗ ನಿರ್ಬಂಧ) ಅಧಿನಿಯಮ ೧೯೫೦’ ಈ ಮೂರೂ ಕಾನೂನುಗಳಿಗನುಸಾರ ದಂಡನೀಯ ಅಪರಾಧವಾಗಿದೆ. ಆದ್ದರಿಂದ ಸರಕಾರ ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು, ಎಂದು ನಮ್ಮ ಬೇಡಿಕೆಯಾಗಿದೆ.

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು