ರಾಷ್ಟ್ರಧ್ವಜದ ‘ಮಾಸ್ಕ್’ ಮಾರಾಟ ಮಾಡುವ ಅಮೇಝಾನ, ಫ್ಲಿಪ್‌ಕಾರ್ಟ್ ಇತ್ಯಾದಿ ಕಂಪನಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ ! – ಸುರಾಜ್ಯ ಅಭಿಯಾನ

ಮಂಗಳೂರು: ‘ಭಾರತೀಯ ರಾಷ್ಟ್ರಧ್ವಜ’ವು ಕೋಟಿಗಟ್ಟಲೆ ಭಾರತೀಯರಿಗೆ ಸ್ವಾಭಿಮಾನದ ವಿಷಯವಾಗಿದೆ; ಕೆಲವು ಅಪವಾದಗಳನ್ನು ಹೊರತುಪಡಿಸಿದರೆ ಅದನ್ನು ಇತರ ಯಾವುದಕ್ಕೂ ಉಪಯೋಗಿಸುವುದು ಕಾನೂನಿಗನುಸಾರ ದಾಖಲಾರ್ಹ ಹಾಗೂ ಜಾಮೀನುರಹಿತ ಅಪರಾಧವಾಗಿದೆ. ಹೀಗಿದ್ದರೂ, ಇಂತಹ ಸಂವೇದನಾಶೀಲ ವಿಷಯಗಳ ಬಗ್ಗೆ ಗಾಂಭೀರ್ಯತೆಯನ್ನಿಡದೇ ಅಮೇಝಾನ್, ಇಂಡಿಯಾಮಾರ್ಟ್, ಫೇಮಸ್‌ಶಾಪ್, ಮೀಂತ್ರಾ, ಸ್ನ್ಯಾಪಡೀಲ್, ಫ್ಲಿಪ್‌ಕಾರ್ಟ್‌ನಂತಹ ‘ಈ-ಕಾಮರ್ಸ್’ ಜಾಲತಾಣಗಳಲ್ಲಿ ಕೊರೋನಾ ಸೋಂಕನ್ನು ತಡೆಗಟ್ಟಲು ಆಗಸ್ಟ್ ೧೫ ರ ನಿಮಿತ್ತ ಭಾರತೀಯ ರಾಷ್ಟ್ರಧ್ವಜದ ಬಣ್ಣಗಳಿರುವ ‘ಮಾಸ್ಕ್’ ನಿರ್ಮಿಸಿ ಅದನ್ನು ದೊಡ್ಡ ಪ್ರಮಾಣದಲ್ಲಿ ಮಾರಾಟ ಮಾಡಲಾಗುತ್ತಿದೆ. ಅಂತಹವರ ಮೇಲೆ ರಾಷ್ಟ್ರಧ್ವಜದ ಅವಮಾನ ಮಾಡಿದ ಪ್ರಕರಣದಲ್ಲಿ ಅಪರಾಧವನ್ನು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು, ಅದೇರೀತಿ ಇಂತಹ ಮಾಸ್ಕ್‌ಗಳ ಮಾರಾಟ, ಉತ್ಪಾದನೆ ಹಾಗೂ ವಿತರಣೆಯಾಗಬಾರದು ಈ ದೃಷ್ಟಿಯಿಂದ ಸರಕಾರವು ಶೀಘ್ರದಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು, ಎಂದು ‘ಸುರಾಜ್ಯ ಅಭಿಯಾನ’ ಉಪಕ್ರಮದ ಮನವಿಯ ಮಾಧ್ಯಮದಿಂದ ಹಿಂದೂ ಜನಜಾಗೃತಿ ಸಮಿತಿಯು ಮಾನ್ಯ ಪ್ರಧಾನಿ ಹಾಗೂ ಕೇಂದ್ರೀಯ ಗೃಹ ಸಚಿವರಲ್ಲಿ ಆಗ್ರಹಿಸಿದೆ.

ರಾಷ್ಟ್ರಧ್ವಜ ಇದು ಶೃಂಗಾರದ ಮಾಧ್ಯಮವಲ್ಲ. ಈ ರೀತಿಯ ಮಾಸ್ಕ್ ಉಪಯೋಗಿಸಿದರೆ ಸೀನುವುದು, ಅದಕ್ಕೆ ಉಗುಳು ತಾಗುವುದು, ಅದು ಅಸ್ವಚ್ಛವಾಗುವುದು, ಅದೇರೀತಿ ಉಪಯೋಗಿಸಿದ ನಂತರ ಕಸದಲ್ಲಿ ಬಿಸಾಡುವುದು ಇತ್ಯಾದಿಗಳಿಂದಾಗಿ ರಾಷ್ಟ್ರಧ್ವಜದ ಅವಮಾನವಾಗುತ್ತದೆ ಹಾಗೂ ಹೀಗೆ ಮಾಡುವುದೆಂದರೆ ಇದು ‘ರಾಷ್ಟ್ರೀಯ ಚಿಹ್ನೆಯ ದುರುಪಯೋಗ ತಡೆ ಕಾನೂನು ೧೯೫೦’, ಕಲಮ್ ೨ ಹಾಗೂ ೫ ಕ್ಕನುಸಾರ; ಅದೇರೀತಿ ‘ರಾಷ್ಟ್ರದ ಘನತೆಯ ಅವಮಾನ ಪ್ರತಿಬಂಧಕ ಅಧಿನಿಯಮ ೧೯೭೧’ರ ಕಲಂ ೨ ಕ್ಕನುಸಾರ ಹಾಗೂ ‘ಬೋಧಚಿಹ್ನೆ ಹಾಗೂ ಹೆಸರು (ದುರುಪಯೋಗ ನಿರ್ಬಂಧ) ಅಧಿನಿಯಮ ೧೯೫೦’ ಈ ಮೂರೂ ಕಾನೂನುಗಳಿಗನುಸಾರ ದಂಡನೀಯ ಅಪರಾಧವಾಗಿದೆ. ಆದ್ದರಿಂದ ಸರಕಾರ ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು, ಎಂದು ನಮ್ಮ ಬೇಡಿಕೆಯಾಗಿದೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 81 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 44 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 172 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 183 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 106 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ