ಪರಿಸರ ಸ್ನೇಹಿ ಮಾಸ್ಕ್ ತಯಾರಿಸಿ ಗಮನ ಸೆಳೆದ ಮಂಗಳೂರಿನ ಯುವಕ..! ಬಳಸಿ ಬಿಸಾಡಿದ್ರೂ ಗಿಡವಾಗುತ್ತೆ ಈ ಮಾಸ್ಕ್….!

ಕೊರೋನಾ ಎರಡನೇ ಅಲೆಯಲ್ಲಿ ಜನರು ಸೋಂಕಿನಿಂದ ನರಳುತ್ತಿದ್ದರೇ ಸಾವಿನ ಸಂಖ್ಯೆಯೂ ಹೆಚ್ಚಿದೆ. ಈ ಮಧ್ಯೆ ಮಾಸ್ಕ್ ಬದುಕಿನ ಅವಿಭಾಜ್ಯ ಅಂಗದಂತಾಗಿದೆ. ಆದರೆ ಕಳೆದ ಒಂದು ವರ್ಷಗಳಿಂದ ಬಳಕೆಯಾಗ್ತಿರೋ ತರೇಹವಾರಿ ಮಾಸ್ಕ್ ಗಳನ್ನು ವಿಲೇವಾರಿ ಮಾಡೋದೆ ದೊಡ್ಡ ತಲೆನೋವು. ಮಾಸ್ಕ್ ನಿಂದಲೇ ಹೊಸ ರೋಗ ಹುಟ್ಟದಿದ್ದರೇ ಸಾಕು ಅನ್ನೋ ಆತಂಕ ಕಾಡುತ್ತಿರುವಾಗಲೇ ಮಂಗಳೂರಿನ ಯುವಕನೊಬ್ಬ ಬಳಸಿ ಬಿಸಾಡಿದ್ರೆ ಗಿಡವಾಗೋ  ಪರಿಸರ ಸ್ನೇಹಿ ಮಾಸ್ಕ್ ತಯಾರಿಸಿ ಗಮನ ಸೆಳೆದಿದ್ದಾನೆ.

ಮಾಸ್ಕ್ ಅನಿವಾರ್ಯವಾಗುತ್ತಿದ್ದಂತೆ ವಿವಿಧ ಬಣ್ಣ,ಬಟ್ಟೆ,ಪ್ಲಾಸ್ಟಿಕ್ ಸೇರಿದಂತೆ ನೂರಾರು ವೈರೈಟಿ,ದರ ಹಾಗೂ ವಿಶೇಷತೆಗಳ ಮಾಸ್ಕ್ ಮಾರುಕಟ್ಟೆಗೆ ಕಾಲಿಟ್ಟಿದೆ. ಆದರೆ ಈ ಮಾಸ್ಕ್ ಗಳು ನಿರ್ವಹಣೆ ಹಾಗೂ ಮರುಬಳಕೆಯೇ ದೊಡ್ಡ ಸವಾಲು. ಈ ಮಾಸ್ಕ್ ಗಳೇ ಹೊಸ ತ್ಯಾಜ್ಯ ಸೃಷ್ಟಿಸುವ ಸ್ಥಿತಿ ಎದುರಾಗುತ್ತಿದೆ.

ಇಂತ ಹೊತ್ತಿನಲ್ಲೇ ಮಂಗಳೂರಿನ ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯ ಉತ್ಸಾಹಿ ಯುವಕ ನಿತಿನ್ ವಾಸ್ ಬಳಸಿ ಬಿಸಾಡಿದ ಬಳಿಕ ಹಸಿರು ಗಿಡವಾಗೋ ಪರಿಸರ ಸ್ನೇಹಿ ಮಾಸ್ಕ್ ತಯಾರಿಸಿ ಗಮನ ಸೆಳೆದಿದ್ದಾರೆ. ಸಸ್ಯದ ಬೀಜಗಳನ್ನು  ಬಳಸಿ ಹತ್ತಿಯಿಂದ ಈ ಮಾಸ್ಕ್ ತಯಾರಿಸಲಾಗಿದ್ದು, ಇದನ್ನು ಬಳಸಿ ಬಿಸಾಡಿದ್ರೆ ಗಿಡವಾಗಿ ಪರಿಸರದ ಮಾಲಿನ್ಯವನ್ನು ಕಡಿಮೆ ಮಾಡುತ್ತದೆ.  

ಹಣ್ಣು-ಹೂವಿನ ಗಿಡದ ಬೀಜಗಳನ್ನು ಹತ್ತಿಯೊಂದಿಗೆ ಬೆರೆಸಿ ನೀರಿನಲ್ಲಿ ನೆನೆಸಿ, ಬಳಿಕ ಅದನ್ನು ಪೇಪರ್ ರೂಪಕ್ಕೆ ತಂದು 12 ಗಂಟೆಗಳ ಕಾಲ ಬಿಸಿಲಿನಲ್ಲಿ ಒಣಗಿಸಿ ಕಾಟನ್ ಬಟ್ಟೆ, ಕಾಟನ್ ದಾರ ಬಳಸಿ ಮಾಸ್ಕ್ ಸಿದ್ಧಪಡಿಸಲಾಗುತ್ತದೆ. ಒಮ್ಮೆ ಬಳಸಿ ಬಿಸಾಡುವ  ಈ ಮಾಸ್ಕ್ ಒಂದಕ್ಕೆ 25 ರೂಪಾಯಿ ದರವಿದೆ.

ಇದು ಕಾಟನ್ ಬಟ್ಟೆ ಹಾಗೂ ಹತ್ತಿಯನ್ನು ಒಳಗೊಂಡಿರೋದರಿಂದ ಬಳಕೆಗೂ ಲೈಟ್ ಎನ್ನಿಸುವಂತಿದ್ದು,  ಬಳಸಿದ ಬಳಿಕ ಪರಿಸರಕ್ಕೂ ಪೂರಕವಾಗಿಯೇ ಡಿಸ್ಪೋಸ್ ಆಗಲಿದೆ. ಸದ್ಯ 3 ಸಾವಿರ ಮಾಸ್ಕ್ ಉತ್ಪಾದಿಸಿರುವ ನಿತಿನ್ ವಾಸ್ ಬೇಡಿಕೆಗೆ ಅನುಗುಣವಾಗಿ ಉತ್ಪಾದನೆ ಹೆಚ್ಚಿಸುವ ಚಿಂತನೆಯಲ್ಲಿದ್ದಾರೆ.

ನಿತಿನ್ ವಾಸ್ ಹಾಗೂ ಸ್ನೇಹಿತರು ಪೇಪರ್ ಸೀಡ್ ಎಂಬ ಪರಿಸರ ಸ್ನೇಹಿ ವಸ್ತುಗಳನ್ನು ತಯಾರಿಸುವ ಉದ್ಯಮವನ್ನು ಹೊಂದಿದ್ದಾರೆ. 2017 ರಲ್ಲಿ ಆರಂಭವಾದ  ಈ ಸಂಸ್ಥೆ ಹಳ್ಳಿಯ ಮಹಿಳೆಯರಿಗೆ ಉದ್ಯೋಗ ಒದಗಿಸಿ ಮುನ್ನಡೆಯುತ್ತಿತ್ತು. ಆದರೆ ಲಾಕ್ ಡೌನ್ ಈ ಸಂಸ್ಥೆಯ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿತ್ತು. ‘

ಹೀಗಾಗಿ ಮಾಸ್ಕ್ ನ್ನು ಪರಿಸರ ಸ್ನೇಹಿಯಾಗಿ ಸಿದ್ಧಪಡಿಸುವ ಪ್ರಯತ್ನಕ್ಕೆ ಕೈಹಾಕಿದ ಯುವಕರು ಈಗ ಯಶಸ್ವಿಯಾಗಿದ್ದಾರೆ. ಸಂಪೂರ್ಣ ಹ್ಯಾಂಡ್ ಮೇಡ್ ಆಗಿರುವ  ಈ ಮಾಸ್ಕ್ ಗೆ ಚೈನೈ,ಗುಜರಾತ,ಮುಂಬೈ ಸೇರಿದಂತೆ ಹಲವೆಡೆಯಿಂದ ಬೇಡಿಕೆ ಇದ್ದು, ಅಂದಾಜು 2 ಲಕ್ಷ ಮಾಸ್ಕ್ ಉತ್ಪಾದನೆಗೆ ನಿತಿನ್ ವಾಸ್ ಹಾಗೂ ತಂಡ ಸಜ್ಜಾಗಿದೆ.

ಕೊರೋನಾ ಜೊತೆಗೆ ಬದುಕಬೇಕಾದ ಸಂದಿಗ್ಧದಲ್ಲಿರೋ ಮನುಷ್ಯನಿಗೆ ಇನ್ನಷ್ಟು ವರ್ಷ ಮಾಸ್ಕ್ ಬಳಕೆ ಅನಿವಾರ್ಯ. ಹೀಗಾಗಿ ಮುಂದೊಂದು ದಿನ ಮಾಸ್ಕ್ ನಿರ್ಮೂಲನೆಯೇ ದೊಡ್ಡ ಸಮಸ್ಯೆಯಾಗಿ ಕಾಡೋ ಸಾಧ್ಯತೆ ಅಲ್ಲಗಳೆಯುವಂತಿಲ್ಲ. ಆ ಸಮಸ್ಯೆಯನ್ನು ತಡೆಯಲು ಈ ಪರಿಸರ ಸ್ನೇಹಿ ಮಾಸ್ಕ್  ಉತ್ತರವಾಗಿದ್ದು, ಜನರು ಇಂಥ ಮಾಸ್ಕ್ ಬಳಕೆಗೆ ಮುಂಧಾಗೋ ಮೂಲಕ ಪರಿಸರ ರಕ್ಷಣೆಯ ಪ್ರಯತ್ನಕ್ಕೆ ಜೀವತುಂಬಬೇಕಿದೆ.

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 10 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 19 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 37 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 210 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 61 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ