ಪರಿಸರ ಸ್ನೇಹಿ ಮಾಸ್ಕ್ ತಯಾರಿಸಿ ಗಮನ ಸೆಳೆದ ಮಂಗಳೂರಿನ ಯುವಕ..! ಬಳಸಿ ಬಿಸಾಡಿದ್ರೂ ಗಿಡವಾಗುತ್ತೆ ಈ ಮಾಸ್ಕ್….!

ಕೊರೋನಾ ಎರಡನೇ ಅಲೆಯಲ್ಲಿ ಜನರು ಸೋಂಕಿನಿಂದ ನರಳುತ್ತಿದ್ದರೇ ಸಾವಿನ ಸಂಖ್ಯೆಯೂ ಹೆಚ್ಚಿದೆ. ಈ ಮಧ್ಯೆ ಮಾಸ್ಕ್ ಬದುಕಿನ ಅವಿಭಾಜ್ಯ ಅಂಗದಂತಾಗಿದೆ. ಆದರೆ ಕಳೆದ ಒಂದು ವರ್ಷಗಳಿಂದ ಬಳಕೆಯಾಗ್ತಿರೋ ತರೇಹವಾರಿ ಮಾಸ್ಕ್ ಗಳನ್ನು ವಿಲೇವಾರಿ ಮಾಡೋದೆ ದೊಡ್ಡ ತಲೆನೋವು. ಮಾಸ್ಕ್ ನಿಂದಲೇ ಹೊಸ ರೋಗ ಹುಟ್ಟದಿದ್ದರೇ ಸಾಕು ಅನ್ನೋ ಆತಂಕ ಕಾಡುತ್ತಿರುವಾಗಲೇ ಮಂಗಳೂರಿನ ಯುವಕನೊಬ್ಬ ಬಳಸಿ ಬಿಸಾಡಿದ್ರೆ ಗಿಡವಾಗೋ  ಪರಿಸರ ಸ್ನೇಹಿ ಮಾಸ್ಕ್ ತಯಾರಿಸಿ ಗಮನ ಸೆಳೆದಿದ್ದಾನೆ.

ಮಾಸ್ಕ್ ಅನಿವಾರ್ಯವಾಗುತ್ತಿದ್ದಂತೆ ವಿವಿಧ ಬಣ್ಣ,ಬಟ್ಟೆ,ಪ್ಲಾಸ್ಟಿಕ್ ಸೇರಿದಂತೆ ನೂರಾರು ವೈರೈಟಿ,ದರ ಹಾಗೂ ವಿಶೇಷತೆಗಳ ಮಾಸ್ಕ್ ಮಾರುಕಟ್ಟೆಗೆ ಕಾಲಿಟ್ಟಿದೆ. ಆದರೆ ಈ ಮಾಸ್ಕ್ ಗಳು ನಿರ್ವಹಣೆ ಹಾಗೂ ಮರುಬಳಕೆಯೇ ದೊಡ್ಡ ಸವಾಲು. ಈ ಮಾಸ್ಕ್ ಗಳೇ ಹೊಸ ತ್ಯಾಜ್ಯ ಸೃಷ್ಟಿಸುವ ಸ್ಥಿತಿ ಎದುರಾಗುತ್ತಿದೆ.

ಇಂತ ಹೊತ್ತಿನಲ್ಲೇ ಮಂಗಳೂರಿನ ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯ ಉತ್ಸಾಹಿ ಯುವಕ ನಿತಿನ್ ವಾಸ್ ಬಳಸಿ ಬಿಸಾಡಿದ ಬಳಿಕ ಹಸಿರು ಗಿಡವಾಗೋ ಪರಿಸರ ಸ್ನೇಹಿ ಮಾಸ್ಕ್ ತಯಾರಿಸಿ ಗಮನ ಸೆಳೆದಿದ್ದಾರೆ. ಸಸ್ಯದ ಬೀಜಗಳನ್ನು  ಬಳಸಿ ಹತ್ತಿಯಿಂದ ಈ ಮಾಸ್ಕ್ ತಯಾರಿಸಲಾಗಿದ್ದು, ಇದನ್ನು ಬಳಸಿ ಬಿಸಾಡಿದ್ರೆ ಗಿಡವಾಗಿ ಪರಿಸರದ ಮಾಲಿನ್ಯವನ್ನು ಕಡಿಮೆ ಮಾಡುತ್ತದೆ.  

ಹಣ್ಣು-ಹೂವಿನ ಗಿಡದ ಬೀಜಗಳನ್ನು ಹತ್ತಿಯೊಂದಿಗೆ ಬೆರೆಸಿ ನೀರಿನಲ್ಲಿ ನೆನೆಸಿ, ಬಳಿಕ ಅದನ್ನು ಪೇಪರ್ ರೂಪಕ್ಕೆ ತಂದು 12 ಗಂಟೆಗಳ ಕಾಲ ಬಿಸಿಲಿನಲ್ಲಿ ಒಣಗಿಸಿ ಕಾಟನ್ ಬಟ್ಟೆ, ಕಾಟನ್ ದಾರ ಬಳಸಿ ಮಾಸ್ಕ್ ಸಿದ್ಧಪಡಿಸಲಾಗುತ್ತದೆ. ಒಮ್ಮೆ ಬಳಸಿ ಬಿಸಾಡುವ  ಈ ಮಾಸ್ಕ್ ಒಂದಕ್ಕೆ 25 ರೂಪಾಯಿ ದರವಿದೆ.

ಇದು ಕಾಟನ್ ಬಟ್ಟೆ ಹಾಗೂ ಹತ್ತಿಯನ್ನು ಒಳಗೊಂಡಿರೋದರಿಂದ ಬಳಕೆಗೂ ಲೈಟ್ ಎನ್ನಿಸುವಂತಿದ್ದು,  ಬಳಸಿದ ಬಳಿಕ ಪರಿಸರಕ್ಕೂ ಪೂರಕವಾಗಿಯೇ ಡಿಸ್ಪೋಸ್ ಆಗಲಿದೆ. ಸದ್ಯ 3 ಸಾವಿರ ಮಾಸ್ಕ್ ಉತ್ಪಾದಿಸಿರುವ ನಿತಿನ್ ವಾಸ್ ಬೇಡಿಕೆಗೆ ಅನುಗುಣವಾಗಿ ಉತ್ಪಾದನೆ ಹೆಚ್ಚಿಸುವ ಚಿಂತನೆಯಲ್ಲಿದ್ದಾರೆ.

ನಿತಿನ್ ವಾಸ್ ಹಾಗೂ ಸ್ನೇಹಿತರು ಪೇಪರ್ ಸೀಡ್ ಎಂಬ ಪರಿಸರ ಸ್ನೇಹಿ ವಸ್ತುಗಳನ್ನು ತಯಾರಿಸುವ ಉದ್ಯಮವನ್ನು ಹೊಂದಿದ್ದಾರೆ. 2017 ರಲ್ಲಿ ಆರಂಭವಾದ  ಈ ಸಂಸ್ಥೆ ಹಳ್ಳಿಯ ಮಹಿಳೆಯರಿಗೆ ಉದ್ಯೋಗ ಒದಗಿಸಿ ಮುನ್ನಡೆಯುತ್ತಿತ್ತು. ಆದರೆ ಲಾಕ್ ಡೌನ್ ಈ ಸಂಸ್ಥೆಯ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿತ್ತು. ‘

ಹೀಗಾಗಿ ಮಾಸ್ಕ್ ನ್ನು ಪರಿಸರ ಸ್ನೇಹಿಯಾಗಿ ಸಿದ್ಧಪಡಿಸುವ ಪ್ರಯತ್ನಕ್ಕೆ ಕೈಹಾಕಿದ ಯುವಕರು ಈಗ ಯಶಸ್ವಿಯಾಗಿದ್ದಾರೆ. ಸಂಪೂರ್ಣ ಹ್ಯಾಂಡ್ ಮೇಡ್ ಆಗಿರುವ  ಈ ಮಾಸ್ಕ್ ಗೆ ಚೈನೈ,ಗುಜರಾತ,ಮುಂಬೈ ಸೇರಿದಂತೆ ಹಲವೆಡೆಯಿಂದ ಬೇಡಿಕೆ ಇದ್ದು, ಅಂದಾಜು 2 ಲಕ್ಷ ಮಾಸ್ಕ್ ಉತ್ಪಾದನೆಗೆ ನಿತಿನ್ ವಾಸ್ ಹಾಗೂ ತಂಡ ಸಜ್ಜಾಗಿದೆ.

ಕೊರೋನಾ ಜೊತೆಗೆ ಬದುಕಬೇಕಾದ ಸಂದಿಗ್ಧದಲ್ಲಿರೋ ಮನುಷ್ಯನಿಗೆ ಇನ್ನಷ್ಟು ವರ್ಷ ಮಾಸ್ಕ್ ಬಳಕೆ ಅನಿವಾರ್ಯ. ಹೀಗಾಗಿ ಮುಂದೊಂದು ದಿನ ಮಾಸ್ಕ್ ನಿರ್ಮೂಲನೆಯೇ ದೊಡ್ಡ ಸಮಸ್ಯೆಯಾಗಿ ಕಾಡೋ ಸಾಧ್ಯತೆ ಅಲ್ಲಗಳೆಯುವಂತಿಲ್ಲ. ಆ ಸಮಸ್ಯೆಯನ್ನು ತಡೆಯಲು ಈ ಪರಿಸರ ಸ್ನೇಹಿ ಮಾಸ್ಕ್  ಉತ್ತರವಾಗಿದ್ದು, ಜನರು ಇಂಥ ಮಾಸ್ಕ್ ಬಳಕೆಗೆ ಮುಂಧಾಗೋ ಮೂಲಕ ಪರಿಸರ ರಕ್ಷಣೆಯ ಪ್ರಯತ್ನಕ್ಕೆ ಜೀವತುಂಬಬೇಕಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ