ಪರಿಸರ ಸ್ನೇಹಿ ಮಾಸ್ಕ್ ತಯಾರಿಸಿ ಗಮನ ಸೆಳೆದ ಮಂಗಳೂರಿನ ಯುವಕ..! ಬಳಸಿ ಬಿಸಾಡಿದ್ರೂ ಗಿಡವಾಗುತ್ತೆ ಈ ಮಾಸ್ಕ್….!

ಕೊರೋನಾ ಎರಡನೇ ಅಲೆಯಲ್ಲಿ ಜನರು ಸೋಂಕಿನಿಂದ ನರಳುತ್ತಿದ್ದರೇ ಸಾವಿನ ಸಂಖ್ಯೆಯೂ ಹೆಚ್ಚಿದೆ. ಈ ಮಧ್ಯೆ ಮಾಸ್ಕ್ ಬದುಕಿನ ಅವಿಭಾಜ್ಯ ಅಂಗದಂತಾಗಿದೆ. ಆದರೆ ಕಳೆದ ಒಂದು ವರ್ಷಗಳಿಂದ ಬಳಕೆಯಾಗ್ತಿರೋ ತರೇಹವಾರಿ ಮಾಸ್ಕ್ ಗಳನ್ನು ವಿಲೇವಾರಿ ಮಾಡೋದೆ ದೊಡ್ಡ ತಲೆನೋವು. ಮಾಸ್ಕ್ ನಿಂದಲೇ ಹೊಸ ರೋಗ ಹುಟ್ಟದಿದ್ದರೇ ಸಾಕು ಅನ್ನೋ ಆತಂಕ ಕಾಡುತ್ತಿರುವಾಗಲೇ ಮಂಗಳೂರಿನ ಯುವಕನೊಬ್ಬ ಬಳಸಿ ಬಿಸಾಡಿದ್ರೆ ಗಿಡವಾಗೋ  ಪರಿಸರ ಸ್ನೇಹಿ ಮಾಸ್ಕ್ ತಯಾರಿಸಿ ಗಮನ ಸೆಳೆದಿದ್ದಾನೆ.

ಮಾಸ್ಕ್ ಅನಿವಾರ್ಯವಾಗುತ್ತಿದ್ದಂತೆ ವಿವಿಧ ಬಣ್ಣ,ಬಟ್ಟೆ,ಪ್ಲಾಸ್ಟಿಕ್ ಸೇರಿದಂತೆ ನೂರಾರು ವೈರೈಟಿ,ದರ ಹಾಗೂ ವಿಶೇಷತೆಗಳ ಮಾಸ್ಕ್ ಮಾರುಕಟ್ಟೆಗೆ ಕಾಲಿಟ್ಟಿದೆ. ಆದರೆ ಈ ಮಾಸ್ಕ್ ಗಳು ನಿರ್ವಹಣೆ ಹಾಗೂ ಮರುಬಳಕೆಯೇ ದೊಡ್ಡ ಸವಾಲು. ಈ ಮಾಸ್ಕ್ ಗಳೇ ಹೊಸ ತ್ಯಾಜ್ಯ ಸೃಷ್ಟಿಸುವ ಸ್ಥಿತಿ ಎದುರಾಗುತ್ತಿದೆ.

ಇಂತ ಹೊತ್ತಿನಲ್ಲೇ ಮಂಗಳೂರಿನ ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯ ಉತ್ಸಾಹಿ ಯುವಕ ನಿತಿನ್ ವಾಸ್ ಬಳಸಿ ಬಿಸಾಡಿದ ಬಳಿಕ ಹಸಿರು ಗಿಡವಾಗೋ ಪರಿಸರ ಸ್ನೇಹಿ ಮಾಸ್ಕ್ ತಯಾರಿಸಿ ಗಮನ ಸೆಳೆದಿದ್ದಾರೆ. ಸಸ್ಯದ ಬೀಜಗಳನ್ನು  ಬಳಸಿ ಹತ್ತಿಯಿಂದ ಈ ಮಾಸ್ಕ್ ತಯಾರಿಸಲಾಗಿದ್ದು, ಇದನ್ನು ಬಳಸಿ ಬಿಸಾಡಿದ್ರೆ ಗಿಡವಾಗಿ ಪರಿಸರದ ಮಾಲಿನ್ಯವನ್ನು ಕಡಿಮೆ ಮಾಡುತ್ತದೆ.  

ಹಣ್ಣು-ಹೂವಿನ ಗಿಡದ ಬೀಜಗಳನ್ನು ಹತ್ತಿಯೊಂದಿಗೆ ಬೆರೆಸಿ ನೀರಿನಲ್ಲಿ ನೆನೆಸಿ, ಬಳಿಕ ಅದನ್ನು ಪೇಪರ್ ರೂಪಕ್ಕೆ ತಂದು 12 ಗಂಟೆಗಳ ಕಾಲ ಬಿಸಿಲಿನಲ್ಲಿ ಒಣಗಿಸಿ ಕಾಟನ್ ಬಟ್ಟೆ, ಕಾಟನ್ ದಾರ ಬಳಸಿ ಮಾಸ್ಕ್ ಸಿದ್ಧಪಡಿಸಲಾಗುತ್ತದೆ. ಒಮ್ಮೆ ಬಳಸಿ ಬಿಸಾಡುವ  ಈ ಮಾಸ್ಕ್ ಒಂದಕ್ಕೆ 25 ರೂಪಾಯಿ ದರವಿದೆ.

ಇದು ಕಾಟನ್ ಬಟ್ಟೆ ಹಾಗೂ ಹತ್ತಿಯನ್ನು ಒಳಗೊಂಡಿರೋದರಿಂದ ಬಳಕೆಗೂ ಲೈಟ್ ಎನ್ನಿಸುವಂತಿದ್ದು,  ಬಳಸಿದ ಬಳಿಕ ಪರಿಸರಕ್ಕೂ ಪೂರಕವಾಗಿಯೇ ಡಿಸ್ಪೋಸ್ ಆಗಲಿದೆ. ಸದ್ಯ 3 ಸಾವಿರ ಮಾಸ್ಕ್ ಉತ್ಪಾದಿಸಿರುವ ನಿತಿನ್ ವಾಸ್ ಬೇಡಿಕೆಗೆ ಅನುಗುಣವಾಗಿ ಉತ್ಪಾದನೆ ಹೆಚ್ಚಿಸುವ ಚಿಂತನೆಯಲ್ಲಿದ್ದಾರೆ.

ನಿತಿನ್ ವಾಸ್ ಹಾಗೂ ಸ್ನೇಹಿತರು ಪೇಪರ್ ಸೀಡ್ ಎಂಬ ಪರಿಸರ ಸ್ನೇಹಿ ವಸ್ತುಗಳನ್ನು ತಯಾರಿಸುವ ಉದ್ಯಮವನ್ನು ಹೊಂದಿದ್ದಾರೆ. 2017 ರಲ್ಲಿ ಆರಂಭವಾದ  ಈ ಸಂಸ್ಥೆ ಹಳ್ಳಿಯ ಮಹಿಳೆಯರಿಗೆ ಉದ್ಯೋಗ ಒದಗಿಸಿ ಮುನ್ನಡೆಯುತ್ತಿತ್ತು. ಆದರೆ ಲಾಕ್ ಡೌನ್ ಈ ಸಂಸ್ಥೆಯ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿತ್ತು. ‘

ಹೀಗಾಗಿ ಮಾಸ್ಕ್ ನ್ನು ಪರಿಸರ ಸ್ನೇಹಿಯಾಗಿ ಸಿದ್ಧಪಡಿಸುವ ಪ್ರಯತ್ನಕ್ಕೆ ಕೈಹಾಕಿದ ಯುವಕರು ಈಗ ಯಶಸ್ವಿಯಾಗಿದ್ದಾರೆ. ಸಂಪೂರ್ಣ ಹ್ಯಾಂಡ್ ಮೇಡ್ ಆಗಿರುವ  ಈ ಮಾಸ್ಕ್ ಗೆ ಚೈನೈ,ಗುಜರಾತ,ಮುಂಬೈ ಸೇರಿದಂತೆ ಹಲವೆಡೆಯಿಂದ ಬೇಡಿಕೆ ಇದ್ದು, ಅಂದಾಜು 2 ಲಕ್ಷ ಮಾಸ್ಕ್ ಉತ್ಪಾದನೆಗೆ ನಿತಿನ್ ವಾಸ್ ಹಾಗೂ ತಂಡ ಸಜ್ಜಾಗಿದೆ.

ಕೊರೋನಾ ಜೊತೆಗೆ ಬದುಕಬೇಕಾದ ಸಂದಿಗ್ಧದಲ್ಲಿರೋ ಮನುಷ್ಯನಿಗೆ ಇನ್ನಷ್ಟು ವರ್ಷ ಮಾಸ್ಕ್ ಬಳಕೆ ಅನಿವಾರ್ಯ. ಹೀಗಾಗಿ ಮುಂದೊಂದು ದಿನ ಮಾಸ್ಕ್ ನಿರ್ಮೂಲನೆಯೇ ದೊಡ್ಡ ಸಮಸ್ಯೆಯಾಗಿ ಕಾಡೋ ಸಾಧ್ಯತೆ ಅಲ್ಲಗಳೆಯುವಂತಿಲ್ಲ. ಆ ಸಮಸ್ಯೆಯನ್ನು ತಡೆಯಲು ಈ ಪರಿಸರ ಸ್ನೇಹಿ ಮಾಸ್ಕ್  ಉತ್ತರವಾಗಿದ್ದು, ಜನರು ಇಂಥ ಮಾಸ್ಕ್ ಬಳಕೆಗೆ ಮುಂಧಾಗೋ ಮೂಲಕ ಪರಿಸರ ರಕ್ಷಣೆಯ ಪ್ರಯತ್ನಕ್ಕೆ ಜೀವತುಂಬಬೇಕಿದೆ.

Spread the love
  • Related Posts

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…

    Spread the love

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    “ಜೀವ ಉಳಿಸಲು ನಿಮ್ಮ ನೆರವು ಅಗತ್ಯ“ ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟು ನಿವಾಸಿ ವಸಂತ ಗೌಡರವರು 21/07/2026ರಂದು ಬೆಳಿಗ್ಗೆ ಸುಮಾರು 7.30ರ ವೇಳೆಗೆ ಪಡಂಗಡಿ ಸಮೀಪ ಹಾಲು ಹಿಡಿದು ಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಜಾರಿ ಬಿದ್ದು ತಲೆಗೆ…

    Spread the love

    You Missed

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 4 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 11 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 9 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 10 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 10 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 13 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!