ಚಾರ್ಮಾಡಿ-ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಮೊಟಕುಗೊಂಡ ಕಾಮಗಾರಿ‌ ಮುನ್ನಡೆಸಲು ಒಪ್ಪಿಗೆ ಸೂಚಿಸಿದ MCK

ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆಯ ಬೆನ್ನಲ್ಲೇ ಶ್ರೀಘ್ರದಲ್ಲೇ ಗುಣಮಟ್ಟದ ರಸ್ತೆ ಕಾಮಗಾರಿ ಪುನರ್ ಪ್ರಾರಂಭ ಮಾಡಲು ಮುಗೆರೋಡಿ ಕನ್ ಸ್ಟ್ರಕ್ಷನ್ (MCK) ಒಪ್ಪಿಗೆ ಸೂಚಿಸಿದ್ದು ಇಂದು ನಡೆದ ಒಡಂಬಡಿಕೆ ಸಭೆಯಲ್ಲಿ ಪ್ರಮುಖ ನಿರ್ಧಾರಕ್ಕೆ ಬಂದಿದ್ದು ಇನ್ನೂ ಮುಂದಿನ ಎಲ್ಲಾ ಕೆಲಸ ಕಾರ್ಯಗಳನ್ನು ಮುಗೆರೋಡಿ ಕನ್ ಸ್ಟ್ರಕ್ಷನ್ ರವರು ಡಿಪಿ ಜೈನ್ ಪಡೆದಿರುವ ಈ ಟೆಂಡರನ್ನು ಪೂರ್ಣಗೊಳಿಸುವ ಒಪ್ಪಿಕೊಂಡಿದ್ದಾರೆ.

ಈಗಾಗಲೇ ರಸ್ತೆಯ ಅವೈಜ್ಞಾನಿಕ ಕಾಮಗಾರಿಯಿಂದ ಕೆಲವೆಡೆ ವಾಹನ ಸಂಚಾರಕ್ಕೆ ತೊಡಕಾಗಿರುವ ರಸ್ತೆಗಳ ದುರಸ್ತಿಯನ್ನು ಇದೇ ಸೋಮವಾರದಿಂದ ಮಾಡುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.

ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಈಗಾಗಲೇ ಪ್ರಾರಂಭವಾಗಿದ್ದು ಡಿ.ಪಿ.ಜೈನ್ ಕನ್‌ಸ್ಟ್ರಕ್ಸನ್ ಗುತ್ತಿಗೆಯನ್ನು ಪಡೆದುಕೊಂಡು ಕಾಮಗಾರಿಯನ್ನು ಪ್ರಾರಂಭಿಸಿದರೂ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆಯಲ್ಲಿ ವಾಹನಗಳು ಸಂಚಾರ ಮಾಡದಂತಹ ಸ್ಥಿತಿದ ನಿರ್ಮಾಣವಾಗಿದೆ. ಇದರಿಂದ ಸಾರ್ವಜನಿಕರು ಅಲ್ಲಲ್ಲಿ ಸಾಕಷ್ಟು ಬಾರಿ ಪ್ರತಿಭಟನೆಗಳನ್ನು ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ ಘಟನೆಯೂ ನಡೆದಿತ್ತು.ಇತ್ತೀಚಿನ ಬೆಳವಣಿಗೆಯಲ್ಲಿ ಡಿ.ಪಿ. ಜೈನ್ ಕಂಪನಿಯ ಕಾರ್ಮಿಕರು ಸಂಬಳ ನೀಡಿಲ್ಲ ಎಂಬ ಕಾರಣಕ್ಕೆ ಪ್ರತಿಭಟನೆಯನ್ನು ಮಾಡುತ್ತಿರುವ ಕಾರಣ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಈ ರಸ್ತೆಯ ಮುಂದಿನ ಕಾಮಗಾರಿಯ ಜವಾಬ್ದಾರಿಯನ್ನು ಮೊಗ್ರೋಡಿ ಕನ್ ಸ್ಟ್ರಕ್ಷನ್(MCK)ಗೆ ನೀಡುವ ಕುರಿತು ಬೆಂಗಳೂರಿನಲ್ಲಿ ಡಿ.ಪಿ.ಜೈನ್ ಕಂಪೆನಿಯ ಮಾಲೀಕರು, ಮೊಗ್ರೋಡಿ ಕನ್ ಸ್ಟ್ರಕ್ಷನ್ ಮಾಲೀಕರು, ಬೆಳ್ತಂಗಡಿ ಶಾಸಕರು, ಸಚಿವರ ನೇತೃತ್ವದಲ್ಲಿ ಮಾತುಕತೆ ನಡೆಸಲಾಗಿದೆ.ಕಳೆದ ಕೆಲವು ಸಮಯಗಳಿಂದ ಈ ರಸ್ತೆಯ ಕಾಮಗಾರಿಯ ಗುತ್ತಿಗೆ ಪಡೆದಿದ್ದ ಡಿ.ಪಿ. ಜೈನ್ ಅವರು ಅವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ನಿರ್ವಹಿಸಿದ ಪರಿಣಾಮ ಮಳೆ ಪ್ರಾರಂಭದ ನಂತರ ಈ ರಸ್ತೆ ಹೊಂಡ ಗುಂಡಿಗಳಿಂದ ವಾಹನ ಸಂಚಾರ ಮಾಡದಂತಹ ಸ್ಥಿತಿ ನಿರ್ಮಾಣವಾಗಿದೆ. ಅದಲ್ಲದೇ ಕಂಪನಿ ಸರಿಯಾಗಿ ಸಂಬಳ ನೀಡುತ್ತಿಲ್ಲ ಎಂಬ ಕಾರಣವೊಡ್ಡಿ ಕಂಪನಿ ವಿರುದ್ಧ ಕಾರ್ಮಿಕರು ಪ್ರತಿಭಟನೆ ನಡೆಸಿ ಕೆಲಸ ಸ್ಥಗಿತಗೊಳಿಸಿದ್ದರು. ಇದರಿಂದ ಕಾಮಗಾರಿ ನಿರ್ವಹಿಸಲು ಕಾರ್ಮಿಕರ ಕೊರತೆಯಿಂದ ಕಳೆದ ಕೆಲವು ದಿನಗಳಿಂದ ಕೆಲಸ ಸ್ಥಗಿತಗೊಂಡಿತ್ತು. ಇದೀಗ ಮುಗೆರೋಡಿ ಕನ್ ಸ್ಟ್ರಕ್ಷನ್ ಕಾಮಗಾರಿ ಪ್ರಾರಂಭಗೊಳಿಸಲು ಮುಂದೆ ಬಂದಿರುವುದು ನಿತ್ಯ ಪ್ರಯಾಣಿಕರಿಗೆ ಶುಭಸುದ್ದಿಯಾಗಿದೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಸಂಜೆ ಆರ್ಭಟಿಸಿದ ವರುಣನ ಅಬ್ಬರಕ್ಕೆ ಭೀಕರ ದುರಂತವೊಂದು ಸಂಭವಿಸಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಮೂವರು ಮಕ್ಕಳು ಸೇರಿದಂತೆ ಒಟ್ಟು 8 ಜನರು ಮೃತಪಟ್ಟಿದ್ದಾರೆ. ಬುಧವಾರ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 42 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 88 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 44 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 80 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ