ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.

ಜುಲೈ 29ರಂದು ರಾತ್ರಿ ಸುಮಾರು 8 ಗಂಟೆಗೆ ಪೊಲೀಸ್ ಉಪನಿರೀಕ್ಷಕ ಆನಂದ್ ಎಂ ಹಾಗೂ ಸಿಬ್ಬಂದಿ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಖಾಸಗಿ ಕಟ್ಟಡದ ಮುಂಭಾಗದಲ್ಲಿ ಆಟೋ ರಿಕ್ಷಾ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯೊಬ್ಬ ಪೊಲೀಸ್ ವಾಹನವನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ತಕ್ಷಣ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆತ ಕುವೆಟ್ಟು ಗ್ರಾಮದ ಸುಣ್ಣತ್ ಕೆರೆ ನಿವಾಸಿ ಇಸ್ಮಾಯಿಲ್ ಅವರ ಪುತ್ರ ತ್ವಲಹ್ @ ಅನ್ವರ್ @ ಅನ್ಸಾರ್ (21) ಎಂದು ತಿಳಿದುಬಂದಿದೆ.ವಿಚಾರಣೆಯಲ್ಲಿ, ಕುವೆಟ್ಟು ಗ್ರಾಮದ ಆಲಾದಿಕೊಟ್ಟಿಗೆ ನಿವಾಸಿ ಹಮ್ಜತ್ ಕರಾರ್ (31) ಅವರಿಗೆ ₹20,000 ಮುಂಗಡ ಹಣ ನೀಡಿ ಗಾಂಜಾ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಉದ್ದೇಶಿಸಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ. ಹಮ್ಜತ್ ಕರಾರ್ KA-21-MA-4990 ಕಾರಿನಲ್ಲಿ ಬಂದು 500 ಗ್ರಾಂ ಗಾಂಜಾವನ್ನು ನೀಡಿದ್ದು, ಪೊಲೀಸರು ಬರುತ್ತಿರುವುದನ್ನು ಕಂಡು ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾನೆ.

ಪೊಲೀಸರು ಕಾರನ್ನು ಪರಿಶೀಲಿಸಿದಾಗ, ಅದರೊಳಗೆ ಸುಮಾರು ₹7.60 ಲಕ್ಷ ಮೌಲ್ಯದ 76 ಗ್ರಾಂ ಎಂಡಿಎಂಎ (MDMA) ಪತ್ತೆಯಾಗಿದೆ. ಬಂಧಿತ ಆರೋಪಿಯ ಬಳಿಯಿಂದ 20 ಗ್ರಾಂ ಗಾಂಜಾ, ಮೊಬೈಲ್ ಫೋನ್ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಒಟ್ಟಾರೆ 20 ಗ್ರಾಂ ಗಾಂಜಾ, 76 ಗ್ರಾಂ ಎಂಡಿಎಂಎ, ಒಂದು ಕಾರು, ಒಂದು ಆಟೋ ರಿಕ್ಷಾ, ಮೊಬೈಲ್ ಫೋನ್ ಸೇರಿದಂತೆ ₹15,41,698 ಮೌಲ್ಯದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(c), 20(b)(ii)(A) ಹಾಗೂ 27A ಅಡಿಯಲ್ಲಿ ಹಮ್ಜತ್ ಕರಾರ್ ಹಾಗೂ ತ್ವಲಹ್ @ ಅನ್ವರ್ @ ಅನ್ಸಾರ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ಬಂಧಿತ ಆರೋಪಿ ತ್ವಲಹ್‌ನನ್ನು ಜುಲೈ 30ರಂದು ಮಂಗಳೂರಿನ ನ್ಯಾಯಾಲಯದ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು:

ಬಂಧಿತ ಆರೋಪಿ ತ್ವಲಹ್ @ ಅನ್ವರ್ @ ಅನ್ಸಾರ್ ಜುಲೈ 30ರಂದು ಉದ್ಯೋಗ ನಿಮಿತ್ತ ದುಬೈಗೆ ತೆರಳಲು ಸಿದ್ಧತೆ ನಡೆಸಿದ್ದ. ಆದರೆ ಮಾದಕವಸ್ತು ಪ್ರಕರಣದಲ್ಲಿ ಬಂಧನಕ್ಕೊಳಗಾಗಿ, ವಿದೇಶ ಪ್ರಯಾಣದ ಬದಲು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾನೆ.

ಈ ಕಾರ್ಯಾಚರಣೆ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಹಾಗೂ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ಮಾರ್ಗದರ್ಶನದಲ್ಲಿ, ಸಬ್ ಇನ್ಸ್‌ಪೆಕ್ಟರ್ ಆನಂದ್ ಎಂ. ಮತ್ತು ಸಿಕಂದರ್ ಪಾಷಾ ನೇತೃತ್ವದಲ್ಲಿ ಸಿಬ್ಬಂದಿ ಸತೀಶ್ ನಾಯ್ಕ್,ಪ್ರಕಾಶ್ ಪೂಜಾರಿ,ಶ್ರೀನಿವಾಸ್ ,ಹನುಮಂತ, ನಂದ, ಜಗದೀಶ್ ಅತ್ತಾಜೆ, ಪ್ರಮೋದ್,ದುಂಡಪ್ಪ ಪೂಜಾರಿ,ಶ್ರೀನಿವಾಸ್, ಚಾಲಕ ಸತೀಶ್ ಹಾಗೂ ಸೋಕೋ ತಂಡದ ಕಾವ್ಯಶ್ರೀ, ಅರ್ಪಿತಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Spread the love
  • Related Posts

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    “ಜೀವ ಉಳಿಸಲು ನಿಮ್ಮ ನೆರವು ಅಗತ್ಯ“ ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟು ನಿವಾಸಿ ವಸಂತ ಗೌಡರವರು 21/07/2026ರಂದು ಬೆಳಿಗ್ಗೆ ಸುಮಾರು 7.30ರ ವೇಳೆಗೆ ಪಡಂಗಡಿ ಸಮೀಪ ಹಾಲು ಹಿಡಿದು ಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಜಾರಿ ಬಿದ್ದು ತಲೆಗೆ…

    Spread the love

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಮುಖ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರಿಗೆ ಇಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಮನವಿ…

    Spread the love

    You Missed

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 4 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 9 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 8 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 9 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 9 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 12 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!