ಪ್ರಸಿದ್ಧ MDH ಮಸಾಲ ಪುಡಿಗಳ ಉತ್ಪಾದನಾ ಸಂಸ್ಥೆಮಾಲೀಕ ಧರ್ಮಪಾಲ ಗುಲಾಟಿ ವಿಧಿವಶ

ನವದೆಹಲಿ: ಮಸಾಲಾ ಪುಡಿಗಳ ಉತ್ಪಾದನಾ ಸಂಸ್ಥೆ ಎಂಡಿಎಚ್​ನ ಮಾಲೀಕ ಧರ್ಮಪಾಲ ಗುಲಾಟಿ ಇಂದು ಮುಂಜಾನೆ 5.30ರ ವೇಳೆಗೆ ನಿಧನರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು. ಕಳೆದ ಮೂರುವಾರಗಳಿಂದ ಅವರು ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾಗಿತ್ತು ಎಂದು ಮೂಲಗಳು ತಿಳಿಸಿವೆ.

ಪಾಕಿಸ್ತಾನದ ಸಿಯಾಲ್ ಕೋಟ್​ನಲ್ಲಿ 1923ರಲ್ಲಿ ಜನಿಸಿದ ಧರ್ಮಪಾಲ ಗುಲಾಟಿ ಅವರು ಆಪ್ತವಲಯದಲ್ಲಿ ದಾಲಾಜಿ, ಮಹಾಶಯಾಜಿ ಎಂದೇ ಕರೆಯಿಸಿಕೊಳ್ಳುತ್ತಿದ್ದವರು. ಬಾಲ್ಯದಲ್ಲೇ ಶಾಲೆ ಬಿಟ್ಟ ಅವರು ತಂದೆ ಆರಂಭಿಸಿದ ಮಸಾಲಾ ವ್ಯಾಪಾರಕ್ಕೆ ಜತೆಗೂಡಿದ್ದರು. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಸಂದರ್ಭದಲ್ಲಿ ಅವರು ಭಾರತಕ್ಕೆ ಆಗಮಿಸಿ ಅಮೃತಸರದಲ್ಲಿ ನಿರಾಶ್ರಿತರ ಶಿಬಿರದಲ್ಲಿ ಉಳಿದುಕೊಂಡಿದ್ದರು.

ನಂತರ ದೆಹಲಿಗೆ ಆಗಮಿಸಿ ಕರೋಲ್ ಬಾಗ್​ನಲ್ಲಿ ಅಂಗಡಿಯೊಂದನ್ನು ತೆರೆದರು. ಅಧಿಕೃತವಾಗಿ ಕಂಪನಿಯನ್ನು ಆರಂಭಿಸಿದ್ದು 1959ರಲ್ಲಿ. ಮಸಾಲಾ ವ್ಯಾಪಾರವನ್ನು ಉದ್ಯಮ ಸ್ವರೂಪಕ್ಕೆ ತಂದ ಅವರು, ಎಂಡಿಎಚ್ ಮಸಾಲಾವನ್ನು ಜಗತ್ತಿಗೇ ಪರಿಚಯಿಸಿದರು. ಕಳೆದ ವರ್ಷ ಅವರು ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಎಂಡಿಎಚ್​ ಮಸಾಲಾ ಕಂಪನಿ ಹೇಳುವ ಪ್ರಕಾರ, ಗುಲಾಟಿ ತಮ್ಮ ವೇತನದ ಶೇಕಡ 90 ಪಾಲನ್ನು ದೇಣಿಗೆ ನೀಡಿದ್ದಾರೆ. 

ಗುಲಾಟಿ ಅವರನ್ನು “ಕಿಂಗ್ ಆಫ್ ಸ್ಪೈಸ್” ಎಂದೇ ಕರೆಯಲಾಗುತ್ತಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ದೆಹಲಿಯ ಮಾತಾ ಚನ್ನನ್ ದೇವಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಹಾಶಯ್ ಎಂಬ ಹೆಸರಿನಿಂದ ಜನಪ್ರಿಯರಾಗಿರುವ ಎಂಡಿಎಚ್ ಮಾಲೀಕ ಧರ್ಮಪಾಲ್ ಅವರು ಎಂಡಿಎಚ್ ಮಸಾಲ ಕಂಪನಿ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುವ ಅಜ್ಜ ಎಂದೇ ಗುರುತಿಸಲ್ಪಡುತ್ತಿದ್ದರು.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 100 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 61 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 189 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 195 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 98 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 116 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ