ರಾಜ್ಯರಾಜಕೀಯದಲ್ಲಿ ಮತ್ತೆ ಬುಗಿಲೆದ್ದ ಖಾತೆ ಖ್ಯಾತೆ! ಖಾತೆ ಹಂಚಿಕೆಗೆ ಕೊನೆ ಯಾವಾಗ!!!? ಸಚಿವತ್ರಯರಿಗೆ ಪದೆ ಪದೆ ಖಾತೆ ಬದಲಾವಣೆ ಹಿನ್ನಲೆ ಮುನಿಸಿಕೊಂಡ ಕೆಲ ಸಚಿವರು ರಾಜೀನಾಮೆ ನೀಡುವ ಸಾಧ್ಯತೆ

ಬೆಂಗಳೂರು: ರಾಜ್ಯರಾಜಕೀಯದಲ್ಲಿ ಖಾತೆ ಖ್ಯಾತೆ ಮುಂದುವರಿದಿದ್ದು ಕೆಲ ಸಚಿವರು ತಮ್ಮ ಖಾತೆ ಬದಲಿಸುವಂತೆ ಪಟ್ಟು ಹಿಡಿದರೆ ಇನ್ನೂ ಕೆಲ ಸಚಿವರು ರಾಜೀನಾಮೆ ಇಂಗಿತವನ್ನು ತೋಡಿಕೊಂಡಿದ್ದಾರೆ.

ಪ್ರವಾಸೋದ್ಯಮ ಸಚಿವರಾಗಿರುವ ಆನಂದ್ ಸಿಂಗ್ ಅವರು ತಾನು ಯಾವ ಸ್ಥಾನ ಕೊಟ್ಟರು ನಿಭಾಯಿಸಬಲ್ಲೆ ನಾನಾಗಿ ಯಾವತ್ತು ಸಚಿವಸ್ಥಾನದ ಆಕಾಂಕ್ಷಿಯಲ್ಲ ಬದಲಾಗಿ ಸಿ.ಎಂ ಹೇಳಿದರೆ ಶಾಸಕನಾಗಿ ಮುಂದುವರೆಯುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.


ಸಚಿವರುಗಳಾದ ಡಾ.ಸುಧಾಕರ್ ಮತ್ತು ಮಾಧುಸ್ವಾಮಿ ತಮ್ಮ ಖಾತೆ ಬದಲಾವಣೆಗೆ ಸಿಎಂ ಬಳಿ ಪಟ್ಟು ಹಿಡಿದಿದ್ದಾರೆ. ತಮ್ಮಲ್ಲಿದ್ದ ವೈದ್ಯಕೀಯ ಶಿಕ್ಷಣ ಇಲಾಖೆ ಹಿಂಪಡೆದ ಬಗ್ಗೆ ಸುಧಾಕರ್ ಮುನಿಸಿಕೊಂಡಿದ್ದು, ಆ ಖಾತೆಯನ್ನು ಮತ್ತೆ ಪಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಫಲವಾಗಿ ಆರೋಗ್ಯ ಸಚಿವ ಡಾ. ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ ಇಲಾಖೆ ನೀಡಲು ಸಿಎಂ ಮುಂದಾಗಿದ್ದಾರೆ ಎಂದು ವರದಿಗಳು ತಿಳಿಸಿದೆ.

ಸದ್ಯ ವೈದ್ಯಕೀಯ ಶಿಕ್ಷಣ ಸಚಿವರಾಗಿರುವ ಮಾಧುಸ್ವಾಮಿ ಗೆ ಪ್ರವಾಸೋದ್ಯಮ ಇಲಾಖೆ ನೀಡಲು ಸಿಎಂ ಮುಂದಾಗಿದ್ದಾರೆ. ಮಾಧುಸ್ವಾಮಿಯವರು ಈ ಹಿಂದೆಯೂ ಈ ವೈದ್ಯಕೀಯ ಶಿಕ್ಷಣ ಖಾತೆಯ ಬಗ್ಗೆ ಸಂತೋಷವಾಗಿರಲಿಲ್ಲ. ಆದರೆ ಇದೀಗ ಮತ್ತೆ ಖಾತೆ ಬದಲಾವಣೆ ಮಾಡುತ್ತಿರುವ ಕಾರಣ ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಆದರೆ ಮತ್ತೆ ಖಾತೆ ಬದಲಾವಣೆಯಿಂದ ಮುನಿಸಿಕೊಂಡ ಸಚಿವ ಮಾಧುಸ್ವಾಮಿ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಾಧುಸ್ವಾಮಿ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಸಿಎಂ ಬಿಎಸ್ ವೈ ದೂರವಾಣಿ ಮೂಲಕ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಅವರು ನಾಳೆ ಧ್ವಜಾರೋಹಣ ನಂತರ ಮಧ್ಯಾಹ್ನ ರಾಜಿನಾಮೆ ಸಲ್ಲಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಸಂಜೆ ಆರ್ಭಟಿಸಿದ ವರುಣನ ಅಬ್ಬರಕ್ಕೆ ಭೀಕರ ದುರಂತವೊಂದು ಸಂಭವಿಸಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಮೂವರು ಮಕ್ಕಳು ಸೇರಿದಂತೆ ಒಟ್ಟು 8 ಜನರು ಮೃತಪಟ್ಟಿದ್ದಾರೆ. ಬುಧವಾರ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 7 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 44 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 88 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 44 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 80 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ