ರಾಜ್ಯರಾಜಕೀಯದಲ್ಲಿ ಮತ್ತೆ ಬುಗಿಲೆದ್ದ ಖಾತೆ ಖ್ಯಾತೆ! ಖಾತೆ ಹಂಚಿಕೆಗೆ ಕೊನೆ ಯಾವಾಗ!!!? ಸಚಿವತ್ರಯರಿಗೆ ಪದೆ ಪದೆ ಖಾತೆ ಬದಲಾವಣೆ ಹಿನ್ನಲೆ ಮುನಿಸಿಕೊಂಡ ಕೆಲ ಸಚಿವರು ರಾಜೀನಾಮೆ ನೀಡುವ ಸಾಧ್ಯತೆ

ಬೆಂಗಳೂರು: ರಾಜ್ಯರಾಜಕೀಯದಲ್ಲಿ ಖಾತೆ ಖ್ಯಾತೆ ಮುಂದುವರಿದಿದ್ದು ಕೆಲ ಸಚಿವರು ತಮ್ಮ ಖಾತೆ ಬದಲಿಸುವಂತೆ ಪಟ್ಟು ಹಿಡಿದರೆ ಇನ್ನೂ ಕೆಲ ಸಚಿವರು ರಾಜೀನಾಮೆ ಇಂಗಿತವನ್ನು ತೋಡಿಕೊಂಡಿದ್ದಾರೆ.

ಪ್ರವಾಸೋದ್ಯಮ ಸಚಿವರಾಗಿರುವ ಆನಂದ್ ಸಿಂಗ್ ಅವರು ತಾನು ಯಾವ ಸ್ಥಾನ ಕೊಟ್ಟರು ನಿಭಾಯಿಸಬಲ್ಲೆ ನಾನಾಗಿ ಯಾವತ್ತು ಸಚಿವಸ್ಥಾನದ ಆಕಾಂಕ್ಷಿಯಲ್ಲ ಬದಲಾಗಿ ಸಿ.ಎಂ ಹೇಳಿದರೆ ಶಾಸಕನಾಗಿ ಮುಂದುವರೆಯುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.


ಸಚಿವರುಗಳಾದ ಡಾ.ಸುಧಾಕರ್ ಮತ್ತು ಮಾಧುಸ್ವಾಮಿ ತಮ್ಮ ಖಾತೆ ಬದಲಾವಣೆಗೆ ಸಿಎಂ ಬಳಿ ಪಟ್ಟು ಹಿಡಿದಿದ್ದಾರೆ. ತಮ್ಮಲ್ಲಿದ್ದ ವೈದ್ಯಕೀಯ ಶಿಕ್ಷಣ ಇಲಾಖೆ ಹಿಂಪಡೆದ ಬಗ್ಗೆ ಸುಧಾಕರ್ ಮುನಿಸಿಕೊಂಡಿದ್ದು, ಆ ಖಾತೆಯನ್ನು ಮತ್ತೆ ಪಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಫಲವಾಗಿ ಆರೋಗ್ಯ ಸಚಿವ ಡಾ. ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ ಇಲಾಖೆ ನೀಡಲು ಸಿಎಂ ಮುಂದಾಗಿದ್ದಾರೆ ಎಂದು ವರದಿಗಳು ತಿಳಿಸಿದೆ.

ಸದ್ಯ ವೈದ್ಯಕೀಯ ಶಿಕ್ಷಣ ಸಚಿವರಾಗಿರುವ ಮಾಧುಸ್ವಾಮಿ ಗೆ ಪ್ರವಾಸೋದ್ಯಮ ಇಲಾಖೆ ನೀಡಲು ಸಿಎಂ ಮುಂದಾಗಿದ್ದಾರೆ. ಮಾಧುಸ್ವಾಮಿಯವರು ಈ ಹಿಂದೆಯೂ ಈ ವೈದ್ಯಕೀಯ ಶಿಕ್ಷಣ ಖಾತೆಯ ಬಗ್ಗೆ ಸಂತೋಷವಾಗಿರಲಿಲ್ಲ. ಆದರೆ ಇದೀಗ ಮತ್ತೆ ಖಾತೆ ಬದಲಾವಣೆ ಮಾಡುತ್ತಿರುವ ಕಾರಣ ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಆದರೆ ಮತ್ತೆ ಖಾತೆ ಬದಲಾವಣೆಯಿಂದ ಮುನಿಸಿಕೊಂಡ ಸಚಿವ ಮಾಧುಸ್ವಾಮಿ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಾಧುಸ್ವಾಮಿ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಸಿಎಂ ಬಿಎಸ್ ವೈ ದೂರವಾಣಿ ಮೂಲಕ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಅವರು ನಾಳೆ ಧ್ವಜಾರೋಹಣ ನಂತರ ಮಧ್ಯಾಹ್ನ ರಾಜಿನಾಮೆ ಸಲ್ಲಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ