ರಾಜ್ಯದಲ್ಲಿ ಸಚಿವ, ಶಾಸಕರ ಶೇ.30 ರಷ್ಟು ವೇತನ ಕಡಿತ ವಿಧೇಯಕಕ್ಕೆ ಅನುಮೋದನೆ!

ಬೆಂಗಳೂರು: ಕೊರೋನಾ ಸಂಕಷ್ಟಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿದೂಗಿಸಬೇಕಿರುವ ಕಾರಣ ಮುಖ್ಯಮಂತ್ರಿಯಾದಿಯಾಗಿ ಸಚಿವರು, ಶಾಸಕರ ಶೇ.30ರಷ್ಟುವೇತನ ಕಡಿತ ಮಾಡುವ ಸಂಬಂಧ ಸಂಬಳಗಳು, ನಿವೃತ್ತಿ ವೇತನ, ಭತ್ಯೆ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕ ಸೇರಿದಂತೆ ನಾಲ್ಕು ವಿಧೇಯಕಗಳನ್ನು ಅಂಗೀಕರಿಸಲಾಗಿದ್ದು, ಎಂಟು ವಿಧೇಯಕಗಳನ್ನು ಮಂಡಿಸಲಾಯಿತು.

ಮಂಗಳವಾರ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ವೇತನ, ನಿವೃತ್ತಿ ವೇತನ, ಭತ್ಯೆ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕವನ್ನು ಮಂಡಿಸಿ ಅನುಮೋದನೆ ಪಡೆದುಕೊಂಡರು.

ಕೊರೋನಾದಂತಹ ಸನ್ನಿವೇಶವನ್ನು ನಿಭಾಯಿಸಲು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು, ಸಭಾಧ್ಯಕ್ಷರು, ಉಪಸಭಾಧ್ಯಕ್ಷರು, ಸಭಾಪತಿ, ಉಪಸಭಾಪತಿ, ವಿಧಾನಸಭೆ ಮತ್ತು ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕರು, ಶಾಸಕರ ವೇತನ ಮತ್ತು ಭತ್ಯೆಗಳನ್ನು ಕಡಿಮೆಗೊಳಿಸುವ ಮೂಲಕ ಸಂಪನ್ಮೂಲ ಹೆಚ್ಚಿಸುವ ಪ್ರಸ್ತಾಪ ಮಾಡಲಾಗಿದೆ.

ವಿಧೇಯಕವು 2020ರ ಏ.1ರಿಂದ ಬರುವ 2021ರ ಮಾ.31ರವರೆಗೆ ಜಾರಿಯಲ್ಲಿರಲಿದೆ.

🔹ಕೊರೋನಾ ಹೊಡೆತ, ಸಂಸದರ ವೇತನ ಕಡಿತ ಮಸೂದೆ ಮಂಡನೆ!

🔸ಕುಷ್ಠರೋಗ ಬಾಧಿತ ವ್ಯಕ್ತಿಗಳ ಸಂಬಂಧದಲ್ಲಿನ ತಾರತಮ್ಯಕಾರಕವಾದ ಉಪಬಂಧವನ್ನು ತೆಗೆದು ಹಾಕುವ 2020ನೇ ಸಾಲಿನ ಕರ್ನಾಟಕ ಭಿಕ್ಷಾಟನೆ ನಿಷೇಧ ತಿದ್ದುಪಡಿ ವಿಧೇಯಕ,

🔹2020ನೇ ಸಾಲಿನ ಕನ್ನಡ ವಿಶ್ವವಿದ್ಯಾಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕ ಮತ್ತು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕವನ್ನು ಸದನವು ಅಂಗೀಕರಿಸಿತು.

ಮಂಡನೆಯಾದ ವಿಧೇಯಕಗಳು:

🔸ಕರ್ನಾಟಕ ರಾಜ್ಯ ಕೈಗಾರಿಕೆಗಳ(ಸೌಲಭ್ಯ) (ತಿದ್ದುಪಡಿ) ವಿಧೇಯಕ

🔹ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ತಿದ್ದುಪಡಿ) ವಿಧೇಯಕ

🔸ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ವಿಧೇಯಕ

🔹ಕರ್ನಾಟಕ ಸಾಂಕ್ರಾಮಿಕ ರೋಗಗಳ ವಿಧೇಯಕ

🔸ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕ

🔹ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ವಿಧೇಯಕ

🔸ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಎರಡನೇ ತಿದ್ದುಪಡಿ) ವಿಧೇಯಕ

🔹ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ ವಿಧೇಯಕ

Spread the love
  • Related Posts

    ಸಿಯುಇಟಿ ಜೀವಶಾಸ್ತ್ರದಲ್ಲಿ ಶೇ.100 ಪರ್ಸೆಂಟೈಲ್ಎಕ್ಸ್ ಪರ್ಟ್ ವಿದ್ಯಾರ್ಥಿನಿ ಅದ್ವಿತೀಯ.ಎಂ ರಾಷ್ಟ್ರ ಮಟ್ಟದ ಸಾಧನೆ

    ಮಂಗಳೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(ಎನ್ ಟಿಎ)ಯು ಕೇಂದ್ರ ವಿಶ್ವವಿದ್ಯಾಲಯ ಹಾಗೂ ದೇಶದ ಪ್ರಮುಖ ಖಾಸಗಿ ವಿಶ್ವವಿದ್ಯಾಲಯಗಳ ಪದವಿ ಕೋರ್ಸ್‌ನ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರಮಟ್ಟದ ಕಾಮನ್ ಪ್ರವೇಶ ಪರೀಕ್ಷೆಯಾದ ಯೂನಿವರ್ಸಿಟಿ ಪ್ರವೇಶ ಪರೀಕ್ಷೆಯಲ್ಲಿ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅದ್ವಿತೀಯ ಎಂ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾ.ಜ.ಪಾ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕರಾವಳಿ ಶಾಸಕರೊಂದಿಗೆ ಭೇಟಿ

    ಧರ್ಮಸ್ಥಳ: ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನ ಪರಿಷತ್‌ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ (ಕ್ರಾಸ್‌ ವೋಟಿಂಗ್) ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ(ಬಿಜೆಪಿಎಲ್ ಪಿ) ನಡೆಸಲು ಮುಂದಾಗಿ ಕೊನೆಗೆ ವರಿಷ್ಠರ ಸೂಚನೆಯಂತೆ…

    Spread the love

    You Missed

    ಸಿಯುಇಟಿ ಜೀವಶಾಸ್ತ್ರದಲ್ಲಿ ಶೇ.100 ಪರ್ಸೆಂಟೈಲ್ಎಕ್ಸ್ ಪರ್ಟ್ ವಿದ್ಯಾರ್ಥಿನಿ ಅದ್ವಿತೀಯ.ಎಂ ರಾಷ್ಟ್ರ ಮಟ್ಟದ ಸಾಧನೆ

    • By admin
    • June 27, 2026
    • 14 views
    ಸಿಯುಇಟಿ ಜೀವಶಾಸ್ತ್ರದಲ್ಲಿ ಶೇ.100 ಪರ್ಸೆಂಟೈಲ್ಎಕ್ಸ್ ಪರ್ಟ್ ವಿದ್ಯಾರ್ಥಿನಿ ಅದ್ವಿತೀಯ.ಎಂ ರಾಷ್ಟ್ರ ಮಟ್ಟದ ಸಾಧನೆ

    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾ.ಜ.ಪಾ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕರಾವಳಿ ಶಾಸಕರೊಂದಿಗೆ ಭೇಟಿ

    • By admin
    • June 26, 2026
    • 58 views
    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾ.ಜ.ಪಾ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕರಾವಳಿ ಶಾಸಕರೊಂದಿಗೆ ಭೇಟಿ

    ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ

    • By admin
    • June 24, 2026
    • 52 views
    ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    • By admin
    • June 20, 2026
    • 39 views
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    • By admin
    • June 20, 2026
    • 123 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

    • By admin
    • June 20, 2026
    • 33 views
    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ