ರಾಜ್ಯದಲ್ಲಿ ಸಚಿವ, ಶಾಸಕರ ಶೇ.30 ರಷ್ಟು ವೇತನ ಕಡಿತ ವಿಧೇಯಕಕ್ಕೆ ಅನುಮೋದನೆ!

ಬೆಂಗಳೂರು: ಕೊರೋನಾ ಸಂಕಷ್ಟಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿದೂಗಿಸಬೇಕಿರುವ ಕಾರಣ ಮುಖ್ಯಮಂತ್ರಿಯಾದಿಯಾಗಿ ಸಚಿವರು, ಶಾಸಕರ ಶೇ.30ರಷ್ಟುವೇತನ ಕಡಿತ ಮಾಡುವ ಸಂಬಂಧ ಸಂಬಳಗಳು, ನಿವೃತ್ತಿ ವೇತನ, ಭತ್ಯೆ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕ ಸೇರಿದಂತೆ ನಾಲ್ಕು ವಿಧೇಯಕಗಳನ್ನು ಅಂಗೀಕರಿಸಲಾಗಿದ್ದು, ಎಂಟು ವಿಧೇಯಕಗಳನ್ನು ಮಂಡಿಸಲಾಯಿತು.

ಮಂಗಳವಾರ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ವೇತನ, ನಿವೃತ್ತಿ ವೇತನ, ಭತ್ಯೆ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕವನ್ನು ಮಂಡಿಸಿ ಅನುಮೋದನೆ ಪಡೆದುಕೊಂಡರು.

ಕೊರೋನಾದಂತಹ ಸನ್ನಿವೇಶವನ್ನು ನಿಭಾಯಿಸಲು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು, ಸಭಾಧ್ಯಕ್ಷರು, ಉಪಸಭಾಧ್ಯಕ್ಷರು, ಸಭಾಪತಿ, ಉಪಸಭಾಪತಿ, ವಿಧಾನಸಭೆ ಮತ್ತು ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕರು, ಶಾಸಕರ ವೇತನ ಮತ್ತು ಭತ್ಯೆಗಳನ್ನು ಕಡಿಮೆಗೊಳಿಸುವ ಮೂಲಕ ಸಂಪನ್ಮೂಲ ಹೆಚ್ಚಿಸುವ ಪ್ರಸ್ತಾಪ ಮಾಡಲಾಗಿದೆ.

ವಿಧೇಯಕವು 2020ರ ಏ.1ರಿಂದ ಬರುವ 2021ರ ಮಾ.31ರವರೆಗೆ ಜಾರಿಯಲ್ಲಿರಲಿದೆ.

🔹ಕೊರೋನಾ ಹೊಡೆತ, ಸಂಸದರ ವೇತನ ಕಡಿತ ಮಸೂದೆ ಮಂಡನೆ!

🔸ಕುಷ್ಠರೋಗ ಬಾಧಿತ ವ್ಯಕ್ತಿಗಳ ಸಂಬಂಧದಲ್ಲಿನ ತಾರತಮ್ಯಕಾರಕವಾದ ಉಪಬಂಧವನ್ನು ತೆಗೆದು ಹಾಕುವ 2020ನೇ ಸಾಲಿನ ಕರ್ನಾಟಕ ಭಿಕ್ಷಾಟನೆ ನಿಷೇಧ ತಿದ್ದುಪಡಿ ವಿಧೇಯಕ,

🔹2020ನೇ ಸಾಲಿನ ಕನ್ನಡ ವಿಶ್ವವಿದ್ಯಾಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕ ಮತ್ತು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕವನ್ನು ಸದನವು ಅಂಗೀಕರಿಸಿತು.

ಮಂಡನೆಯಾದ ವಿಧೇಯಕಗಳು:

🔸ಕರ್ನಾಟಕ ರಾಜ್ಯ ಕೈಗಾರಿಕೆಗಳ(ಸೌಲಭ್ಯ) (ತಿದ್ದುಪಡಿ) ವಿಧೇಯಕ

🔹ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ತಿದ್ದುಪಡಿ) ವಿಧೇಯಕ

🔸ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ವಿಧೇಯಕ

🔹ಕರ್ನಾಟಕ ಸಾಂಕ್ರಾಮಿಕ ರೋಗಗಳ ವಿಧೇಯಕ

🔸ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕ

🔹ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ವಿಧೇಯಕ

🔸ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಎರಡನೇ ತಿದ್ದುಪಡಿ) ವಿಧೇಯಕ

🔹ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ ವಿಧೇಯಕ

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 5 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ