ರಾಜ್ಯದಲ್ಲಿ ಸಚಿವ, ಶಾಸಕರ ಶೇ.30 ರಷ್ಟು ವೇತನ ಕಡಿತ ವಿಧೇಯಕಕ್ಕೆ ಅನುಮೋದನೆ!

ಬೆಂಗಳೂರು: ಕೊರೋನಾ ಸಂಕಷ್ಟಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿದೂಗಿಸಬೇಕಿರುವ ಕಾರಣ ಮುಖ್ಯಮಂತ್ರಿಯಾದಿಯಾಗಿ ಸಚಿವರು, ಶಾಸಕರ ಶೇ.30ರಷ್ಟುವೇತನ ಕಡಿತ ಮಾಡುವ ಸಂಬಂಧ ಸಂಬಳಗಳು, ನಿವೃತ್ತಿ ವೇತನ, ಭತ್ಯೆ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕ ಸೇರಿದಂತೆ ನಾಲ್ಕು ವಿಧೇಯಕಗಳನ್ನು ಅಂಗೀಕರಿಸಲಾಗಿದ್ದು, ಎಂಟು ವಿಧೇಯಕಗಳನ್ನು ಮಂಡಿಸಲಾಯಿತು.

ಮಂಗಳವಾರ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ವೇತನ, ನಿವೃತ್ತಿ ವೇತನ, ಭತ್ಯೆ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕವನ್ನು ಮಂಡಿಸಿ ಅನುಮೋದನೆ ಪಡೆದುಕೊಂಡರು.

ಕೊರೋನಾದಂತಹ ಸನ್ನಿವೇಶವನ್ನು ನಿಭಾಯಿಸಲು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು, ಸಭಾಧ್ಯಕ್ಷರು, ಉಪಸಭಾಧ್ಯಕ್ಷರು, ಸಭಾಪತಿ, ಉಪಸಭಾಪತಿ, ವಿಧಾನಸಭೆ ಮತ್ತು ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕರು, ಶಾಸಕರ ವೇತನ ಮತ್ತು ಭತ್ಯೆಗಳನ್ನು ಕಡಿಮೆಗೊಳಿಸುವ ಮೂಲಕ ಸಂಪನ್ಮೂಲ ಹೆಚ್ಚಿಸುವ ಪ್ರಸ್ತಾಪ ಮಾಡಲಾಗಿದೆ.

ವಿಧೇಯಕವು 2020ರ ಏ.1ರಿಂದ ಬರುವ 2021ರ ಮಾ.31ರವರೆಗೆ ಜಾರಿಯಲ್ಲಿರಲಿದೆ.

🔹ಕೊರೋನಾ ಹೊಡೆತ, ಸಂಸದರ ವೇತನ ಕಡಿತ ಮಸೂದೆ ಮಂಡನೆ!

🔸ಕುಷ್ಠರೋಗ ಬಾಧಿತ ವ್ಯಕ್ತಿಗಳ ಸಂಬಂಧದಲ್ಲಿನ ತಾರತಮ್ಯಕಾರಕವಾದ ಉಪಬಂಧವನ್ನು ತೆಗೆದು ಹಾಕುವ 2020ನೇ ಸಾಲಿನ ಕರ್ನಾಟಕ ಭಿಕ್ಷಾಟನೆ ನಿಷೇಧ ತಿದ್ದುಪಡಿ ವಿಧೇಯಕ,

🔹2020ನೇ ಸಾಲಿನ ಕನ್ನಡ ವಿಶ್ವವಿದ್ಯಾಲಯ ಮತ್ತು ಇತರ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕ ಮತ್ತು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕವನ್ನು ಸದನವು ಅಂಗೀಕರಿಸಿತು.

ಮಂಡನೆಯಾದ ವಿಧೇಯಕಗಳು:

🔸ಕರ್ನಾಟಕ ರಾಜ್ಯ ಕೈಗಾರಿಕೆಗಳ(ಸೌಲಭ್ಯ) (ತಿದ್ದುಪಡಿ) ವಿಧೇಯಕ

🔹ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ತಿದ್ದುಪಡಿ) ವಿಧೇಯಕ

🔸ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ವಿಧೇಯಕ

🔹ಕರ್ನಾಟಕ ಸಾಂಕ್ರಾಮಿಕ ರೋಗಗಳ ವಿಧೇಯಕ

🔸ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕ

🔹ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ವಿಧೇಯಕ

🔸ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ಎರಡನೇ ತಿದ್ದುಪಡಿ) ವಿಧೇಯಕ

🔹ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ ವಿಧೇಯಕ

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 10 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 11 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 7 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 11 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 13 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 15 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ