ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

ಮಂಗಳೂರು: ನಗರದ ಹೃದಯ ಭಾಗದಲ್ಲಿ ಬಿಜೈ ಕಾಪಿಕಾಡ್ ನಲ್ಲಿ ಪುಟ್ಟದಾದ ಅಂಗನವಾಡಿ ಕೇಂದ್ರವಿದೆ. ಪುಟ್ಟ ಪುಟ್ಟ ಮಕ್ಕಳು ಈ ಅಂಗನವಾಡಿ ಕೇಂದ್ರದಲ್ಲಿ ಕಲಿಯುತ್ತಿದ್ದಾರೆ. ಈ ಶಾಲೆ ಅಭಿವೃದ್ಧಿ ಪಡಿಸಬೇಕೆಂಬ ಉದ್ದೇಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ ದಾನಿಗಳ ಮೂಲಕ ಈ ಅಂಗನವಾಡಿ ಕೇಂದ್ರಕ್ಕೆ ಹಲವು ಮೂಲಭೂತ ಸೌಕರ್ಯ ಒದಗಿಸಿದ್ದು ಮಕ್ಕಳಿಗೆ ಆಟಿಕೆ ಸಾಮಗ್ರಿ, ಛತ್ರಿ, ಸಮವಸ್ತ್ರ ನೀಡಲಾಗಿದೆ.

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಈ ಅಂಗನವಾಡಿ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಘಟಕ, ಪುಟಾಣಿಗಳಿಗೆ ಸಮವಸ್ತ್ರ ನೀಡಿದ್ದಾರೆ. ಮಂಗಳೂರು ಸ್ಮಾರ್ಟ್ ಸಿಟಿ ಮಹಾ ಪ್ರಬಂಧಕ ಈ ಅಂಗನವಾಡಿ ಶಾಲೆಗೆ ಶನಿವಾರ ಭೇಟಿ ನೀಡಿ ಅಂಗನವಾಡಿ ಕೇಂದ್ರಕ್ಕೆ ಆಹಾರ ಸುರಕ್ಷತಾ ಪೆಟ್ಟಿಗೆಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಅಷ್ಟೇ ಅಲ್ಲದೆ ಮಂಗಳೂರು ಸ್ಮಾರ್ಟ್ ಸಿಟಿ ಮೂಲಕ ಈ ಅಂಗನವಾಡಿ ಕೇಂದ್ರವನ್ನು ಸ್ಮಾರ್ಟ್ ಅಂಗನವಾಡಿ ಕೇಂದ್ರ ಮಾಡುವುದಾಗಿ ತಿಳಿಸಿದ್ದಾರೆ. ಈ ಮೂಲಕ ಮಂಗಳೂರು ನಗರದ ಅಂಗನವಾಡಿ ಕೇಂದ್ರವೊಂದು ಸ್ಮಾರ್ಟ್ ರೂಪ ಪಡೆದುಕೊಳ್ಳಲಿದೆ. ಮಂಗಳೂರು ನಲ್ಲಿ ಇದೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರ ಸ್ಮಾರ್ಟ್ ಆಗಲಿದೆ. ಅಂದ ಹಾಗೆ ಈ ಶಾಲೆಯಲ್ಲಿ ಯಾರ ಶ್ರೀಮಂತರ ಮಕ್ಕಳು ಕಲಿಯುದಿಲ್ಲ. ಈ ಶಾಲೆಯಲ್ಲಿ ಕಲಿಯುವ ಮಕ್ಕಳು ಬಹುತೇಕರು ಕಟ್ಟಡ ಕಾರ್ಮಿಕರ ಮಕ್ಕಳು. ಆದ್ರೆ ಪ್ರತಿಭೆ ಯಲ್ಲಿ ಕಲಿಯುವುದರಲ್ಲಿ ಇಲ್ಲಿಯ ಮಕ್ಕಳು ಎಲ್ ಕೆ ಜಿ, ಯು ಕೆ ಜಿ ಮಕ್ಕಳಿಗಿಂತಲೂ ಸ್ಮಾರ್ಟ್ ಇದ್ದಾರೆ.ಈ ಅಂಗನವಾಡಿ ಶಿಕ್ಷಕಿ ನಂದಾ ಮಕ್ಕಳಿಗೆ ಸದಾ ಚಟುವಟಿಕೆಯಲ್ಲಿ, ಲವಲವಿಕೆ ಇರುವಂತೆ ನೋಡಿಕೊಳ್ಳುತಿದ್ದಾರೆ. ಈ ಅಂಗನವಾಡಿ ಕೇಂದ್ರ ಮಾದರಿಯಾಗಿ ಬೆಳೆಯುವುದರ ಜೊತೆಗೆ ಜಿಲ್ಲೆಗೆ ಮಾದರಿಯಾಗಲಿ.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರವು ರಾಜ್ಯದ ವಿವಿಧ ಭಾಗಗಳಲ್ಲಿ ನೂತನ 12 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಸಾರ್ವಜನಿಕರ ಭದ್ರತೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಸೇವೆಗಳನ್ನು ಜನರಿಗೆ ಇನ್ನಷ್ಟು ಸಮೀಪಕ್ಕೆ ತಲುಪಿಸಲು ಈ ಕ್ರಮ…

    Spread the love

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 6 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 14 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 39 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 52 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 17 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್