ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

ಮಂಗಳೂರು: ನಗರದ ಹೃದಯ ಭಾಗದಲ್ಲಿ ಬಿಜೈ ಕಾಪಿಕಾಡ್ ನಲ್ಲಿ ಪುಟ್ಟದಾದ ಅಂಗನವಾಡಿ ಕೇಂದ್ರವಿದೆ. ಪುಟ್ಟ ಪುಟ್ಟ ಮಕ್ಕಳು ಈ ಅಂಗನವಾಡಿ ಕೇಂದ್ರದಲ್ಲಿ ಕಲಿಯುತ್ತಿದ್ದಾರೆ. ಈ ಶಾಲೆ ಅಭಿವೃದ್ಧಿ ಪಡಿಸಬೇಕೆಂಬ ಉದ್ದೇಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ ದಾನಿಗಳ ಮೂಲಕ ಈ ಅಂಗನವಾಡಿ ಕೇಂದ್ರಕ್ಕೆ ಹಲವು ಮೂಲಭೂತ ಸೌಕರ್ಯ ಒದಗಿಸಿದ್ದು ಮಕ್ಕಳಿಗೆ ಆಟಿಕೆ ಸಾಮಗ್ರಿ, ಛತ್ರಿ, ಸಮವಸ್ತ್ರ ನೀಡಲಾಗಿದೆ.

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಈ ಅಂಗನವಾಡಿ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಘಟಕ, ಪುಟಾಣಿಗಳಿಗೆ ಸಮವಸ್ತ್ರ ನೀಡಿದ್ದಾರೆ. ಮಂಗಳೂರು ಸ್ಮಾರ್ಟ್ ಸಿಟಿ ಮಹಾ ಪ್ರಬಂಧಕ ಈ ಅಂಗನವಾಡಿ ಶಾಲೆಗೆ ಶನಿವಾರ ಭೇಟಿ ನೀಡಿ ಅಂಗನವಾಡಿ ಕೇಂದ್ರಕ್ಕೆ ಆಹಾರ ಸುರಕ್ಷತಾ ಪೆಟ್ಟಿಗೆಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಅಷ್ಟೇ ಅಲ್ಲದೆ ಮಂಗಳೂರು ಸ್ಮಾರ್ಟ್ ಸಿಟಿ ಮೂಲಕ ಈ ಅಂಗನವಾಡಿ ಕೇಂದ್ರವನ್ನು ಸ್ಮಾರ್ಟ್ ಅಂಗನವಾಡಿ ಕೇಂದ್ರ ಮಾಡುವುದಾಗಿ ತಿಳಿಸಿದ್ದಾರೆ. ಈ ಮೂಲಕ ಮಂಗಳೂರು ನಗರದ ಅಂಗನವಾಡಿ ಕೇಂದ್ರವೊಂದು ಸ್ಮಾರ್ಟ್ ರೂಪ ಪಡೆದುಕೊಳ್ಳಲಿದೆ. ಮಂಗಳೂರು ನಲ್ಲಿ ಇದೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರ ಸ್ಮಾರ್ಟ್ ಆಗಲಿದೆ. ಅಂದ ಹಾಗೆ ಈ ಶಾಲೆಯಲ್ಲಿ ಯಾರ ಶ್ರೀಮಂತರ ಮಕ್ಕಳು ಕಲಿಯುದಿಲ್ಲ. ಈ ಶಾಲೆಯಲ್ಲಿ ಕಲಿಯುವ ಮಕ್ಕಳು ಬಹುತೇಕರು ಕಟ್ಟಡ ಕಾರ್ಮಿಕರ ಮಕ್ಕಳು. ಆದ್ರೆ ಪ್ರತಿಭೆ ಯಲ್ಲಿ ಕಲಿಯುವುದರಲ್ಲಿ ಇಲ್ಲಿಯ ಮಕ್ಕಳು ಎಲ್ ಕೆ ಜಿ, ಯು ಕೆ ಜಿ ಮಕ್ಕಳಿಗಿಂತಲೂ ಸ್ಮಾರ್ಟ್ ಇದ್ದಾರೆ.ಈ ಅಂಗನವಾಡಿ ಶಿಕ್ಷಕಿ ನಂದಾ ಮಕ್ಕಳಿಗೆ ಸದಾ ಚಟುವಟಿಕೆಯಲ್ಲಿ, ಲವಲವಿಕೆ ಇರುವಂತೆ ನೋಡಿಕೊಳ್ಳುತಿದ್ದಾರೆ. ಈ ಅಂಗನವಾಡಿ ಕೇಂದ್ರ ಮಾದರಿಯಾಗಿ ಬೆಳೆಯುವುದರ ಜೊತೆಗೆ ಜಿಲ್ಲೆಗೆ ಮಾದರಿಯಾಗಲಿ.

Spread the love
  • Related Posts

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ಬೆಳ್ತಂಗಡಿ : ಗ್ರಾಹಕರಿಗೆ ಸರಿಯಾದ ಸಮಯಕ್ಕೆ ಗ್ಯಾಸ್ ಸರಬರಾಜು ಮಾಡದೆ ಕಚೇರಿಗೆ ಹೋದಾಗ ಪ್ರತಿನಿತ್ಯ ಗಲಾಟೆ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಆಹಾರ ಇಲಾಖೆಗೆ ಬಂದ ದೂರಿನ ಆಧಾರದಲ್ಲಿ ಕೊನೆಯ ಎಚ್ಚರಿಕೆಯ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲ…

    Spread the love

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23) ಪ್ರಕಟಗೊಳ್ಳಲಿದೆ. ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಫಲಿತಾಂಶದ ಮುಖ್ಯಾಂಶಗಳು: ದಿನಾಂಕ…

    Spread the love

    You Missed

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 114 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 33 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 19 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 41 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 27 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 60 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ