ಐಷಾರಾಮಿ ಕಾರಿನಲ್ಲಿ ಬಂದು ಸ್ವಚ್ಚಂದವಾಗಿದ ನೇತ್ರಾವತಿ ಒಡಲಿಗೆ ತ್ಯಾಜ್ಯ ಎಸೆದರು! ಕೊನೆಗೂ ಕಸದ ಕಾರು ತಲುಪುವ ಜಾಗಕ್ಕೆ ತಲುಪಿ ಬಿಟ್ಟಿತ್ತು!

ಮಂಗಳೂರು: ಮಂಗಳೂರಿನ ಉಳ್ಳಾಲ ಸ್ವಚ್ಚಂದವಾಗಿ ಹರಿಯುವ ನೇತ್ರಾವತಿ ನದಿ ನೀರನ್ನು ಮಾಲಿನ್ಯ ಮಾಡುವವರು ಈ ವರದಿಯನ್ನು ನೋಡಲೇ ಬೇಕಿದೆ.

ಕುಡಿಯಲು ಸ್ವಚ್ಛ ನೀರು ಬೇಕು ಉಸಿರಾಡಲು ಉತ್ತಮ ವಾತಾವರಣದಲ್ಲಿರುವ ಗಾಳಿ ಬೇಕು ಆದರೆ ಸ್ವಚ್ಛತೆಯ ಪರಿಪಾಠ ಯಾರಿಗೂ ಬೇಡವಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರ ಆಡಂಕುದ್ರು ಬಳಿ ಇರುವ ನೇತ್ರಾವತಿ ಸೇತುವೆ ಜನರಿಗೆ ಕಸ, ತ್ಯಾಜ್ಯ ಎಸೆಯಲು ಅತ್ಯಂತ ಸುಲಭ ಜಾಗವಾಗಿತ್ತು. ನೇತ್ರಾವತಿ ಸೇತುವೆಯಲ್ಲಿ ಸರಣಿ ಆತ್ಮಹತ್ಯೆ ಬಳಿಕ ಸೇತುವೆಗೆ ಎತ್ತರದ ತಂತಿ ಬೇಲಿ ಹಾಕಿದ ಬಳಿಕ ಆತ್ಮಹತ್ಯೆ ಪ್ರಮಾಣ ಕಡಿಮೆಯಾದರೂ ಸೇತುವೆ ಮೂಲಕ ನದಿಗೆ ಕಸ ಎಸೆಯುವುದು ಮಾತ್ರ ಇನ್ನೂ ನಿಂತಿಲ್ಲ.

ಇಲ್ಲೊಂದು ಕಾರಿನಲ್ಲಿ ಬಂದ ಸುಶಿಕ್ಷಿತರಂತೆ ಕಾಣುವ ವಿಕೃತ ಮನಸಿನ ಮಹಿಳೆಯರಿಬ್ಬರು ಕಸ ಎಸೆಯುವ ದೃಶ್ಯಗಳನ್ನು ಸೆರೆ ಹಿಡಿದು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯನ್ನು ನೀಡುವಲ್ಲಿ ಪ್ರಜ್ಞಾವಂತರ ತಂಡ ಯಶಸ್ವಿಯಾಗಿದೆ.

ಈ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಾಲತಾಣದಲ್ಲಿ “ನಮ್ಮ ನೇತ್ರಾವತಿ ನಮ್ಮ ಜವಾಬ್ದಾರಿ’ ಸ್ಲೋಗನ್‌ ಮೂಲಕ ಅಕ್ರೋಶ ವ್ಯಕ್ತವಾಗುತ್ತಿದೆ.

ಬೆಂಗಳೂರು ನೋಂದಾಯಿತ ಕೆಂಪು ಕಾರಿನಲ್ಲಿ ಬಂದಿದ್ದ ಇಬ್ಬರು ಮಹಿಳೆಯರು ತ್ಯಾಜ್ಯವನ್ನೊಳಗೊಂಡ ಪ್ಲಾಸ್ಟಿಕ್‌ ಚೀಲವನ್ನು ತಂತಿ ಬೇಲಿ ಮೇಲಿನಿಂದ ನದಿಗೆ ಎಸೆಯುವ 15 ಸೆಕೆಂಡ್‌ಗಳ ದೃಶ್ಯ ಇದೀಗ ವೈರಲ್‌ ಆಗಿದ್ದು

ಇದೀಗ ನದಿಗೆ ಕಸವನ್ನು ಎಸೆದ ಬೆಂಗಳೂರು ಮೂಲದ ವಾಹನವನ್ನು ಪತ್ತೆ ಹಚ್ಚಿ ಕಾರಿನಲ್ಲಿದ್ದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

KA 03 NB 4648 Registration ಕಾರಿನಲ್ಲಿ ಬಂದು ಈ ಕೃತ್ಯ ಎಸಗಿರುವವರ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ಆರೋಗ್ಯ ನಿರೀಕ್ಷಕರು ನೀಡಿದ ದೂರಿನ ಆಧಾರದ ಮೇಲೆ ಕಂಕನಾಡಿ ನಗರ ಪೋಲಿಸ್ ಠಾಣೆಯಲ್ಲಿ ವಾಹನವನ್ನು ವಶಕ್ಕೆ ಪಡೆದು ,ಕಾರಿನಲ್ಲಿದ್ದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 8 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ