ಮಂಗಳೂರು ಸಿಸಿಬಿ ವಿರುದ್ದ ಸಿಐಡಿ ತನಿಖೆಗೆ ಆದೇಶ : ದುಬಾರಿ ಕಾರು ಮಾರಾಟ ಮಾಡಿ ಸಿಕ್ಕಿಬಿದ್ರಾ ಅಧಿಕಾರಿಗಳು!

ಮಂಗಳೂರು : ಹಣ ಡಬ್ಲಿಂಗ್ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳಿಂದ ವಶ ಪಡೆದ ಕಾರನ್ನು ಮಾರಾಟ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರ ವಿರುದ್ದ ಇದೀಗ ಡಿಜಿಪಿ ಪ್ರವೀಣ್ ಸೂದ್ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಉದನೆ ಸಮೀಪದಲ್ಲಿ ಹಣ ಡಬ್ಲಿಂಗ್ ಜಾಲದಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ ಕೇರಳ ಮೂಲದ ಆರೋಪಿಗಳನ್ನು ಬಂಧಿಸಲಾಗಿತ್ತು. ಅಲ್ಲದೇ ಬಂಧಿತರಿಂದ ಮೂರು ದುಬಾರಿ ಕಾರುಗಳನ್ನು ವಶಕ್ಕೆ ಪಡೆಯಲಾಗಿತ್ತು. ನಾರ್ಕೋಟಿಕ್ ಠಾಣೆಯ ಪೊಲೀಸರು ಬಿಎಂಡಬ್ಲ್ಯು, ಪೋರ್ಷ್ ಹಾಗೂ ಜಾಗ್ವಾರ್ ಕಾರನ್ನು ವಶಕ್ಕೆ ಪಡೆದಿದ್ದರು. ಆದರೆ ಈ ಪೈಕಿ 50 ಲಕ್ಷ ಮೌಲ್ಯದ ಜಾಗ್ವಾರ್ ಕಾರನ್ನು ಮಾರಾಟ ಮಾಡಲಾಗಿದೆ. ಈ ಡೀಲ್ ನಲ್ಲಿ ಮಂಗಳೂರಿನ ಸಿಸಿಬಿ ಪೊಲೀಸರು ಭಾಗಿಯಾಗಿರುವ ಆರೋಪ ಕೇಳಿಬಂದಿದೆ.

ಸಿಸಿಬಿ ಹಿಂದಿನ ಪಿಎಸ್ ಐ ಕಬ್ಬಾಳ್ ರಾಜ್, ನಾರ್ಕೋಟಿಕ್ ಇನ್ ಸ್ಪೆಕ್ಟರ್ ರಾಮಕೃಷ್ಣ, ಸಿಸಿಬಿಯ ಆಶಿತ್ ಡಿಸೋಜಾ, ರಾಜೇಂದ್ರ ಪ್ರಸಾದ್ ಅವರು ಆರೋಪಿಗಳ ಜೊತೆ ಸೇರಿ ಕಾರನ್ನು ಹೈದ್ರಾಬಾದ್ ಮೂಲದ ವ್ಯಕ್ತಿಗೆ ಮಾರಾಟ ಮಾಡಿರುವ ಆರೋಪ ಕೇಳಿಬಂದಿದೆ. ನಾರ್ಕೋಟಿಕ್ ಠಾಣೆಯಲ್ಲಿ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಮೂಗು ತೂರಿಸಿರೋದು ಅನುಮಾನಗಳನ್ನು ಹುಟ್ಟುಹಾಕಿದೆ.

ಪ್ರಕರಣದ ತನಿಖೆಯ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ಮಂಗಳೂರಿಗೆ ಆಗಮಿಸಿ ತನಿಖೆಯನ್ನು ಆರಂಭಿಸಿದ್ದಾರೆ. ಪ್ರಕರಣದಲ್ಲಿ 4 ಅಧಿಕಾರಿಗಳ ಜೊತೆಗೆ ಇನ್ನಷ್ಟು ಸಿಬ್ಬಂದಿಗಳು ಕೂಡ ಭಾಗಿಯಾಗಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲೀಗ ಸಿಐಡಿ ಅಧಿಕಾರಿಗಳು ಸಮಗ್ರ ತನಿಖೆಗೆ ಮುಂದಾಗಿದ್ದಾರೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ