ಮಂಗಳೂರು ಮರವೂರಿನಲ್ಲಿ ಸೇತುವೆ ಕುಸಿತ! ಮಂಗಳೂರು- ಏರ್‌ಪೋರ್ಟ್ ರಸ್ತೆ ಬಂದ್!

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮರವೂರು ಸೇತುವೆ ಮಂಗಳವಾರ (ಇಂದು) ಮುಂಜಾನೆ ಸುಮಾರು ಮೂರು ಗಂಟೆಗೆ ಕುಸಿತಗೊಂಡಿದ್ದು, ಸಂಚಾರ ನಿರ್ಬಂಧಿಸಲಾಗಿದೆ. ಮಂಗಳೂರು-ಬಜಪೆ-ಕಟೀಲು ಸಂಪರ್ಕ ರಸ್ತೆ ಇದಾಗಿದ್ದು, ಪಲ್ಗುಣಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದೆ.

ಬಜಪೆಯಿಂದ ಮಂಗಳೂರು ಕಡೆಗೆ ಬರುವಾಗ ಸೇತುವೆಯ ಮೊದಲ ಅಂಕಣ ಸುಮಾರು ಮೂರು ಅಡಿ ಕೆಳಗೆ ಕುಸಿದು ನಿಂತಿದೆ. ಕರಾವಳಿಯಲ್ಲಿ ಮೂರು ದಿನದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮೇಲಿನ‌ ಡ್ಯಾಮ್‌ನಿಂದ ಒಂದೇ ಮಗ್ಗುಲಲ್ಲಿ ನೀರು ಹರಿದು ಬರುತ್ತಿತ್ತು.

ಮಂಗಳೂರು ನಗರದಿಂದ ವಿಮಾನ ನಿಲ್ದಾಣ ಬಜಪೆ, ಕಿನ್ನಿಗೋಳಿ, ಕಟೀಲು, ನೆಲ್ಲಿತೀರ್ಥ, ಅದ್ಯಪಾಡಿಗೆ ತೆರಳುವ ಪ್ರಮುಖ ರಸ್ತೆ ಇದಾಗಿದೆ. 

3 ವರ್ಷದಲ್ಲಿ ಕುಸಿದು ಬಿದ್ದ ಎರಡನೇ ಸೇತುವೆ!
2018ಜೂ.26ರಂದು ಬಂಟ್ಬಾಳ ತಾಲೂಕಿನ ಮುಲ್ಲರಪಟ್ನದಲ್ಲಿ ಮಂಗಳೂರು-ಸೋರ್ನಾಡು ಸಂಪರ್ಕಿಸುವ ರಸ್ತೆ ಕುಸಿದು ಬಿದ್ದಿತ್ತು. ಇದೀಗ ಮೂರೇ ವರ್ಷದ ಅಂತರದಲ್ಲಿ ಮತ್ತೊಂದು ಬೃಹತ್ ಸೇತುವೆಗೆ ಹಾನಿಯಾಗಿದೆ. 


ಹಲವು ವರ್ಷಗಳಿಂದ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಮರಳು ಗಾರಿಕೆ ದಂಧೆಯೇ ಸೇತುವೆ ಕುಸಿತಕ್ಕೆ ಕಾರಣವೆನ್ನಲಾಗುತ್ತಿದೆ. ಸೇತುವೆ ಕೆಳಭಾಗದಲ್ಲೇ ಮರಳು ತೆಗೆಯುತ್ತಿದ್ದ ಕಾರಣ ಪಿಲ್ಲರುಗಳು ದುರ್ಬಲವಾಗಿ‌ ಮೂಲರಪಟ್ನ‌ ಸೇತುವೆ ಕುಸಿದು ಬಿದ್ದಿತ್ತು. ಈಗ ಅದೇ ಸರದಿ ಮರವೂರು ಸೇತುವೆಯದ್ದಾಗಿದೆ. ಸ್ಥಳಕ್ಕೆ ಕಾವೂರು-ಬಜಪೆ ಪೊಲೀಸರು ತೆರಳಿದ್ದು, ಈ ರಸ್ತೆಯಲ್ಲಿ ಜನಸಂಚಾರ-ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ. 

ಮಂಗಳೂರು-ಬಜಪೆ-ಕಟೀಲು ಸಂಪರ್ಕ ರಸ್ತೆ ಇದಾಗಿದ್ದು, ಪಲ್ಗುಣಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದೆ. ಮರವೂರು ಸೇತುವೆ ಬಿರುಕಿನಿಂದ ಸಂಚಾರಕ್ಕೆ ಎರಡು ಪರ್ಯಾಯ ಮಾರ್ಗಗಳನ್ನು ಗುರುತಿಸಲಾಗಿದೆ. ಕಾವೂರಿನಿಂದ ಮರವೂರು ಸೇತುವೆಯ ಇನ್ನೊಂದು ಬದಿಗೆ ಹೋಗಲು ಬಯಸುವವರು ಕಾವೂರು-ಕೂಳೂರು-ಕೆಬಿಎಸ್ ಜೋಕಟ್ಟೆ-ಪೋರ್ಕೊಡಿ-ಬಜ್ಪೆ ಮಾರ್ಗ ಅಥವಾ ಪಚ್ಚನಾಡಿ-ವಾಮಂಜೂರು-ಗುರುಪುರ-ಕೈಕಂಬ-ಬಜ್ಪೆ ಮಾರ್ಗವನ್ನು ಬಳಸಬಹುದಾಗಿದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ